Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು...

ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ವಿದ್ಯುತ್ ಸರಬರಾಜು ಮಾಡುತ್ತದೆ. ಈ ಯೋಜನೆಯನ್ನು ನಿರ್ಮಿಸಲು 1,550 ಹೆಕ್ಟೇರ್ ಪ್ರದೇಶವನ್ನು ಬಳಸಲಾಗುತ್ತದೆ. ಬಿಜೆಪಿ ಮಂತ್ರಿಗಳು ಮತ್ತು ನಾಯಕರು ಇದನ್ನು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಯೋಜನೆ ಎಂದು ಬಣ್ಣಿಸಿದ್ದಾರೆ. ಇದು ಸತ್ಯವೇ ಪರಿಶೀಲಿಸೋಣ ಬನ್ನಿ.

ಗೃಹಮಂತ್ರಿ ಅಮಿತ್‌ ಶಾರವರು 750 ಮೆಗಾ ವ್ಯಾಟ್ ಸಾಮರ್ಥ್ಯದ ಏಷ್ಯಾದ ಅತಿ ದೊಡ್ಡ ಸೌರವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜಾಲತಾಣಿಗರು ಬಿಜೆಪಿಯ ಈ ಪ್ರಚಾರಪ್ರಿಯತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.  ಬಿಜೆಪಿ ಹೇಳಿಕೊಳ್ಳುವಂತೆ ಇದು ಏಷ್ಯಾದ ಅತಿ ದೊಡ್ಡ ಸೌರ ವಿದ್ಯುತ್ ಯೋಜನೆಯಲ್ಲ. ಏಕೆಂದರೆ 2,050 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿರುವ ಕರ್ನಾಟಕದ ಪಾವಗಡ ಸೌರ ಉದ್ಯಾನವನವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಏಷ್ಯಾದ ಅತಿದೊಡ್ಡ ಸೌರಶಕ್ತಿ ಉದ್ಯಾನವನವನ್ನು ಪ್ರಾರಂಭಿಸುವ ಬಿಜೆಪಿಯ ಹೇಳಿಕೆಗಳು ಸುಳ್ಳು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ “ಬಿಜೆಪಿ ಕೇಂದ್ರ ಸರ್ಕಾರ ಇಂದು ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್‌ನ ಏಷ್ಯಾದ ಅತಿದೊಡ್ಡ ಸೌರ ಸ್ಥಾವರವನ್ನು ಉದ್ಘಾಟಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕರ್ನಾಟಕದ ಪಾವಗಡದಲ್ಲಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಯಾವುದು? ಇದನ್ನು ಕೇವಲ 3 ವರ್ಷಗಳಲ್ಲಿ ಕರ್ನಾಟಕದ ಅಂದಿನ ಕಾಂಗ್ರೆಸ್ ಸರ್ಕಾರವು ನಿರ್ಮಿಸಿದೆ. ಇದು 2018 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಆದರೆ, ಅಂತರ್ಜಾಲದಲ್ಲಿ ತುಂಬಾ ಸಣ್ಣ ಮಟ್ಟದ ಸಂಶೋಧನೆ ನಡೆಸಿದರೆ ಸಾಕು ಈ ಎರಡೂ ಹೇಳಿಕೆಗಳು ಸುಳ್ಳು ಎಂದು HWNEWS ವರದಿ ಮಾಡಿದೆ.

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ತಹಸಿಲ್‌ನ ಭಾದ್ಲಾದಲ್ಲಿನ ಸೌರ ಉದ್ಯಾನವನವು ಮಾರ್ಚ್ 2020ರ ಹೊತ್ತಿಗೆ ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ. ಇದು ಒಟ್ಟು 10,000 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾಗಿದ್ದು, ಒಟ್ಟು 2,245 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ. ಇದು ರೇವಾದಲ್ಲಿ ಪಿಎಂ ಮೋದಿ ಉದ್ಘಾಟಿಸಿದ ಸ್ಥಾವರ ಮತ್ತು ಕರ್ನಾಟಕದ ಪಾವಗಡ ಸೌರ ಉದ್ಯಾನವನಕ್ಕಿಂತ ದೊಡ್ಡದಾಗಿದೆ ಎಂದು HWNEWS ವರದಿ ಮಾಡಿದೆ.

ಮಾರ್ಚ್ 19, 2020ರ ಮೆರ್ಕಾಮ್ ಇಂಡಿಯಾದ ವರದಿಯ ಪ್ರಕಾರ, ಭಾದ್ಲಾ ಸೌರ ಉದ್ಯಾನವನವು ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ.

 

ವಿಕಿಪೀಡಿಯಾದ ಪ್ರಕಾರ, ಪಾವಗಡ ಸ್ಥಾವರವು 2,050 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ ಮತ್ತು 2245 ಮೆಗಾವ್ಯಾಟ್ ಸಾಮರ್ಥ್ಯದ ಭಾದ್ಲಾ ಸೌರ ಉದ್ಯಾನದ ನಂತರ ವಿಶ್ವದ ಎರಡನೇ ಅತಿದೊಡ್ಡ ದ್ಯುತಿವಿದ್ಯುತ್‌ಜನಕ ಕೇಂದ್ರವಾಗಿದೆ.

ಹಾಗಾಗಿ ರೇವಾ ಸ್ಥಾವರವು ಏಷ್ಯಾದಲ್ಲಿ ಅತಿದೊಡ್ಡದಾಗಿದೆ ಎಂಬ ಕೆಲವು ಬಿಜೆಪಿ ಮಂತ್ರಿಗಳು ಮತ್ತು ಮುಖಂಡರು ನೀಡಿದ ಹೇಳಿಕೆಗಳು ಸುಳ್ಳು ಎಂದು ತಿಳಿದುಬಂದಿದೆ.

ರೇವಾ ಸ್ಥಾವರಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಪಾವಗಡ ವಿದ್ಯುತ್ ಉದ್ಯಾನವನದ ಬಗ್ಗೆ ಕಾಂಗ್ರೆಸ್ ಮಾಡಿದ ಹೇಳಿಕೆ ನಿಜವಾದರೂ, ಏಷ್ಯಾದಲ್ಲಿ ಮಾತ್ರವಲ್ಲದೇ, ಜಗತ್ತಿನಲ್ಲಿಯೇ ದೊಡ್ಡ ಸೌರಶಕ್ತಿ ಉದ್ಯಾನವನವು ರಾಜಸ್ಥಾನದ ಭದ್ಲಾದಲ್ಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...