Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ...

FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ ಏನು?

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಪ್ರೇಮಪುರ ರೈಲು ನಿಲ್ದಾಣದ ಬಳಿ ರೈಲು ಹಳಿ ಮೇಲೆ 5 ಕೆ.ಜಿಯ ಖಾಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾಗಿತ್ತು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಇದಕ್ಕೂ ಮುನ್ನ, ಕಳೆದ ಒಂದೆರಡು ವರ್ಷಗಳಿಂದ ದೇಶದ ಹಲವೆಡೆ ರೈಲು ಹಳಿಗಳ ಮೇಲೆ ವಿವಿಧ ವಸ್ತುಗಳನ್ನು ಇಟ್ಟ ಪ್ರಕರಣಗಳು ವರದಿಯಾಗುತ್ತಿವೆ.

ಈ ನಡುವೆ ಉತ್ತರ ಪ್ರದೇಶದ ರಾಂಪುರ ಬಳಿ ರೈಲು ಹಳಿ ಮೇಲೆ ಕಬ್ಬಿಣದ ಕಂಬವನ್ನು ಇಟ್ಟು ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಫೋಟೋವೊಂದು ವೈರಲ್ ಆಗುತ್ತಿದೆ.

ಸೆಪ್ಟೆಂಬರ್ 21ರಂದು ಫೇಸ್‌ಬುಕ್‌ನಲ್ಲಿ ಫೋಟೋ ಹಂಚಿಕೊಂಡಿರುವ ‘ಆನಂದಗಿರಿ ರಾಮೇಗೌಡ‘ ಎಂಬವರು ” ಉತ್ತರ ಪ್ರದೇಶದ ರಾಂಪುರದಲ್ಲಿ ರೈಲ್ವೇ ಪಲ್ಟಿ ಮಾಡಬೇಕು ಅಂತ ಜೀ ಹಾದಿಗಳು ರೈಲ್ವೆ ಹಳಿ ಮೇಲೆ ಸುಮಾರು 8 ರಿಂದ 9 ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟಿದ್ದಾರೆ. ಆದರೆ, ಡೆಹ್ರಾಡೂನ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್‌ನ ಜಾಣತನದಿಂದ ಅನಾಹುತ ತಪ್ಪಿದೆ. ಲೊಕೊ ಪೈಲಟ್ ಕಬ್ಬಿಣದ ಕಂಬವನ್ನು ನೋಡಿದ ತಕ್ಷಣ ತುರ್ತು ಬ್ರೇಕ್ ಹಾಕುವ ಮೂಲಕ ರೈಲನ್ನು ನಿಲ್ಲಿಸಿದರು. ಆದರೆ ಎಷ್ಟು ಕಾಲ? ಎಲ್ಲಿಯವರೆಗೆ, ಎಲ್ಲಿ ಮತ್ತು ಹೇಗೆ ನಾವು ಉಳಿಸಲ್ಪಡುತ್ತೇವೆ ಏಕೆಂದರೆ ಅವರು ನಮ್ಮನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದಾರೆ!” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 19ರಂದು ಅದೇ ಪೋಟೋವನ್ನು ಜೈ ಶ್ರೀರಾಮ್ ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು “ಮುಖ ಮುಚ್ಚಿಕೊಂಡು ಪ್ರೀತಿಯ ಬಗ್ಗೆ ಮಾತನಾಡುವ ಮುಲ್ಲಾಗಳು ಎಲ್ಲಿದ್ದಾರೆ? ಇಂದು ಸಾವಿರಾರು ಹಿಂದೂಗಳ ಜೀವ ಉಳಿದಿದೆ. ರೈಲನ್ನು ಉರುಳಿಸುವ ಉದ್ದೇಶದಿಂದ ರಾಂಪುರದ ಮುಸ್ಲಿಂ ಕಾಲೋನಿಯ ಹಿಂದೆ ಹಾದು ಹೋಗುವ ರೈಲು ಮಾರ್ಗದ ಮೇಲೆ ಉಗ್ರರು ಕಬ್ಬಿಣದ ಕಂಬವನ್ನು ಹಾಕಿದ್ದರು. ಆದರೆ, ಡೆಹ್ರಡೂನ್‌ ಎಕ್ಸ್‌ಪ್ರೆಸ್ ಲೋಕೋ ಪೈಲಟ್ ಸರಿಯಾದ ಸಮಯಕ್ಕೆ ತುರ್ತು ಬ್ರೇಕ್ ಹಾಕುವ ಮೂಲಕ ಸಾವಿರಾರು ಹಿಂದೂಗಳ ಪ್ರಾಣ ಉಳಿಸಿದ್ದಾರೆ. ರೈಲ್ವೆ ಸಚಿವಾಲಯ ಕಣ್ಣು ತೆರೆಯುವುದು ಯಾವಾಗ?” ಎಂದು ಬರೆಯಲಾಗಿತ್ತು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದೇ ಫೋಟೋ ಹಂಚಿಕೊಂಡು ಮುಸ್ಲಿಮರು ರೈಲನ್ನು ಹಳಿ ತಪ್ಪಿಸುವ ಉದ್ದೇಶದಿಂದ ಹಳಿ ಮೇಲೆ ಕಬ್ಬಿಣದ ಕಂಬ ಇಟ್ಟಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಫೋಟೋ ಕುರಿತು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹಲವು ವರದಿಗಳು ಲಭ್ಯವಾಗಿದೆ.

