Homeಫ್ಯಾಕ್ಟ್‌ಚೆಕ್Fact Check: ಶ್ರೀಲಂಕಾದ ಕಚ್ಚತೀವು ದ್ವೀಪದ ಕುರಿತು ಸುಳ್ಳು ಹೇಳಿದ್ರಾ ಪ್ರಧಾನಿ ಮೋದಿ?

Fact Check: ಶ್ರೀಲಂಕಾದ ಕಚ್ಚತೀವು ದ್ವೀಪದ ಕುರಿತು ಸುಳ್ಳು ಹೇಳಿದ್ರಾ ಪ್ರಧಾನಿ ಮೋದಿ?

- Advertisement -
- Advertisement -

ಕಳೆದ ಕೆಲ ದಿನಗಳಿಂದ ಭಾರತ ಮತ್ತು ಶ್ರೀಲಂಕಾದ ನಡುವಿನ ಕಚ್ಚತೀವು ದ್ವೀಪದ ಬಗ್ಗೆ ದೇಶದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಭಾರತದ ಭಾಗವಾಗಿದ್ದ ಕಚ್ಚತೀವು ದ್ವೀಪವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಲಂಕಾಗೆ ಬಿಟ್ಟು ಕೊಡಲಾಗಿದೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಈ ವಿಷಯ ಮಹತ್ವ ಪಡೆದುಕೊಂಡಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆರ್‌ಟಿಐ ಮೂಲಕ ಪಡೆದ ಮಾಹಿತಿಯ ಪ್ರಕಾರ ಇಂದಿರಾ ಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟು ಕೊಡಲಾಗಿದೆ ಎಂದು ಸರ್ಕಾರ ತಿಳಿಸಿದೆಯಂತೆ. ಈ ಕುರಿತು ಟೈಮ್ಸ್‌ ಆಫ್ ಇಂಡಿಯಾ ಸುದ್ದಿಯೊಂದನ್ನು ಪ್ರಕಟಿಸಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಟೈಮ್ಸ್ ಆಫ್ ಇಂಡಿಯಾ ವರದಿಯನ್ನು ಮಾರ್ಚ್ 31,2024ರಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಕಣ್ಣು ತೆರೆಸುವ ಮತ್ತು ಬೆಚ್ಚಿಬೀಳಿಸುವ ವಿಷಯ. ಕಚ್ಚತೀವು ಅನ್ನು ಕಾಂಗ್ರೆಸ್ ಹೇಗೆ ಬಿಟ್ಟು ಕೊಟ್ಟಿತ್ತು ಎಂದು ಹೊಸ ವಿಷಯಗಳು ಬಹಿರಂಗಪಡಿಸಿವೆ. ಇದು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ ಮತ್ತು ಜನರ ಮನಸ್ಸಿನಲ್ಲಿ ನಾವು ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ ಎಂದು ಮತ್ತೊಮ್ಮೆ ದೃಢಪಟ್ಟಿದೆ. ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್‌ 75 ವರ್ಷಗಳಿಂದ ಮಾಡುತ್ತಾ ಬಂದಿರುವ ಕೆಲಸವಾಗಿದೆ” ಎಂದು ಬರೆದುಕೊಂಡಿದ್ದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆ ಸಚಿವ ಎಸ್‌ ಜೈಶಂಕರ್, “ಭಾರತದಲ್ಲಿ ನಡೆಯುತ್ತಿದ್ದ ವಿರೋಧವನ್ನು ಗಮನದಲ್ಲಿಟ್ಟುಕೊಂಡು, ಮೇ 10, 1961 ರಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಒಂದು ನಿಮಿಷದಲ್ಲಿ ಈ ವಿಷಯವನ್ನು ಅಪ್ರಸ್ತುತವೆಂದು ತಳ್ಳಿ ಹಾಕಿದ್ದರು. ಈ ದ್ವೀಪದ ಮೇಲಿನ ಹಕ್ಕು ಬಿಟ್ಟುಕೊಡಲು ನಾನು ಯಾವುದೇ ಹಿಂಜರಿಕೆ ತೋರಿಸುವುದಿಲ್ಲ ಎಂದು ಅವರು ಬರೆದಿದ್ದರು. ನಾನು ಈ ಪುಟ್ಟ ದ್ವೀಪವನ್ನು ಗೌರವಿಸುವುದಿಲ್ಲ ಮತ್ತು ಅದರ ಮೇಲಿನ ನನ್ನ ಹಕ್ಕನ್ನು ಬಿಟ್ಟುಕೊಡಲು ಯಾವುದೇ ಹಿಂಜರಿಕೆಯಿಲ್ಲ. ಈ ವಿವಾದವು ಅನಿರ್ದಿಷ್ಟವಾಗಿ ಮುಂದುವರಿಯುವುದು ಮತ್ತು ಸಂಸತ್ತಿನಲ್ಲಿ ಮತ್ತೆ ಪ್ರಸ್ತಾಪಿಸುವುದು ನನಗೆ ಇಷ್ಟವಿಲ್ಲ ಎಂದಿದ್ದರು ಎಂದು” ಹೇಳಿದ್ದರು.

