Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...