ಸೆಪ್ಟೆಂಬರ್ 22, 2024ರಂದು ಎಬಿಪಿ ನ್ಯೂಸ್ ಪ್ರಕಟಿಸಿದ ವರದಿಯ ಪ್ರಕಾರ, “ಸೆಪ್ಟೆಂಬರ್ 18ರಂದು ಬಿಲಾಸ್‌ಪುರ ರಸ್ತೆ ಮತ್ತು ರುದ್ರಾಪುರ ರೈಲು ನಿಲ್ದಾಣಗಳ ನಡುವೆ ಹಳಿಯಲ್ಲಿ ಆರು ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟು ನೈನಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿತ್ತು. ಈ ಘಟನೆ ಸಂಬಂಧಿಸಿದಂತೆ ರಾಂಪುರ ಜಿಲ್ಲೆಯ ನಿವಾಸಿಗಳಾದ ಸನ್ನಿ ಅಲಿಯಾಸ್ ಸಾನಿಯಾ ಅಲಿಯಾಸ್ ಸಂದೀಪ್ ಚೌಹಾಣ್ ಮತ್ತು ಬಿಜೇಂದ್ರ ಅಲಿಯಾಸ್ ಟಿಂಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ”

“ಆರೋಪಿಗಳು ಕಬ್ಬಿಣದ ಕಂಬವನ್ನು ಕಳ್ಳತನ ಮಾಡಿ ಕೊಂಡೊಯ್ಯುತ್ತಿದ್ದರು. ಆಗ ರೈಲಿನ ಹಾರ್ನ್ ಕೇಳಿದೆ. ಆದ್ದರಿಂದ ಕಂಬವನ್ನು ಹಳಿ ಮೇಲೆ ಬಿಟ್ಟು ಓಡಿ ಹೋಗಿದ್ದಾರೆ. ರೈಲು ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ರಾಂಪುರದಿಂದ ಸುಮಾರಿ 43 ಕಿ.ಮೀ ದೂರದಲ್ಲಿರುವ ರುದ್ರಪುರ ಸಿಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಸೆಪ್ಟೆಂಬರ್ 22, 2024ರಂದು ಈಟಿವಿ ಭಾರತ್ ಉತ್ತರ ಪ್ರದೇಶ ಪ್ರಕಟಿಸಿದ ಮತ್ತೊಂದು ವರದಿ ನಮಗೆ ಲಭ್ಯವಾಗಿದೆ ” ಅದರಲ್ಲೂ ಆರೋಪಿಗಳು ಕಬ್ಬಿಣದ ಕಂಬವನ್ನು ಕದ್ದೊಯ್ಯುವಾಗ ರೈಲು ಬಂದ ಹಿನ್ನೆಲೆ, ಅದನ್ನು ಹಳಿಯಲ್ಲಿ ಬಿಟ್ಟು ಹೋಗಿದ್ದಾರೆ” ಎಂದು ತಿಳಿಸಲಾಗಿದೆ.

“ಘಟನೆಯಲ್ಲಿ ಆರೋಪಿಗಳಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಆರೋಪಿ ಸಂದೀಪ್ ವಿರುದ್ದ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ 14 ಪ್ರಕರಣಗಳು ದಾಖಲಾಗಿದ್ದು, ಆತ ಕ್ರಿಮಿನಲ್ ಸ್ವಭಾವದ ವ್ಯಕ್ತಿ. ಎರಡನೇ ಆರೋಪಿ ವಿಜಯೇಂದ್ರ ವಿರುದ್ದ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಮ್ಮ ಮಾದಕ ವ್ಯಸನವನ್ನು ಪೂರೈಸಲು ಕಬ್ಬಿಣದ ಕಂಬವನ್ನು ಕದಿದ್ದರು. ಅದನ್ನು ತೆಗೆದುಕೊಂಡು ಹೋಗುವಾಗ ರೈಲು ಬಂದಿದ್ದು, ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ” ಎಂದು ಮೊರಾದಾಬಾದ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ವರ್ಮಾ ಹೇಳಿರುವುದಾಗಿ ವರದಿಯಲ್ಲಿದೆ.

ಇನ್ನೂ ಕೆಲ ಮಾಧ್ಯಮ ವರದಿಗಳಿಂದ ಆರೋಪಿಗಳು ಮುಸ್ಲಿಮರಲ್ಲ ಮತ್ತು ಅವರಿಗೆ ರೈಲು ಹಳಿ ತಪ್ಪಿಸುವ ಉದ್ದೇಶ ಇರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...