Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಫ್ಯಾಕ್ಟ್‌ಚೆಕ್: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ.

- Advertisement -
- Advertisement -

ಜೂನ್ 20 ರಂದು ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್ ಏಷ್ಯಾ ನ್ಯೂಸ್ ‘ಭಾರತದೊಂದಿಗಿನ ಸಂಘರ್ಷದ ನಂತರ ಚೀನಾ ಗಡಿಯಲ್ಲಿ ಜಪಾನ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ನಿಯೋಜಿಸಿತು’ ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿತು. ಜಪಾನ್ “ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಲಿದೆ” ಎಂದು ಲೇಖನ ಹೇಳಿದೆ. ಅಂದಿನಿಂದ, ಈ ವರದಿಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಜೂನ್ 22 ರಂದು, ರಿಪಬ್ಲಿಕ್ ಟಿವಿ (ಆರ್ಕೈವ್) ಏಷ್ಯಾ ಟೈಮ್ಸ್ ವರದಿಯನ್ನು ಆಧರಿಸಿ ಲೇಖನವೊಂದನ್ನು ಪ್ರಕಟಿಸಿತು. ಈ ಲೇಖನವನ್ನು 1,200 ಬಾರಿ ರಿಟ್ವೀಟ್ ಮಾಡಲಾಗಿದೆ.

ಏಷ್ಯಾ ನ್ಯೂಸ್‌ನ ಲೇಖನವನ್ನು ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವೀಯ, ಬಿಜೆಪಿ ರಾಷ್ಟ್ರೀಯ ಪ್ಯಾನೆಲಿಸ್ಟ್ ರೋಹಿತ್ ಚಾಹಲ್, ಎಬಿಪಿ ಆಂಕರ್ ನಮ್ರತಾ ವಾಗ್ಲೆ, ನಟ ಪ್ರವೀಣ್ ದಬಾಸ್ ಮತ್ತು ಬ್ಲಾಗರ್ ನಾರಾಯಣನ್ ಹರಿಹರನ್ ಕೂಡ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್

ಏಷ್ಯಾ ನ್ಯೂಸ್‌ನ ಲೇಖನದ ಶೀರ್ಷಿಕೆ ಜಪಾನ್ ಚೀನಾ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸಿದೆ ಎಂದು ಹೇಳಿದೆ. ಆದರೆ ತನ್ನ ಪೂರ್ಣ ವರದಿಯಲ್ಲಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಇನ್ನು ಭಾರತ-ಚೀನಾ ಸಂಘರ್ಷದ ಬಗ್ಗೆ ಆ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಅದರಲ್ಲಿ “ಜಪಾನ್ ಈ ವರ್ಷದ ಜೂನ್ ವೇಳೆಗೆ ನಾಲ್ಕು ಮಿಲಿಟರಿ ನೆಲೆಗಳಲ್ಲಿ ಪೇಟ್ರಿಯಾಟ್ ಪ್ಯಾಕ್ -3 ಎಂಎಸ್ಇ ಏರ್ ಡಿಫೆನ್ಸ್ ಕ್ಷಿಪಣಿ ವ್ಯವಸ್ಥೆಯ ನಿಯೋಜನೆಯನ್ನು ಜಾರಿಗೆ ತರಲಿದೆ” ಎಂದಷ್ಟೇ ಹೇಳಿದೆ. ಇನ್ನಷ್ಟು ವಿವರವಾಗಿ ನೋಡೋಣ.

1) ಪಿಎಸಿ -3 ಎಂಎಸ್‌ಇ ಎಂದರೇನು?

ಜಪಾನ್‌ ರಕ್ಷಣಾ ಸಚಿವಾಲಯದ ಪ್ರಕಾರ, ಪೇಟ್ರಿಯಾಟ್ ಸುಧಾರಿತ ಸಾಮರ್ಥ್ಯದ -3  ವಿಭಾಗದ ಸುಧಾರಿತ ಕ್ಷಿಪಣಿಯಾಗಿದೆ. ಪಿಎಸಿ -3 ವಾಯುಗಾಮಿ ಬೆದರಿಕೆಗಳನ್ನು, ನಿರ್ದಿಷ್ಟವಾಗಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಎದುರಿಸಲು ವಾಯು ರಕ್ಷಣಾ ವ್ಯವಸ್ಥೆಯಾಗಿದೆ. ಇದು ಪಿಎಸಿ -3 ರ ಅಪ್‌ಡೇಟ್‌ ಆವೃತ್ತಿಯಾಗಿದ್ದು, ಇದು ದ್ವಿಗುಣ ಶ್ರೇಣಿಯನ್ನು ಹೊಂದಿದೆ. ‘2017 ಡಿಫೆನ್ಸ್ ಆಫ್ ಜಪಾನ್’ ವರದಿಯಿಂದ ಕೆಳಗೆ ಲಗತ್ತಿಸಲಾದ ಗ್ರಾಫಿಕ್, ಪಿಎಸಿ -3 ಎಂಎಸ್‌ಇ ಸುಧಾರಿತ ಶ್ರೇಣಿಯನ್ನು ತೋರಿಸುತ್ತದೆ.

ಜಪಾನ್

2) ಜಪಾನ್ ಪಿಎಸಿ -3 ಎಂಎಸ್‌ಇ ಅನ್ನು ಯಾವಾಗ ನಿಯೋಜಿಸಿತು?

