Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು...

ಫ್ಯಾಕ್ಟ್ ಚೆಕ್: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರ ಎಂಬುದು ಸುಳ್ಳು..

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ರೇವಾದಲ್ಲಿ 750 ಮೆಗಾವ್ಯಾಟ್ ಸಾಮರ್ಥ್ಯದ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಉದ್ಯಾನವನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದ್ದಾರೆ. ಜನವರಿಯಲ್ಲಿ ನಿಯೋಜಿಸಲಾದ ಈ ಸೌಲಭ್ಯವು ಮಧ್ಯಪ್ರದೇಶ ಮತ್ತು ದೆಹಲಿ ಮೆಟ್ರೋ ರೈಲು ನಿಗಮಕ್ಕೆ (DMRC) ವಿದ್ಯುತ್ ಸರಬರಾಜು ಮಾಡುತ್ತದೆ. ಈ ಯೋಜನೆಯನ್ನು ನಿರ್ಮಿಸಲು 1,550 ಹೆಕ್ಟೇರ್ ಪ್ರದೇಶವನ್ನು ಬಳಸಲಾಗುತ್ತದೆ. ಬಿಜೆಪಿ ಮಂತ್ರಿಗಳು ಮತ್ತು ನಾಯಕರು ಇದನ್ನು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಯೋಜನೆ ಎಂದು ಬಣ್ಣಿಸಿದ್ದಾರೆ. ಇದು ಸತ್ಯವೇ ಪರಿಶೀಲಿಸೋಣ ಬನ್ನಿ.

ಗೃಹಮಂತ್ರಿ ಅಮಿತ್‌ ಶಾರವರು 750 ಮೆಗಾ ವ್ಯಾಟ್ ಸಾಮರ್ಥ್ಯದ ಏಷ್ಯಾದ ಅತಿ ದೊಡ್ಡ ಸೌರವಿದ್ಯುತ್ ಘಟಕವನ್ನು ಉದ್ಘಾಟನೆ ಮಾಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜಾಲತಾಣಿಗರು ಬಿಜೆಪಿಯ ಈ ಪ್ರಚಾರಪ್ರಿಯತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.  ಬಿಜೆಪಿ ಹೇಳಿಕೊಳ್ಳುವಂತೆ ಇದು ಏಷ್ಯಾದ ಅತಿ ದೊಡ್ಡ ಸೌರ ವಿದ್ಯುತ್ ಯೋಜನೆಯಲ್ಲ. ಏಕೆಂದರೆ 2,050 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿರುವ ಕರ್ನಾಟಕದ ಪಾವಗಡ ಸೌರ ಉದ್ಯಾನವನವು 2018 ರಿಂದ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಏಷ್ಯಾದ ಅತಿದೊಡ್ಡ ಸೌರಶಕ್ತಿ ಉದ್ಯಾನವನವನ್ನು ಪ್ರಾರಂಭಿಸುವ ಬಿಜೆಪಿಯ ಹೇಳಿಕೆಗಳು ಸುಳ್ಳು ಎಂಬುದು ಹಲವರ ಅಭಿಪ್ರಾಯವಾಗಿದೆ.

ಬಿಜೆಪಿ ನಾಯಕರು ಮಾಡಿದ ಗೊಂದಲದಿಂದ ಟ್ವೀಟರ್ ಬಳಕೆದಾರರೊಬ್ಬರು, ಕರ್ನಾಟಕ ಏಷ್ಯಾದಲ್ಲಿಲ್ಲವೇ? ರೇವಾದಲ್ಲಿರುವುದಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಕರ್ನಾಟಕದ ಪಾವಗಡ ಉದ್ಯಾನವನ್ನು ಬಿಜೆಪಿ ಏಕೆ ನಿರ್ಲಕ್ಷಿಸಿದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ “ಬಿಜೆಪಿ ಕೇಂದ್ರ ಸರ್ಕಾರ ಇಂದು ಮಧ್ಯಪ್ರದೇಶದಲ್ಲಿ 750 ಮೆಗಾವ್ಯಾಟ್‌ನ ಏಷ್ಯಾದ ಅತಿದೊಡ್ಡ ಸೌರ ಸ್ಥಾವರವನ್ನು ಉದ್ಘಾಟಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕರ್ನಾಟಕದ ಪಾವಗಡದಲ್ಲಿರುವ 2000 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರ ಯಾವುದು? ಇದನ್ನು ಕೇವಲ 3 ವರ್ಷಗಳಲ್ಲಿ ಕರ್ನಾಟಕದ ಅಂದಿನ ಕಾಂಗ್ರೆಸ್ ಸರ್ಕಾರವು ನಿರ್ಮಿಸಿದೆ. ಇದು 2018 ರಿಂದ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ಆದರೆ, ಅಂತರ್ಜಾಲದಲ್ಲಿ ತುಂಬಾ ಸಣ್ಣ ಮಟ್ಟದ ಸಂಶೋಧನೆ ನಡೆಸಿದರೆ ಸಾಕು ಈ ಎರಡೂ ಹೇಳಿಕೆಗಳು ಸುಳ್ಳು ಎಂದು HWNEWS ವರದಿ ಮಾಡಿದೆ.

