Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...