Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...