ರಾಜಸ್ಥಾನದ ಜೋಧಪುರ ಜಿಲ್ಲೆಯ ಫಲೋಡಿ ತಹಸಿಲ್‌ನ ಭಾದ್ಲಾದಲ್ಲಿನ ಸೌರ ಉದ್ಯಾನವನವು ಮಾರ್ಚ್ 2020ರ ಹೊತ್ತಿಗೆ ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ. ಇದು ಒಟ್ಟು 10,000 ಎಕರೆ ವಿಸ್ತೀರ್ಣದಲ್ಲಿ ನಿರ್ಮಿತವಾಗಿದ್ದು, ಒಟ್ಟು 2,245 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ. ಇದು ರೇವಾದಲ್ಲಿ ಪಿಎಂ ಮೋದಿ ಉದ್ಘಾಟಿಸಿದ ಸ್ಥಾವರ ಮತ್ತು ಕರ್ನಾಟಕದ ಪಾವಗಡ ಸೌರ ಉದ್ಯಾನವನಕ್ಕಿಂತ ದೊಡ್ಡದಾಗಿದೆ ಎಂದು HWNEWS ವರದಿ ಮಾಡಿದೆ.

ಮಾರ್ಚ್ 19, 2020ರ ಮೆರ್ಕಾಮ್ ಇಂಡಿಯಾದ ವರದಿಯ ಪ್ರಕಾರ, ಭಾದ್ಲಾ ಸೌರ ಉದ್ಯಾನವನವು ವಿಶ್ವದ ಅತಿದೊಡ್ಡ ಸೌರ ಉದ್ಯಾನವನವಾಗಿದೆ.

 

ವಿಕಿಪೀಡಿಯಾದ ಪ್ರಕಾರ, ಪಾವಗಡ ಸ್ಥಾವರವು 2,050 ಮೆಗಾವ್ಯಾಟ್ ಸಾಮರ್ಥ್ಯವನ್ನು ಹೊಂದಿದೆ ಮತ್ತು 2245 ಮೆಗಾವ್ಯಾಟ್ ಸಾಮರ್ಥ್ಯದ ಭಾದ್ಲಾ ಸೌರ ಉದ್ಯಾನದ ನಂತರ ವಿಶ್ವದ ಎರಡನೇ ಅತಿದೊಡ್ಡ ದ್ಯುತಿವಿದ್ಯುತ್‌ಜನಕ ಕೇಂದ್ರವಾಗಿದೆ.

ಹಾಗಾಗಿ ರೇವಾ ಸ್ಥಾವರವು ಏಷ್ಯಾದಲ್ಲಿ ಅತಿದೊಡ್ಡದಾಗಿದೆ ಎಂಬ ಕೆಲವು ಬಿಜೆಪಿ ಮಂತ್ರಿಗಳು ಮತ್ತು ಮುಖಂಡರು ನೀಡಿದ ಹೇಳಿಕೆಗಳು ಸುಳ್ಳು ಎಂದು ತಿಳಿದುಬಂದಿದೆ.

ರೇವಾ ಸ್ಥಾವರಕ್ಕಿಂತ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿರುವ ಪಾವಗಡ ವಿದ್ಯುತ್ ಉದ್ಯಾನವನದ ಬಗ್ಗೆ ಕಾಂಗ್ರೆಸ್ ಮಾಡಿದ ಹೇಳಿಕೆ ನಿಜವಾದರೂ, ಏಷ್ಯಾದಲ್ಲಿ ಮಾತ್ರವಲ್ಲದೇ, ಜಗತ್ತಿನಲ್ಲಿಯೇ ದೊಡ್ಡ ಸೌರಶಕ್ತಿ ಉದ್ಯಾನವನವು ರಾಜಸ್ಥಾನದ ಭದ್ಲಾದಲ್ಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...