Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ...

FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ ಏನು?

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಪ್ರೇಮಪುರ ರೈಲು ನಿಲ್ದಾಣದ ಬಳಿ ರೈಲು ಹಳಿ ಮೇಲೆ 5 ಕೆ.ಜಿಯ ಖಾಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾಗಿತ್ತು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಇದಕ್ಕೂ ಮುನ್ನ, ಕಳೆದ ಒಂದೆರಡು ವರ್ಷಗಳಿಂದ ದೇಶದ ಹಲವೆಡೆ ರೈಲು ಹಳಿಗಳ ಮೇಲೆ ವಿವಿಧ ವಸ್ತುಗಳನ್ನು ಇಟ್ಟ ಪ್ರಕರಣಗಳು ವರದಿಯಾಗುತ್ತಿವೆ.

ಈ ನಡುವೆ ಉತ್ತರ ಪ್ರದೇಶದ ರಾಂಪುರ ಬಳಿ ರೈಲು ಹಳಿ ಮೇಲೆ ಕಬ್ಬಿಣದ ಕಂಬವನ್ನು ಇಟ್ಟು ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಫೋಟೋವೊಂದು ವೈರಲ್ ಆಗುತ್ತಿದೆ.

ಸೆಪ್ಟೆಂಬರ್ 21ರಂದು ಫೇಸ್‌ಬುಕ್‌ನಲ್ಲಿ ಫೋಟೋ ಹಂಚಿಕೊಂಡಿರುವ ‘ಆನಂದಗಿರಿ ರಾಮೇಗೌಡ‘ ಎಂಬವರು ” ಉತ್ತರ ಪ್ರದೇಶದ ರಾಂಪುರದಲ್ಲಿ ರೈಲ್ವೇ ಪಲ್ಟಿ ಮಾಡಬೇಕು ಅಂತ ಜೀ ಹಾದಿಗಳು ರೈಲ್ವೆ ಹಳಿ ಮೇಲೆ ಸುಮಾರು 8 ರಿಂದ 9 ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟಿದ್ದಾರೆ. ಆದರೆ, ಡೆಹ್ರಾಡೂನ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್‌ನ ಜಾಣತನದಿಂದ ಅನಾಹುತ ತಪ್ಪಿದೆ. ಲೊಕೊ ಪೈಲಟ್ ಕಬ್ಬಿಣದ ಕಂಬವನ್ನು ನೋಡಿದ ತಕ್ಷಣ ತುರ್ತು ಬ್ರೇಕ್ ಹಾಕುವ ಮೂಲಕ ರೈಲನ್ನು ನಿಲ್ಲಿಸಿದರು. ಆದರೆ ಎಷ್ಟು ಕಾಲ? ಎಲ್ಲಿಯವರೆಗೆ, ಎಲ್ಲಿ ಮತ್ತು ಹೇಗೆ ನಾವು ಉಳಿಸಲ್ಪಡುತ್ತೇವೆ ಏಕೆಂದರೆ ಅವರು ನಮ್ಮನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದಾರೆ!” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 19ರಂದು ಅದೇ ಪೋಟೋವನ್ನು ಜೈ ಶ್ರೀರಾಮ್ ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು “ಮುಖ ಮುಚ್ಚಿಕೊಂಡು ಪ್ರೀತಿಯ ಬಗ್ಗೆ ಮಾತನಾಡುವ ಮುಲ್ಲಾಗಳು ಎಲ್ಲಿದ್ದಾರೆ? ಇಂದು ಸಾವಿರಾರು ಹಿಂದೂಗಳ ಜೀವ ಉಳಿದಿದೆ. ರೈಲನ್ನು ಉರುಳಿಸುವ ಉದ್ದೇಶದಿಂದ ರಾಂಪುರದ ಮುಸ್ಲಿಂ ಕಾಲೋನಿಯ ಹಿಂದೆ ಹಾದು ಹೋಗುವ ರೈಲು ಮಾರ್ಗದ ಮೇಲೆ ಉಗ್ರರು ಕಬ್ಬಿಣದ ಕಂಬವನ್ನು ಹಾಕಿದ್ದರು. ಆದರೆ, ಡೆಹ್ರಡೂನ್‌ ಎಕ್ಸ್‌ಪ್ರೆಸ್ ಲೋಕೋ ಪೈಲಟ್ ಸರಿಯಾದ ಸಮಯಕ್ಕೆ ತುರ್ತು ಬ್ರೇಕ್ ಹಾಕುವ ಮೂಲಕ ಸಾವಿರಾರು ಹಿಂದೂಗಳ ಪ್ರಾಣ ಉಳಿಸಿದ್ದಾರೆ. ರೈಲ್ವೆ ಸಚಿವಾಲಯ ಕಣ್ಣು ತೆರೆಯುವುದು ಯಾವಾಗ?” ಎಂದು ಬರೆಯಲಾಗಿತ್ತು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದೇ ಫೋಟೋ ಹಂಚಿಕೊಂಡು ಮುಸ್ಲಿಮರು ರೈಲನ್ನು ಹಳಿ ತಪ್ಪಿಸುವ ಉದ್ದೇಶದಿಂದ ಹಳಿ ಮೇಲೆ ಕಬ್ಬಿಣದ ಕಂಬ ಇಟ್ಟಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಫೋಟೋ ಕುರಿತು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹಲವು ವರದಿಗಳು ಲಭ್ಯವಾಗಿದೆ.

