Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...