Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ...

FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ ಏನು?

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಪ್ರೇಮಪುರ ರೈಲು ನಿಲ್ದಾಣದ ಬಳಿ ರೈಲು ಹಳಿ ಮೇಲೆ 5 ಕೆ.ಜಿಯ ಖಾಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾಗಿತ್ತು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಇದಕ್ಕೂ ಮುನ್ನ, ಕಳೆದ ಒಂದೆರಡು ವರ್ಷಗಳಿಂದ ದೇಶದ ಹಲವೆಡೆ ರೈಲು ಹಳಿಗಳ ಮೇಲೆ ವಿವಿಧ ವಸ್ತುಗಳನ್ನು ಇಟ್ಟ ಪ್ರಕರಣಗಳು ವರದಿಯಾಗುತ್ತಿವೆ.

ಈ ನಡುವೆ ಉತ್ತರ ಪ್ರದೇಶದ ರಾಂಪುರ ಬಳಿ ರೈಲು ಹಳಿ ಮೇಲೆ ಕಬ್ಬಿಣದ ಕಂಬವನ್ನು ಇಟ್ಟು ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಫೋಟೋವೊಂದು ವೈರಲ್ ಆಗುತ್ತಿದೆ.

ಸೆಪ್ಟೆಂಬರ್ 21ರಂದು ಫೇಸ್‌ಬುಕ್‌ನಲ್ಲಿ ಫೋಟೋ ಹಂಚಿಕೊಂಡಿರುವ ‘ಆನಂದಗಿರಿ ರಾಮೇಗೌಡ‘ ಎಂಬವರು ” ಉತ್ತರ ಪ್ರದೇಶದ ರಾಂಪುರದಲ್ಲಿ ರೈಲ್ವೇ ಪಲ್ಟಿ ಮಾಡಬೇಕು ಅಂತ ಜೀ ಹಾದಿಗಳು ರೈಲ್ವೆ ಹಳಿ ಮೇಲೆ ಸುಮಾರು 8 ರಿಂದ 9 ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟಿದ್ದಾರೆ. ಆದರೆ, ಡೆಹ್ರಾಡೂನ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್‌ನ ಜಾಣತನದಿಂದ ಅನಾಹುತ ತಪ್ಪಿದೆ. ಲೊಕೊ ಪೈಲಟ್ ಕಬ್ಬಿಣದ ಕಂಬವನ್ನು ನೋಡಿದ ತಕ್ಷಣ ತುರ್ತು ಬ್ರೇಕ್ ಹಾಕುವ ಮೂಲಕ ರೈಲನ್ನು ನಿಲ್ಲಿಸಿದರು. ಆದರೆ ಎಷ್ಟು ಕಾಲ? ಎಲ್ಲಿಯವರೆಗೆ, ಎಲ್ಲಿ ಮತ್ತು ಹೇಗೆ ನಾವು ಉಳಿಸಲ್ಪಡುತ್ತೇವೆ ಏಕೆಂದರೆ ಅವರು ನಮ್ಮನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದಾರೆ!” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 19ರಂದು ಅದೇ ಪೋಟೋವನ್ನು ಜೈ ಶ್ರೀರಾಮ್ ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು “ಮುಖ ಮುಚ್ಚಿಕೊಂಡು ಪ್ರೀತಿಯ ಬಗ್ಗೆ ಮಾತನಾಡುವ ಮುಲ್ಲಾಗಳು ಎಲ್ಲಿದ್ದಾರೆ? ಇಂದು ಸಾವಿರಾರು ಹಿಂದೂಗಳ ಜೀವ ಉಳಿದಿದೆ. ರೈಲನ್ನು ಉರುಳಿಸುವ ಉದ್ದೇಶದಿಂದ ರಾಂಪುರದ ಮುಸ್ಲಿಂ ಕಾಲೋನಿಯ ಹಿಂದೆ ಹಾದು ಹೋಗುವ ರೈಲು ಮಾರ್ಗದ ಮೇಲೆ ಉಗ್ರರು ಕಬ್ಬಿಣದ ಕಂಬವನ್ನು ಹಾಕಿದ್ದರು. ಆದರೆ, ಡೆಹ್ರಡೂನ್‌ ಎಕ್ಸ್‌ಪ್ರೆಸ್ ಲೋಕೋ ಪೈಲಟ್ ಸರಿಯಾದ ಸಮಯಕ್ಕೆ ತುರ್ತು ಬ್ರೇಕ್ ಹಾಕುವ ಮೂಲಕ ಸಾವಿರಾರು ಹಿಂದೂಗಳ ಪ್ರಾಣ ಉಳಿಸಿದ್ದಾರೆ. ರೈಲ್ವೆ ಸಚಿವಾಲಯ ಕಣ್ಣು ತೆರೆಯುವುದು ಯಾವಾಗ?” ಎಂದು ಬರೆಯಲಾಗಿತ್ತು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದೇ ಫೋಟೋ ಹಂಚಿಕೊಂಡು ಮುಸ್ಲಿಮರು ರೈಲನ್ನು ಹಳಿ ತಪ್ಪಿಸುವ ಉದ್ದೇಶದಿಂದ ಹಳಿ ಮೇಲೆ ಕಬ್ಬಿಣದ ಕಂಬ ಇಟ್ಟಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಫೋಟೋ ಕುರಿತು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹಲವು ವರದಿಗಳು ಲಭ್ಯವಾಗಿದೆ.

