Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು...

ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ವಿದ್ಯುತ್ ಸರಬರಾಜು ಮಾಡುತ್ತದೆ. ಈ ಯೋಜನೆಯನ್ನು ನಿರ್ಮಿಸಲು 1,550 ಹೆಕ್ಟೇರ್ ಪ್ರದೇಶವನ್ನು ಬಳಸಲಾಗುತ್ತದೆ. ಬಿಜೆಪಿ ಮಂತ್ರಿಗಳು ಮತ್ತು ನಾಯಕರು ಇದನ್ನು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಯೋಜನೆ ಎಂದು ಬಣ್ಣಿಸಿದ್ದಾರೆ. ಇದು ಸತ್ಯವೇ ಪರಿಶೀಲಿಸೋಣ ಬನ್ನಿ.

ಗೃಹಮಂತ್ರಿ ಅಮಿತ್‌ ಶಾರವರು 750 ಮೆಗಾ ವ್ಯಾಟ್ ಸಾಮರ್ಥ್ಯದ ಏಷ್ಯಾದ ಅತಿ ದೊಡ್ಡ ಸೌರವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜಾಲತಾಣಿಗರು ಬಿಜೆಪಿಯ ಈ ಪ್ರಚಾರಪ್ರಿಯತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.  ಬಿಜೆಪಿ ಹೇಳಿಕೊಳ್ಳುವಂತೆ ಇದು ಏಷ್ಯಾದ ಅತಿ ದೊಡ್ಡ ಸೌರ ವಿದ್ಯುತ್ ಯೋಜನೆಯಲ್ಲ. ಏಕೆಂದರೆ 2,050 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿರುವ ಕರ್ನಾಟಕದ ಪಾವಗಡ ಸೌರ ಉದ್ಯಾನವನವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಏಷ್ಯಾದ ಅತಿದೊಡ್ಡ ಸೌರಶಕ್ತಿ ಉದ್ಯಾನವನವನ್ನು ಪ್ರಾರಂಭಿಸುವ ಬಿಜೆಪಿಯ ಹೇಳಿಕೆಗಳು ಸುಳ್ಳು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ “ಬಿಜೆಪಿ ಕೇಂದ್ರ ಸರ್ಕಾರ ಇಂದು ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್‌ನ ಏಷ್ಯಾದ ಅತಿದೊಡ್ಡ ಸೌರ ಸ್ಥಾವರವನ್ನು ಉದ್ಘಾಟಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕರ್ನಾಟಕದ ಪಾವಗಡದಲ್ಲಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಯಾವುದು? ಇದನ್ನು ಕೇವಲ 3 ವರ್ಷಗಳಲ್ಲಿ ಕರ್ನಾಟಕದ ಅಂದಿನ ಕಾಂಗ್ರೆಸ್ ಸರ್ಕಾರವು ನಿರ್ಮಿಸಿದೆ. ಇದು 2018 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಆದರೆ, ಅಂತರ್ಜಾಲದಲ್ಲಿ ತುಂಬಾ ಸಣ್ಣ ಮಟ್ಟದ ಸಂಶೋಧನೆ ನಡೆಸಿದರೆ ಸಾಕು ಈ ಎರಡೂ ಹೇಳಿಕೆಗಳು ಸುಳ್ಳು ಎಂದು HWNEWS ವರದಿ ಮಾಡಿದೆ.

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ತಹಸಿಲ್‌ನ ಭಾದ್ಲಾದಲ್ಲಿನ ಸೌರ ಉದ್ಯಾನವನವು ಮಾರ್ಚ್ 2020ರ ಹೊತ್ತಿಗೆ ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ. ಇದು ಒಟ್ಟು 10,000 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾಗಿದ್ದು, ಒಟ್ಟು 2,245 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ. ಇದು ರೇವಾದಲ್ಲಿ ಪಿಎಂ ಮೋದಿ ಉದ್ಘಾಟಿಸಿದ ಸ್ಥಾವರ ಮತ್ತು ಕರ್ನಾಟಕದ ಪಾವಗಡ ಸೌರ ಉದ್ಯಾನವನಕ್ಕಿಂತ ದೊಡ್ಡದಾಗಿದೆ ಎಂದು HWNEWS ವರದಿ ಮಾಡಿದೆ.

ಮಾರ್ಚ್ 19, 2020ರ ಮೆರ್ಕಾಮ್ ಇಂಡಿಯಾದ ವರದಿಯ ಪ್ರಕಾರ, ಭಾದ್ಲಾ ಸೌರ ಉದ್ಯಾನವನವು ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ.

 

ವಿಕಿಪೀಡಿಯಾದ ಪ್ರಕಾರ, ಪಾವಗಡ ಸ್ಥಾವರವು 2,050 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ ಮತ್ತು 2245 ಮೆಗಾವ್ಯಾಟ್ ಸಾಮರ್ಥ್ಯದ ಭಾದ್ಲಾ ಸೌರ ಉದ್ಯಾನದ ನಂತರ ವಿಶ್ವದ ಎರಡನೇ ಅತಿದೊಡ್ಡ ದ್ಯುತಿವಿದ್ಯುತ್‌ಜನಕ ಕೇಂದ್ರವಾಗಿದೆ.

ಹಾಗಾಗಿ ರೇವಾ ಸ್ಥಾವರವು ಏಷ್ಯಾದಲ್ಲಿ ಅತಿದೊಡ್ಡದಾಗಿದೆ ಎಂಬ ಕೆಲವು ಬಿಜೆಪಿ ಮಂತ್ರಿಗಳು ಮತ್ತು ಮುಖಂಡರು ನೀಡಿದ ಹೇಳಿಕೆಗಳು ಸುಳ್ಳು ಎಂದು ತಿಳಿದುಬಂದಿದೆ.

ರೇವಾ ಸ್ಥಾವರಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಪಾವಗಡ ವಿದ್ಯುತ್ ಉದ್ಯಾನವನದ ಬಗ್ಗೆ ಕಾಂಗ್ರೆಸ್ ಮಾಡಿದ ಹೇಳಿಕೆ ನಿಜವಾದರೂ, ಏಷ್ಯಾದಲ್ಲಿ ಮಾತ್ರವಲ್ಲದೇ, ಜಗತ್ತಿನಲ್ಲಿಯೇ ದೊಡ್ಡ ಸೌರಶಕ್ತಿ ಉದ್ಯಾನವನವು ರಾಜಸ್ಥಾನದ ಭದ್ಲಾದಲ್ಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...