Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ...

FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ ಏನು?

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಪ್ರೇಮಪುರ ರೈಲು ನಿಲ್ದಾಣದ ಬಳಿ ರೈಲು ಹಳಿ ಮೇಲೆ 5 ಕೆ.ಜಿಯ ಖಾಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾಗಿತ್ತು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಇದಕ್ಕೂ ಮುನ್ನ, ಕಳೆದ ಒಂದೆರಡು ವರ್ಷಗಳಿಂದ ದೇಶದ ಹಲವೆಡೆ ರೈಲು ಹಳಿಗಳ ಮೇಲೆ ವಿವಿಧ ವಸ್ತುಗಳನ್ನು ಇಟ್ಟ ಪ್ರಕರಣಗಳು ವರದಿಯಾಗುತ್ತಿವೆ.

ಈ ನಡುವೆ ಉತ್ತರ ಪ್ರದೇಶದ ರಾಂಪುರ ಬಳಿ ರೈಲು ಹಳಿ ಮೇಲೆ ಕಬ್ಬಿಣದ ಕಂಬವನ್ನು ಇಟ್ಟು ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಫೋಟೋವೊಂದು ವೈರಲ್ ಆಗುತ್ತಿದೆ.

ಸೆಪ್ಟೆಂಬರ್ 21ರಂದು ಫೇಸ್‌ಬುಕ್‌ನಲ್ಲಿ ಫೋಟೋ ಹಂಚಿಕೊಂಡಿರುವ ‘ಆನಂದಗಿರಿ ರಾಮೇಗೌಡ‘ ಎಂಬವರು ” ಉತ್ತರ ಪ್ರದೇಶದ ರಾಂಪುರದಲ್ಲಿ ರೈಲ್ವೇ ಪಲ್ಟಿ ಮಾಡಬೇಕು ಅಂತ ಜೀ ಹಾದಿಗಳು ರೈಲ್ವೆ ಹಳಿ ಮೇಲೆ ಸುಮಾರು 8 ರಿಂದ 9 ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟಿದ್ದಾರೆ. ಆದರೆ, ಡೆಹ್ರಾಡೂನ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್‌ನ ಜಾಣತನದಿಂದ ಅನಾಹುತ ತಪ್ಪಿದೆ. ಲೊಕೊ ಪೈಲಟ್ ಕಬ್ಬಿಣದ ಕಂಬವನ್ನು ನೋಡಿದ ತಕ್ಷಣ ತುರ್ತು ಬ್ರೇಕ್ ಹಾಕುವ ಮೂಲಕ ರೈಲನ್ನು ನಿಲ್ಲಿಸಿದರು. ಆದರೆ ಎಷ್ಟು ಕಾಲ? ಎಲ್ಲಿಯವರೆಗೆ, ಎಲ್ಲಿ ಮತ್ತು ಹೇಗೆ ನಾವು ಉಳಿಸಲ್ಪಡುತ್ತೇವೆ ಏಕೆಂದರೆ ಅವರು ನಮ್ಮನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದಾರೆ!” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 19ರಂದು ಅದೇ ಪೋಟೋವನ್ನು ಜೈ ಶ್ರೀರಾಮ್ ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು “ಮುಖ ಮುಚ್ಚಿಕೊಂಡು ಪ್ರೀತಿಯ ಬಗ್ಗೆ ಮಾತನಾಡುವ ಮುಲ್ಲಾಗಳು ಎಲ್ಲಿದ್ದಾರೆ? ಇಂದು ಸಾವಿರಾರು ಹಿಂದೂಗಳ ಜೀವ ಉಳಿದಿದೆ. ರೈಲನ್ನು ಉರುಳಿಸುವ ಉದ್ದೇಶದಿಂದ ರಾಂಪುರದ ಮುಸ್ಲಿಂ ಕಾಲೋನಿಯ ಹಿಂದೆ ಹಾದು ಹೋಗುವ ರೈಲು ಮಾರ್ಗದ ಮೇಲೆ ಉಗ್ರರು ಕಬ್ಬಿಣದ ಕಂಬವನ್ನು ಹಾಕಿದ್ದರು. ಆದರೆ, ಡೆಹ್ರಡೂನ್‌ ಎಕ್ಸ್‌ಪ್ರೆಸ್ ಲೋಕೋ ಪೈಲಟ್ ಸರಿಯಾದ ಸಮಯಕ್ಕೆ ತುರ್ತು ಬ್ರೇಕ್ ಹಾಕುವ ಮೂಲಕ ಸಾವಿರಾರು ಹಿಂದೂಗಳ ಪ್ರಾಣ ಉಳಿಸಿದ್ದಾರೆ. ರೈಲ್ವೆ ಸಚಿವಾಲಯ ಕಣ್ಣು ತೆರೆಯುವುದು ಯಾವಾಗ?” ಎಂದು ಬರೆಯಲಾಗಿತ್ತು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದೇ ಫೋಟೋ ಹಂಚಿಕೊಂಡು ಮುಸ್ಲಿಮರು ರೈಲನ್ನು ಹಳಿ ತಪ್ಪಿಸುವ ಉದ್ದೇಶದಿಂದ ಹಳಿ ಮೇಲೆ ಕಬ್ಬಿಣದ ಕಂಬ ಇಟ್ಟಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಫೋಟೋ ಕುರಿತು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹಲವು ವರದಿಗಳು ಲಭ್ಯವಾಗಿದೆ.