ಸೆಪ್ಟೆಂಬರ್ 22, 2024ರಂದು ಎಬಿಪಿ ನ್ಯೂಸ್ ಪ್ರಕಟಿಸಿದ ವರದಿಯ ಪ್ರಕಾರ, “ಸೆಪ್ಟೆಂಬರ್ 18ರಂದು ಬಿಲಾಸ್‌ಪುರ ರಸ್ತೆ ಮತ್ತು ರುದ್ರಾಪುರ ರೈಲು ನಿಲ್ದಾಣಗಳ ನಡುವೆ ಹಳಿಯಲ್ಲಿ ಆರು ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟು ನೈನಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿತ್ತು. ಈ ಘಟನೆ ಸಂಬಂಧಿಸಿದಂತೆ ರಾಂಪುರ ಜಿಲ್ಲೆಯ ನಿವಾಸಿಗಳಾದ ಸನ್ನಿ ಅಲಿಯಾಸ್ ಸಾನಿಯಾ ಅಲಿಯಾಸ್ ಸಂದೀಪ್ ಚೌಹಾಣ್ ಮತ್ತು ಬಿಜೇಂದ್ರ ಅಲಿಯಾಸ್ ಟಿಂಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ”

“ಆರೋಪಿಗಳು ಕಬ್ಬಿಣದ ಕಂಬವನ್ನು ಕಳ್ಳತನ ಮಾಡಿ ಕೊಂಡೊಯ್ಯುತ್ತಿದ್ದರು. ಆಗ ರೈಲಿನ ಹಾರ್ನ್ ಕೇಳಿದೆ. ಆದ್ದರಿಂದ ಕಂಬವನ್ನು ಹಳಿ ಮೇಲೆ ಬಿಟ್ಟು ಓಡಿ ಹೋಗಿದ್ದಾರೆ. ರೈಲು ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ರಾಂಪುರದಿಂದ ಸುಮಾರಿ 43 ಕಿ.ಮೀ ದೂರದಲ್ಲಿರುವ ರುದ್ರಪುರ ಸಿಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಸೆಪ್ಟೆಂಬರ್ 22, 2024ರಂದು ಈಟಿವಿ ಭಾರತ್ ಉತ್ತರ ಪ್ರದೇಶ ಪ್ರಕಟಿಸಿದ ಮತ್ತೊಂದು ವರದಿ ನಮಗೆ ಲಭ್ಯವಾಗಿದೆ ” ಅದರಲ್ಲೂ ಆರೋಪಿಗಳು ಕಬ್ಬಿಣದ ಕಂಬವನ್ನು ಕದ್ದೊಯ್ಯುವಾಗ ರೈಲು ಬಂದ ಹಿನ್ನೆಲೆ, ಅದನ್ನು ಹಳಿಯಲ್ಲಿ ಬಿಟ್ಟು ಹೋಗಿದ್ದಾರೆ” ಎಂದು ತಿಳಿಸಲಾಗಿದೆ.

“ಘಟನೆಯಲ್ಲಿ ಆರೋಪಿಗಳಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಆರೋಪಿ ಸಂದೀಪ್ ವಿರುದ್ದ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ 14 ಪ್ರಕರಣಗಳು ದಾಖಲಾಗಿದ್ದು, ಆತ ಕ್ರಿಮಿನಲ್ ಸ್ವಭಾವದ ವ್ಯಕ್ತಿ. ಎರಡನೇ ಆರೋಪಿ ವಿಜಯೇಂದ್ರ ವಿರುದ್ದ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಮ್ಮ ಮಾದಕ ವ್ಯಸನವನ್ನು ಪೂರೈಸಲು ಕಬ್ಬಿಣದ ಕಂಬವನ್ನು ಕದಿದ್ದರು. ಅದನ್ನು ತೆಗೆದುಕೊಂಡು ಹೋಗುವಾಗ ರೈಲು ಬಂದಿದ್ದು, ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ” ಎಂದು ಮೊರಾದಾಬಾದ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ವರ್ಮಾ ಹೇಳಿರುವುದಾಗಿ ವರದಿಯಲ್ಲಿದೆ.

ಇನ್ನೂ ಕೆಲ ಮಾಧ್ಯಮ ವರದಿಗಳಿಂದ ಆರೋಪಿಗಳು ಮುಸ್ಲಿಮರಲ್ಲ ಮತ್ತು ಅವರಿಗೆ ರೈಲು ಹಳಿ ತಪ್ಪಿಸುವ ಉದ್ದೇಶ ಇರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...