Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು...

ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ವಿದ್ಯುತ್ ಸರಬರಾಜು ಮಾಡುತ್ತದೆ. ಈ ಯೋಜನೆಯನ್ನು ನಿರ್ಮಿಸಲು 1,550 ಹೆಕ್ಟೇರ್ ಪ್ರದೇಶವನ್ನು ಬಳಸಲಾಗುತ್ತದೆ. ಬಿಜೆಪಿ ಮಂತ್ರಿಗಳು ಮತ್ತು ನಾಯಕರು ಇದನ್ನು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಯೋಜನೆ ಎಂದು ಬಣ್ಣಿಸಿದ್ದಾರೆ. ಇದು ಸತ್ಯವೇ ಪರಿಶೀಲಿಸೋಣ ಬನ್ನಿ.

ಗೃಹಮಂತ್ರಿ ಅಮಿತ್‌ ಶಾರವರು 750 ಮೆಗಾ ವ್ಯಾಟ್ ಸಾಮರ್ಥ್ಯದ ಏಷ್ಯಾದ ಅತಿ ದೊಡ್ಡ ಸೌರವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜಾಲತಾಣಿಗರು ಬಿಜೆಪಿಯ ಈ ಪ್ರಚಾರಪ್ರಿಯತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.  ಬಿಜೆಪಿ ಹೇಳಿಕೊಳ್ಳುವಂತೆ ಇದು ಏಷ್ಯಾದ ಅತಿ ದೊಡ್ಡ ಸೌರ ವಿದ್ಯುತ್ ಯೋಜನೆಯಲ್ಲ. ಏಕೆಂದರೆ 2,050 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿರುವ ಕರ್ನಾಟಕದ ಪಾವಗಡ ಸೌರ ಉದ್ಯಾನವನವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಏಷ್ಯಾದ ಅತಿದೊಡ್ಡ ಸೌರಶಕ್ತಿ ಉದ್ಯಾನವನವನ್ನು ಪ್ರಾರಂಭಿಸುವ ಬಿಜೆಪಿಯ ಹೇಳಿಕೆಗಳು ಸುಳ್ಳು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ “ಬಿಜೆಪಿ ಕೇಂದ್ರ ಸರ್ಕಾರ ಇಂದು ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್‌ನ ಏಷ್ಯಾದ ಅತಿದೊಡ್ಡ ಸೌರ ಸ್ಥಾವರವನ್ನು ಉದ್ಘಾಟಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕರ್ನಾಟಕದ ಪಾವಗಡದಲ್ಲಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಯಾವುದು? ಇದನ್ನು ಕೇವಲ 3 ವರ್ಷಗಳಲ್ಲಿ ಕರ್ನಾಟಕದ ಅಂದಿನ ಕಾಂಗ್ರೆಸ್ ಸರ್ಕಾರವು ನಿರ್ಮಿಸಿದೆ. ಇದು 2018 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಆದರೆ, ಅಂತರ್ಜಾಲದಲ್ಲಿ ತುಂಬಾ ಸಣ್ಣ ಮಟ್ಟದ ಸಂಶೋಧನೆ ನಡೆಸಿದರೆ ಸಾಕು ಈ ಎರಡೂ ಹೇಳಿಕೆಗಳು ಸುಳ್ಳು ಎಂದು HWNEWS ವರದಿ ಮಾಡಿದೆ.

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ತಹಸಿಲ್‌ನ ಭಾದ್ಲಾದಲ್ಲಿನ ಸೌರ ಉದ್ಯಾನವನವು ಮಾರ್ಚ್ 2020ರ ಹೊತ್ತಿಗೆ ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ. ಇದು ಒಟ್ಟು 10,000 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾಗಿದ್ದು, ಒಟ್ಟು 2,245 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ. ಇದು ರೇವಾದಲ್ಲಿ ಪಿಎಂ ಮೋದಿ ಉದ್ಘಾಟಿಸಿದ ಸ್ಥಾವರ ಮತ್ತು ಕರ್ನಾಟಕದ ಪಾವಗಡ ಸೌರ ಉದ್ಯಾನವನಕ್ಕಿಂತ ದೊಡ್ಡದಾಗಿದೆ ಎಂದು HWNEWS ವರದಿ ಮಾಡಿದೆ.

ಮಾರ್ಚ್ 19, 2020ರ ಮೆರ್ಕಾಮ್ ಇಂಡಿಯಾದ ವರದಿಯ ಪ್ರಕಾರ, ಭಾದ್ಲಾ ಸೌರ ಉದ್ಯಾನವನವು ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ.

 

ವಿಕಿಪೀಡಿಯಾದ ಪ್ರಕಾರ, ಪಾವಗಡ ಸ್ಥಾವರವು 2,050 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ ಮತ್ತು 2245 ಮೆಗಾವ್ಯಾಟ್ ಸಾಮರ್ಥ್ಯದ ಭಾದ್ಲಾ ಸೌರ ಉದ್ಯಾನದ ನಂತರ ವಿಶ್ವದ ಎರಡನೇ ಅತಿದೊಡ್ಡ ದ್ಯುತಿವಿದ್ಯುತ್‌ಜನಕ ಕೇಂದ್ರವಾಗಿದೆ.

ಹಾಗಾಗಿ ರೇವಾ ಸ್ಥಾವರವು ಏಷ್ಯಾದಲ್ಲಿ ಅತಿದೊಡ್ಡದಾಗಿದೆ ಎಂಬ ಕೆಲವು ಬಿಜೆಪಿ ಮಂತ್ರಿಗಳು ಮತ್ತು ಮುಖಂಡರು ನೀಡಿದ ಹೇಳಿಕೆಗಳು ಸುಳ್ಳು ಎಂದು ತಿಳಿದುಬಂದಿದೆ.

ರೇವಾ ಸ್ಥಾವರಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಪಾವಗಡ ವಿದ್ಯುತ್ ಉದ್ಯಾನವನದ ಬಗ್ಗೆ ಕಾಂಗ್ರೆಸ್ ಮಾಡಿದ ಹೇಳಿಕೆ ನಿಜವಾದರೂ, ಏಷ್ಯಾದಲ್ಲಿ ಮಾತ್ರವಲ್ಲದೇ, ಜಗತ್ತಿನಲ್ಲಿಯೇ ದೊಡ್ಡ ಸೌರಶಕ್ತಿ ಉದ್ಯಾನವನವು ರಾಜಸ್ಥಾನದ ಭದ್ಲಾದಲ್ಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....