Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ...

FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ ಏನು?

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಪ್ರೇಮಪುರ ರೈಲು ನಿಲ್ದಾಣದ ಬಳಿ ರೈಲು ಹಳಿ ಮೇಲೆ 5 ಕೆ.ಜಿಯ ಖಾಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾಗಿತ್ತು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಇದಕ್ಕೂ ಮುನ್ನ, ಕಳೆದ ಒಂದೆರಡು ವರ್ಷಗಳಿಂದ ದೇಶದ ಹಲವೆಡೆ ರೈಲು ಹಳಿಗಳ ಮೇಲೆ ವಿವಿಧ ವಸ್ತುಗಳನ್ನು ಇಟ್ಟ ಪ್ರಕರಣಗಳು ವರದಿಯಾಗುತ್ತಿವೆ.

ಈ ನಡುವೆ ಉತ್ತರ ಪ್ರದೇಶದ ರಾಂಪುರ ಬಳಿ ರೈಲು ಹಳಿ ಮೇಲೆ ಕಬ್ಬಿಣದ ಕಂಬವನ್ನು ಇಟ್ಟು ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಫೋಟೋವೊಂದು ವೈರಲ್ ಆಗುತ್ತಿದೆ.

ಸೆಪ್ಟೆಂಬರ್ 21ರಂದು ಫೇಸ್‌ಬುಕ್‌ನಲ್ಲಿ ಫೋಟೋ ಹಂಚಿಕೊಂಡಿರುವ ‘ಆನಂದಗಿರಿ ರಾಮೇಗೌಡ‘ ಎಂಬವರು ” ಉತ್ತರ ಪ್ರದೇಶದ ರಾಂಪುರದಲ್ಲಿ ರೈಲ್ವೇ ಪಲ್ಟಿ ಮಾಡಬೇಕು ಅಂತ ಜೀ ಹಾದಿಗಳು ರೈಲ್ವೆ ಹಳಿ ಮೇಲೆ ಸುಮಾರು 8 ರಿಂದ 9 ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟಿದ್ದಾರೆ. ಆದರೆ, ಡೆಹ್ರಾಡೂನ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್‌ನ ಜಾಣತನದಿಂದ ಅನಾಹುತ ತಪ್ಪಿದೆ. ಲೊಕೊ ಪೈಲಟ್ ಕಬ್ಬಿಣದ ಕಂಬವನ್ನು ನೋಡಿದ ತಕ್ಷಣ ತುರ್ತು ಬ್ರೇಕ್ ಹಾಕುವ ಮೂಲಕ ರೈಲನ್ನು ನಿಲ್ಲಿಸಿದರು. ಆದರೆ ಎಷ್ಟು ಕಾಲ? ಎಲ್ಲಿಯವರೆಗೆ, ಎಲ್ಲಿ ಮತ್ತು ಹೇಗೆ ನಾವು ಉಳಿಸಲ್ಪಡುತ್ತೇವೆ ಏಕೆಂದರೆ ಅವರು ನಮ್ಮನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದಾರೆ!” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 19ರಂದು ಅದೇ ಪೋಟೋವನ್ನು ಜೈ ಶ್ರೀರಾಮ್ ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು “ಮುಖ ಮುಚ್ಚಿಕೊಂಡು ಪ್ರೀತಿಯ ಬಗ್ಗೆ ಮಾತನಾಡುವ ಮುಲ್ಲಾಗಳು ಎಲ್ಲಿದ್ದಾರೆ? ಇಂದು ಸಾವಿರಾರು ಹಿಂದೂಗಳ ಜೀವ ಉಳಿದಿದೆ. ರೈಲನ್ನು ಉರುಳಿಸುವ ಉದ್ದೇಶದಿಂದ ರಾಂಪುರದ ಮುಸ್ಲಿಂ ಕಾಲೋನಿಯ ಹಿಂದೆ ಹಾದು ಹೋಗುವ ರೈಲು ಮಾರ್ಗದ ಮೇಲೆ ಉಗ್ರರು ಕಬ್ಬಿಣದ ಕಂಬವನ್ನು ಹಾಕಿದ್ದರು. ಆದರೆ, ಡೆಹ್ರಡೂನ್‌ ಎಕ್ಸ್‌ಪ್ರೆಸ್ ಲೋಕೋ ಪೈಲಟ್ ಸರಿಯಾದ ಸಮಯಕ್ಕೆ ತುರ್ತು ಬ್ರೇಕ್ ಹಾಕುವ ಮೂಲಕ ಸಾವಿರಾರು ಹಿಂದೂಗಳ ಪ್ರಾಣ ಉಳಿಸಿದ್ದಾರೆ. ರೈಲ್ವೆ ಸಚಿವಾಲಯ ಕಣ್ಣು ತೆರೆಯುವುದು ಯಾವಾಗ?” ಎಂದು ಬರೆಯಲಾಗಿತ್ತು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದೇ ಫೋಟೋ ಹಂಚಿಕೊಂಡು ಮುಸ್ಲಿಮರು ರೈಲನ್ನು ಹಳಿ ತಪ್ಪಿಸುವ ಉದ್ದೇಶದಿಂದ ಹಳಿ ಮೇಲೆ ಕಬ್ಬಿಣದ ಕಂಬ ಇಟ್ಟಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಫೋಟೋ ಕುರಿತು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹಲವು ವರದಿಗಳು ಲಭ್ಯವಾಗಿದೆ.

