Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು...

ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ವಿದ್ಯುತ್ ಸರಬರಾಜು ಮಾಡುತ್ತದೆ. ಈ ಯೋಜನೆಯನ್ನು ನಿರ್ಮಿಸಲು 1,550 ಹೆಕ್ಟೇರ್ ಪ್ರದೇಶವನ್ನು ಬಳಸಲಾಗುತ್ತದೆ. ಬಿಜೆಪಿ ಮಂತ್ರಿಗಳು ಮತ್ತು ನಾಯಕರು ಇದನ್ನು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಯೋಜನೆ ಎಂದು ಬಣ್ಣಿಸಿದ್ದಾರೆ. ಇದು ಸತ್ಯವೇ ಪರಿಶೀಲಿಸೋಣ ಬನ್ನಿ.

ಗೃಹಮಂತ್ರಿ ಅಮಿತ್‌ ಶಾರವರು 750 ಮೆಗಾ ವ್ಯಾಟ್ ಸಾಮರ್ಥ್ಯದ ಏಷ್ಯಾದ ಅತಿ ದೊಡ್ಡ ಸೌರವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜಾಲತಾಣಿಗರು ಬಿಜೆಪಿಯ ಈ ಪ್ರಚಾರಪ್ರಿಯತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.  ಬಿಜೆಪಿ ಹೇಳಿಕೊಳ್ಳುವಂತೆ ಇದು ಏಷ್ಯಾದ ಅತಿ ದೊಡ್ಡ ಸೌರ ವಿದ್ಯುತ್ ಯೋಜನೆಯಲ್ಲ. ಏಕೆಂದರೆ 2,050 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿರುವ ಕರ್ನಾಟಕದ ಪಾವಗಡ ಸೌರ ಉದ್ಯಾನವನವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಏಷ್ಯಾದ ಅತಿದೊಡ್ಡ ಸೌರಶಕ್ತಿ ಉದ್ಯಾನವನವನ್ನು ಪ್ರಾರಂಭಿಸುವ ಬಿಜೆಪಿಯ ಹೇಳಿಕೆಗಳು ಸುಳ್ಳು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ “ಬಿಜೆಪಿ ಕೇಂದ್ರ ಸರ್ಕಾರ ಇಂದು ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್‌ನ ಏಷ್ಯಾದ ಅತಿದೊಡ್ಡ ಸೌರ ಸ್ಥಾವರವನ್ನು ಉದ್ಘಾಟಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕರ್ನಾಟಕದ ಪಾವಗಡದಲ್ಲಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಯಾವುದು? ಇದನ್ನು ಕೇವಲ 3 ವರ್ಷಗಳಲ್ಲಿ ಕರ್ನಾಟಕದ ಅಂದಿನ ಕಾಂಗ್ರೆಸ್ ಸರ್ಕಾರವು ನಿರ್ಮಿಸಿದೆ. ಇದು 2018 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಆದರೆ, ಅಂತರ್ಜಾಲದಲ್ಲಿ ತುಂಬಾ ಸಣ್ಣ ಮಟ್ಟದ ಸಂಶೋಧನೆ ನಡೆಸಿದರೆ ಸಾಕು ಈ ಎರಡೂ ಹೇಳಿಕೆಗಳು ಸುಳ್ಳು ಎಂದು HWNEWS ವರದಿ ಮಾಡಿದೆ.

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ತಹಸಿಲ್‌ನ ಭಾದ್ಲಾದಲ್ಲಿನ ಸೌರ ಉದ್ಯಾನವನವು ಮಾರ್ಚ್ 2020ರ ಹೊತ್ತಿಗೆ ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ. ಇದು ಒಟ್ಟು 10,000 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾಗಿದ್ದು, ಒಟ್ಟು 2,245 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ. ಇದು ರೇವಾದಲ್ಲಿ ಪಿಎಂ ಮೋದಿ ಉದ್ಘಾಟಿಸಿದ ಸ್ಥಾವರ ಮತ್ತು ಕರ್ನಾಟಕದ ಪಾವಗಡ ಸೌರ ಉದ್ಯಾನವನಕ್ಕಿಂತ ದೊಡ್ಡದಾಗಿದೆ ಎಂದು HWNEWS ವರದಿ ಮಾಡಿದೆ.

ಮಾರ್ಚ್ 19, 2020ರ ಮೆರ್ಕಾಮ್ ಇಂಡಿಯಾದ ವರದಿಯ ಪ್ರಕಾರ, ಭಾದ್ಲಾ ಸೌರ ಉದ್ಯಾನವನವು ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ.

 

ವಿಕಿಪೀಡಿಯಾದ ಪ್ರಕಾರ, ಪಾವಗಡ ಸ್ಥಾವರವು 2,050 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ ಮತ್ತು 2245 ಮೆಗಾವ್ಯಾಟ್ ಸಾಮರ್ಥ್ಯದ ಭಾದ್ಲಾ ಸೌರ ಉದ್ಯಾನದ ನಂತರ ವಿಶ್ವದ ಎರಡನೇ ಅತಿದೊಡ್ಡ ದ್ಯುತಿವಿದ್ಯುತ್‌ಜನಕ ಕೇಂದ್ರವಾಗಿದೆ.

ಹಾಗಾಗಿ ರೇವಾ ಸ್ಥಾವರವು ಏಷ್ಯಾದಲ್ಲಿ ಅತಿದೊಡ್ಡದಾಗಿದೆ ಎಂಬ ಕೆಲವು ಬಿಜೆಪಿ ಮಂತ್ರಿಗಳು ಮತ್ತು ಮುಖಂಡರು ನೀಡಿದ ಹೇಳಿಕೆಗಳು ಸುಳ್ಳು ಎಂದು ತಿಳಿದುಬಂದಿದೆ.

ರೇವಾ ಸ್ಥಾವರಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಪಾವಗಡ ವಿದ್ಯುತ್ ಉದ್ಯಾನವನದ ಬಗ್ಗೆ ಕಾಂಗ್ರೆಸ್ ಮಾಡಿದ ಹೇಳಿಕೆ ನಿಜವಾದರೂ, ಏಷ್ಯಾದಲ್ಲಿ ಮಾತ್ರವಲ್ಲದೇ, ಜಗತ್ತಿನಲ್ಲಿಯೇ ದೊಡ್ಡ ಸೌರಶಕ್ತಿ ಉದ್ಯಾನವನವು ರಾಜಸ್ಥಾನದ ಭದ್ಲಾದಲ್ಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...