Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...