ಸೆಪ್ಟೆಂಬರ್ 22, 2024ರಂದು ಎಬಿಪಿ ನ್ಯೂಸ್ ಪ್ರಕಟಿಸಿದ ವರದಿಯ ಪ್ರಕಾರ, “ಸೆಪ್ಟೆಂಬರ್ 18ರಂದು ಬಿಲಾಸ್‌ಪುರ ರಸ್ತೆ ಮತ್ತು ರುದ್ರಾಪುರ ರೈಲು ನಿಲ್ದಾಣಗಳ ನಡುವೆ ಹಳಿಯಲ್ಲಿ ಆರು ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟು ನೈನಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿತ್ತು. ಈ ಘಟನೆ ಸಂಬಂಧಿಸಿದಂತೆ ರಾಂಪುರ ಜಿಲ್ಲೆಯ ನಿವಾಸಿಗಳಾದ ಸನ್ನಿ ಅಲಿಯಾಸ್ ಸಾನಿಯಾ ಅಲಿಯಾಸ್ ಸಂದೀಪ್ ಚೌಹಾಣ್ ಮತ್ತು ಬಿಜೇಂದ್ರ ಅಲಿಯಾಸ್ ಟಿಂಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ”

“ಆರೋಪಿಗಳು ಕಬ್ಬಿಣದ ಕಂಬವನ್ನು ಕಳ್ಳತನ ಮಾಡಿ ಕೊಂಡೊಯ್ಯುತ್ತಿದ್ದರು. ಆಗ ರೈಲಿನ ಹಾರ್ನ್ ಕೇಳಿದೆ. ಆದ್ದರಿಂದ ಕಂಬವನ್ನು ಹಳಿ ಮೇಲೆ ಬಿಟ್ಟು ಓಡಿ ಹೋಗಿದ್ದಾರೆ. ರೈಲು ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ರಾಂಪುರದಿಂದ ಸುಮಾರಿ 43 ಕಿ.ಮೀ ದೂರದಲ್ಲಿರುವ ರುದ್ರಪುರ ಸಿಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಸೆಪ್ಟೆಂಬರ್ 22, 2024ರಂದು ಈಟಿವಿ ಭಾರತ್ ಉತ್ತರ ಪ್ರದೇಶ ಪ್ರಕಟಿಸಿದ ಮತ್ತೊಂದು ವರದಿ ನಮಗೆ ಲಭ್ಯವಾಗಿದೆ ” ಅದರಲ್ಲೂ ಆರೋಪಿಗಳು ಕಬ್ಬಿಣದ ಕಂಬವನ್ನು ಕದ್ದೊಯ್ಯುವಾಗ ರೈಲು ಬಂದ ಹಿನ್ನೆಲೆ, ಅದನ್ನು ಹಳಿಯಲ್ಲಿ ಬಿಟ್ಟು ಹೋಗಿದ್ದಾರೆ” ಎಂದು ತಿಳಿಸಲಾಗಿದೆ.

“ಘಟನೆಯಲ್ಲಿ ಆರೋಪಿಗಳಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಆರೋಪಿ ಸಂದೀಪ್ ವಿರುದ್ದ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ 14 ಪ್ರಕರಣಗಳು ದಾಖಲಾಗಿದ್ದು, ಆತ ಕ್ರಿಮಿನಲ್ ಸ್ವಭಾವದ ವ್ಯಕ್ತಿ. ಎರಡನೇ ಆರೋಪಿ ವಿಜಯೇಂದ್ರ ವಿರುದ್ದ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಮ್ಮ ಮಾದಕ ವ್ಯಸನವನ್ನು ಪೂರೈಸಲು ಕಬ್ಬಿಣದ ಕಂಬವನ್ನು ಕದಿದ್ದರು. ಅದನ್ನು ತೆಗೆದುಕೊಂಡು ಹೋಗುವಾಗ ರೈಲು ಬಂದಿದ್ದು, ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ” ಎಂದು ಮೊರಾದಾಬಾದ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ವರ್ಮಾ ಹೇಳಿರುವುದಾಗಿ ವರದಿಯಲ್ಲಿದೆ.

ಇನ್ನೂ ಕೆಲ ಮಾಧ್ಯಮ ವರದಿಗಳಿಂದ ಆರೋಪಿಗಳು ಮುಸ್ಲಿಮರಲ್ಲ ಮತ್ತು ಅವರಿಗೆ ರೈಲು ಹಳಿ ತಪ್ಪಿಸುವ ಉದ್ದೇಶ ಇರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...