Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...