ಜಪಾನ್‌ನ ವಾಯು ಸ್ವರಕ್ಷಣಾ ಪಡೆಯ ಜನರಲ್ ಅಡ್ಮಿರಲ್ ಯೋಶಿನಾರಿ ಮಾರುಮೊ, ಪಿಎಸಿ -3 ಎಂಎಸ್‌ಇ ಅನ್ನು ಮಾರ್ಚ್‌ನಲ್ಲಿ ಉದ್ಘಾಟಿಸಿದ್ದಾರೆ. ಇದನ್ನು ದಿ ಸಾಂಕಿ ನ್ಯೂಸ್, ಟೋಕಿಯೊ ವೆಬ್, ದಿ ಹೊಕ್ಕೈಡೋ ಶಿಂಬುನ್ ಪ್ರೆಸ್ ಮತ್ತು ಹಲವಾರು ಇತರ ಜಪಾನ್ ವೆಬ್‌ಸೈಟ್‌ಗಳು ವರದಿ ಮಾಡಿವೆ.

ರಾಯಿಟರ್ಸ್ 2016ರ ವರದಿಯ ಪ್ರಕಾರ, ಜಪಾನ್ 2020ರ ಟೋಕಿಯೊ ಒಲಿಂಪಿಕ್ಸ್‌ನ ಸಮಯದಲ್ಲಿ ಪಿಎಸಿ -3 ರಿಂದ ಪಿಎಸಿ -3 ಎಂಎಸ್‌ಇಗೆ ಅಪ್‌ಗ್ರೇಡ್ ಮಾಡುತ್ತಿದೆ, ಈ ಪ್ರದೇಶದಲ್ಲಿ ಉತ್ತರ ಕೊರಿಯಾದ ಕ್ಷಿಪಣಿ ಬೆದರಿಕೆಗೆ ಪ್ರತಿಕ್ರಿಯೆಯಾಗಿ ಇದನ್ನು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿಯೇ ಕ್ಷಿಪಣಿಗಳನ್ನು ನಿಯೋಜಿಸಲಾಗಿದ್ದರಿಂದ, ಇದನ್ನು ಇತ್ತೀಚಿನ ಭಾರತ-ಚೀನಾ ವಿವಾದೊಂದಿಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಹೀಗಾಗಿ, ಚೀನಾ ಗಡಿಯಲ್ಲಿ ಪಿಎಸಿ -3 ಎಂಎಸ್‌ಇ ಕ್ಷಿಪಣಿಗಳನ್ನು ನಿಯೋಜಿಸಲಾಗಿದೆ ಎಂಬ ಏಷ್ಯಾ ನ್ಯೂಸ್ ಹೇಳಿಕೆಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ.

3) ಏಷ್ಯಾ ನ್ಯೂಸ್ ಯಾವುದು?

ಏಷ್ಯಾ ನ್ಯೂಸ್ ವೆಬ್‌ಸೈಟ್‌ನಲ್ಲಿನ ಎಲ್ಲಾ ಲೇಖನಗಳ ಬೈಲೈನ್‌ಗಳು ಒಂದೇ ಆಗಿರುತ್ತವೆ. ಇದು ಥೈಲ್ಯಾಂಡ್ ಮೂಲದ ವೆಬ್‌ಸೈಟ್ ಆಗಿದ್ದು ಥೈಲ್ಯಾಂಡ್, ಭಾರತ, ನೇಪಾಳ, ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಇಂಡೋನೇಷ್ಯಾದಿಂದ ಸುದ್ದಿಗಳನ್ನು ಒಳಗೊಂಡಿದೆ ಎಂದು ಹೇಳುತ್ತದೆ. ಆದರೂ ಕಳೆದ ಆರು ತಿಂಗಳಲ್ಲಿ, ಅದರ ಪರಿಶೀಲಿಸದ ಯೂಟ್ಯೂಬ್ ಚಾನೆಲ್‌ನಲ್ಲಿ (ಆರ್ಕೈವ್ ಲಿಂಕ್) ಅಪ್‌ಲೋಡ್ ಮಾಡಲಾದ ಎಲ್ಲಾ ವೀಡಿಯೊಗಳು ಭಾರತಕ್ಕೆ ಸಂಬಂಧಿಸಿವೆ. ವಾಸ್ತವವಾಗಿ, ಕೊನೆಯ ವೀಡಿಯೊವನ್ನು ಹಿಂದಿಯಲ್ಲಿ ಮಾಡಲಾಗಿದ್ದು, ಥೈಲ್ಯಾಂಡ್ ಮೂಲದ ಸುದ್ದಿ ವೆಬ್‌ಸೈಟ್‌ಗೆ ವಿರುದ್ಧವಾಗಿದೆ.

ಈ ಏಷ್ಯಾನ್ಯೂಸ್ ಈ ಲೇಖನದಲ್ಲಿ ತನ್ನ ಸುದ್ದಿಯ ಮೂಲವನ್ನು ಉಲ್ಲೇಖಿಸಿಲ್ಲ. ಅದು ಬೇಕಂತಲೇ ಭಾರತ ಚೀನಾದೊಂದಿಗೆ ಸಂಬಂಧ ಬೆಸೆಯಲು ಈ ಸುಳ್ಳು ಸುದ್ದಿಯನ್ನು ಎಣೆದಿದೆ ಎಂದು ಆಲ್ಟ್‌ನ್ಯೂಸ್‌ ವಿವರವಾಗಿ ಫ್ಯಾಕ್ಟ್‌ಚೆಕ್ ನಡೆಸಿದೆ.

ಕೃಪೆ: ಆಲ್ಟ್‌ನ್ಯೂಸ್


ಇದನ್ನೂ ಓದಿ: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಕಿತ್ತೆಸೆದರೆ ಮುಖೇಶ್ ಅಂಬಾನಿ ?; ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....