ಸೆಪ್ಟೆಂಬರ್ 22, 2024ರಂದು ಎಬಿಪಿ ನ್ಯೂಸ್ ಪ್ರಕಟಿಸಿದ ವರದಿಯ ಪ್ರಕಾರ, “ಸೆಪ್ಟೆಂಬರ್ 18ರಂದು ಬಿಲಾಸ್‌ಪುರ ರಸ್ತೆ ಮತ್ತು ರುದ್ರಾಪುರ ರೈಲು ನಿಲ್ದಾಣಗಳ ನಡುವೆ ಹಳಿಯಲ್ಲಿ ಆರು ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟು ನೈನಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿತ್ತು. ಈ ಘಟನೆ ಸಂಬಂಧಿಸಿದಂತೆ ರಾಂಪುರ ಜಿಲ್ಲೆಯ ನಿವಾಸಿಗಳಾದ ಸನ್ನಿ ಅಲಿಯಾಸ್ ಸಾನಿಯಾ ಅಲಿಯಾಸ್ ಸಂದೀಪ್ ಚೌಹಾಣ್ ಮತ್ತು ಬಿಜೇಂದ್ರ ಅಲಿಯಾಸ್ ಟಿಂಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ”

“ಆರೋಪಿಗಳು ಕಬ್ಬಿಣದ ಕಂಬವನ್ನು ಕಳ್ಳತನ ಮಾಡಿ ಕೊಂಡೊಯ್ಯುತ್ತಿದ್ದರು. ಆಗ ರೈಲಿನ ಹಾರ್ನ್ ಕೇಳಿದೆ. ಆದ್ದರಿಂದ ಕಂಬವನ್ನು ಹಳಿ ಮೇಲೆ ಬಿಟ್ಟು ಓಡಿ ಹೋಗಿದ್ದಾರೆ. ರೈಲು ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ರಾಂಪುರದಿಂದ ಸುಮಾರಿ 43 ಕಿ.ಮೀ ದೂರದಲ್ಲಿರುವ ರುದ್ರಪುರ ಸಿಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಸೆಪ್ಟೆಂಬರ್ 22, 2024ರಂದು ಈಟಿವಿ ಭಾರತ್ ಉತ್ತರ ಪ್ರದೇಶ ಪ್ರಕಟಿಸಿದ ಮತ್ತೊಂದು ವರದಿ ನಮಗೆ ಲಭ್ಯವಾಗಿದೆ ” ಅದರಲ್ಲೂ ಆರೋಪಿಗಳು ಕಬ್ಬಿಣದ ಕಂಬವನ್ನು ಕದ್ದೊಯ್ಯುವಾಗ ರೈಲು ಬಂದ ಹಿನ್ನೆಲೆ, ಅದನ್ನು ಹಳಿಯಲ್ಲಿ ಬಿಟ್ಟು ಹೋಗಿದ್ದಾರೆ” ಎಂದು ತಿಳಿಸಲಾಗಿದೆ.

“ಘಟನೆಯಲ್ಲಿ ಆರೋಪಿಗಳಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಆರೋಪಿ ಸಂದೀಪ್ ವಿರುದ್ದ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ 14 ಪ್ರಕರಣಗಳು ದಾಖಲಾಗಿದ್ದು, ಆತ ಕ್ರಿಮಿನಲ್ ಸ್ವಭಾವದ ವ್ಯಕ್ತಿ. ಎರಡನೇ ಆರೋಪಿ ವಿಜಯೇಂದ್ರ ವಿರುದ್ದ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಮ್ಮ ಮಾದಕ ವ್ಯಸನವನ್ನು ಪೂರೈಸಲು ಕಬ್ಬಿಣದ ಕಂಬವನ್ನು ಕದಿದ್ದರು. ಅದನ್ನು ತೆಗೆದುಕೊಂಡು ಹೋಗುವಾಗ ರೈಲು ಬಂದಿದ್ದು, ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ” ಎಂದು ಮೊರಾದಾಬಾದ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ವರ್ಮಾ ಹೇಳಿರುವುದಾಗಿ ವರದಿಯಲ್ಲಿದೆ.

ಇನ್ನೂ ಕೆಲ ಮಾಧ್ಯಮ ವರದಿಗಳಿಂದ ಆರೋಪಿಗಳು ಮುಸ್ಲಿಮರಲ್ಲ ಮತ್ತು ಅವರಿಗೆ ರೈಲು ಹಳಿ ತಪ್ಪಿಸುವ ಉದ್ದೇಶ ಇರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...