ಸೆಪ್ಟೆಂಬರ್ 22, 2024ರಂದು ಎಬಿಪಿ ನ್ಯೂಸ್ ಪ್ರಕಟಿಸಿದ ವರದಿಯ ಪ್ರಕಾರ, “ಸೆಪ್ಟೆಂಬರ್ 18ರಂದು ಬಿಲಾಸ್‌ಪುರ ರಸ್ತೆ ಮತ್ತು ರುದ್ರಾಪುರ ರೈಲು ನಿಲ್ದಾಣಗಳ ನಡುವೆ ಹಳಿಯಲ್ಲಿ ಆರು ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟು ನೈನಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿತ್ತು. ಈ ಘಟನೆ ಸಂಬಂಧಿಸಿದಂತೆ ರಾಂಪುರ ಜಿಲ್ಲೆಯ ನಿವಾಸಿಗಳಾದ ಸನ್ನಿ ಅಲಿಯಾಸ್ ಸಾನಿಯಾ ಅಲಿಯಾಸ್ ಸಂದೀಪ್ ಚೌಹಾಣ್ ಮತ್ತು ಬಿಜೇಂದ್ರ ಅಲಿಯಾಸ್ ಟಿಂಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ”

“ಆರೋಪಿಗಳು ಕಬ್ಬಿಣದ ಕಂಬವನ್ನು ಕಳ್ಳತನ ಮಾಡಿ ಕೊಂಡೊಯ್ಯುತ್ತಿದ್ದರು. ಆಗ ರೈಲಿನ ಹಾರ್ನ್ ಕೇಳಿದೆ. ಆದ್ದರಿಂದ ಕಂಬವನ್ನು ಹಳಿ ಮೇಲೆ ಬಿಟ್ಟು ಓಡಿ ಹೋಗಿದ್ದಾರೆ. ರೈಲು ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ರಾಂಪುರದಿಂದ ಸುಮಾರಿ 43 ಕಿ.ಮೀ ದೂರದಲ್ಲಿರುವ ರುದ್ರಪುರ ಸಿಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಸೆಪ್ಟೆಂಬರ್ 22, 2024ರಂದು ಈಟಿವಿ ಭಾರತ್ ಉತ್ತರ ಪ್ರದೇಶ ಪ್ರಕಟಿಸಿದ ಮತ್ತೊಂದು ವರದಿ ನಮಗೆ ಲಭ್ಯವಾಗಿದೆ ” ಅದರಲ್ಲೂ ಆರೋಪಿಗಳು ಕಬ್ಬಿಣದ ಕಂಬವನ್ನು ಕದ್ದೊಯ್ಯುವಾಗ ರೈಲು ಬಂದ ಹಿನ್ನೆಲೆ, ಅದನ್ನು ಹಳಿಯಲ್ಲಿ ಬಿಟ್ಟು ಹೋಗಿದ್ದಾರೆ” ಎಂದು ತಿಳಿಸಲಾಗಿದೆ.

“ಘಟನೆಯಲ್ಲಿ ಆರೋಪಿಗಳಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಆರೋಪಿ ಸಂದೀಪ್ ವಿರುದ್ದ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ 14 ಪ್ರಕರಣಗಳು ದಾಖಲಾಗಿದ್ದು, ಆತ ಕ್ರಿಮಿನಲ್ ಸ್ವಭಾವದ ವ್ಯಕ್ತಿ. ಎರಡನೇ ಆರೋಪಿ ವಿಜಯೇಂದ್ರ ವಿರುದ್ದ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಮ್ಮ ಮಾದಕ ವ್ಯಸನವನ್ನು ಪೂರೈಸಲು ಕಬ್ಬಿಣದ ಕಂಬವನ್ನು ಕದಿದ್ದರು. ಅದನ್ನು ತೆಗೆದುಕೊಂಡು ಹೋಗುವಾಗ ರೈಲು ಬಂದಿದ್ದು, ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ” ಎಂದು ಮೊರಾದಾಬಾದ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ವರ್ಮಾ ಹೇಳಿರುವುದಾಗಿ ವರದಿಯಲ್ಲಿದೆ.

ಇನ್ನೂ ಕೆಲ ಮಾಧ್ಯಮ ವರದಿಗಳಿಂದ ಆರೋಪಿಗಳು ಮುಸ್ಲಿಮರಲ್ಲ ಮತ್ತು ಅವರಿಗೆ ರೈಲು ಹಳಿ ತಪ್ಪಿಸುವ ಉದ್ದೇಶ ಇರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...