Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...