Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...