ಹಾಗಿದ್ದರೆ, ನಿಜವಾಗಿಯೂ ಕಾಂಗ್ರೆಸ್‌ ಸರ್ಕಾರ ಅಥವಾ ಜವಹರಲಾಲ್ ನೆಹರು, ಇಂದಿರಾ ಗಾಂಧಿ ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟು ಕೊಟ್ಟರಾ? ಎಂಬುವುದನ್ನು ನೋಡೋಣಾ.

ಫ್ಯಾಕ್ಟ್‌ಚೆಕ್ : ಈಗ ‘ಕಚ್ಚತೀವು’ ಎಂದು ಕರೆಯಲ್ಪಡುವ ಪ್ರದೇಶವು 14ನೇ ಶತಮಾನದಲ್ಲಿ ಜ್ವಾಲಾಮುಖಿ ಸ್ಫೋಟದಿಂದ ನಿರ್ಮಾಣವಾದ ದ್ವೀಪವಾಗಿದೆ. ಇದು ಶ್ರೀಲಂಕಾದ ಜಾಫ್ನಾ ಸಾಮ್ರಾಜ್ಯದಿಂದ ನಿಯಂತ್ರಿಸಲ್ಪಟ್ಟಿತ್ತು. ಕಚ್ಚತೀವು ದ್ವೀಪ ಭಾರತ ಮತ್ತು ಶ್ರೀಲಂಕಾದ ನಡುವಿನ ಪಾಕ್ ಜಲಸಂಧಿಯಲ್ಲಿದೆ. ಭಾರತದ ರಾಮೇಶ್ವರಂ ಕರಾವಳಿಯಿಂದ ಈಶಾನ್ಯ ದಿಕ್ಕಿನಲ್ಲಿದೆ. 285 ಎಕರೆ ವಿಸ್ತಾರವುಳ್ಳ ಈ ದ್ವೀಪವು ಕುಡಿಯಲು ನೀರಿಲ್ಲದ ಕಾರಣ ಜನ ವಸತಿಗೆ ಯೋಗ್ಯವಾಗಿಲ್ಲ.

ಈ ದ್ವೀಪವು ತಮಗೆ ಸೇರಿದ್ದು ಎಂದು ಶ್ರೀಲಂಕಾವು ಡಚ್ಚರು ಮತ್ತು ಬ್ರಿಟಿಷರ ಆಳ್ವಿಕೆ ಅವಧಿಯ ದಾಖಲೆಗಳನ್ನು ತೋರಿಸಿತ್ತು. ರಾಮನಾಥಪುರದ ಅರಸು ಮನೆತನ ಇದರ ಒಡೆತನ ಹೊಂದಿತ್ತು ಎಂದು ಪ್ರತಿಪಾದಿಸಿತ್ತಾದರೂ, ಅದನ್ನು ಬೆಂಬಲಿಸುವ ಯಾವುದೇ ದಾಖಲೆಗಳನ್ನು ಒದಗಿಸಿರಲಿಲ್ಲ. ಎರಡು ದಶಕಕ್ಕೂ ಮೀರಿದ ಅವಧಿಯಲ್ಲಿ ಹಲವು ಸುತ್ತಿನ ಮಾತುಕತೆಗಳ ನಂತರ 1973ರಲ್ಲಿ ಭಾರತ–ಶ್ರೀಲಂಕಾ ಜಲಗಡಿಯನ್ನು ಅಂತಿಮಗೊಳಿಸಲು ನಿರ್ಧರಿಸಲಾಯಿತು. ಆ ಸಂಬಂಧ 1974ರಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು.

1974ರಲ್ಲಿ ಒಪ್ಪಂದಲ್ಲಿ ಏನಿದೆ?

1974ರ ಒಪ್ಪಂದದಲ್ಲಿ ಗುರುತಿಸಲಾದ ಜಲಗಡಿಯ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾಕ್ಕೆ ಸೇರಿತು. ಆದರೆ, ಈ ದ್ವೀಪವನ್ನು ಶ್ರೀಲಂಕಾದಿಂದ ಪಡೆದುಕೊಳ್ಳಬೇಕು ಎಂಬ ಕೂಗೂ ರಾಜಕೀಯ ವಲಯದಲ್ಲಿ ಇದ್ದೇ ಇತ್ತು. ಈ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಪ್ರಶ್ನೆಗಳನ್ನು ಎತ್ತಿದಾಗ ಎಲ್ಲಾ ಸರ್ಕಾರಗಳು, ಕಚ್ಚತೀವು ದ್ವೀಪದ ವಿಚಾರ ಈಗಾಗಲೇ ಮುಗಿದಿದೆ. ಅಲ್ಲಿನ ಕೆಲವು ಹಕ್ಕುಗಳ ಬಗ್ಗೆ ಮಾತ್ರ ವಿವಾದವಿದೆ ಎಂದೇ ಹೇಳಿಕೆ ನೀಡಿದ್ದವು.

ಈ ಬಗ್ಗೆ ಪ್ರಶ್ನೆ ಕೇಳಿ, ಅಲಾಡಿ ಗುರುಸ್ವಾಮಿ ಅವರು 2015ರ ಜನವರಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು. ಸಚಿವೆ ಸುಷ್ಮಾ ಸ್ವರಾಜ್‌ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆ ಅರ್ಜಿಗೆ ಅದೇ ಜನವರಿ 27ರಂದು ಉತ್ತರ ನೀಡಿತ್ತು.

ಉತ್ತರದಲ್ಲಿ, ‘1974 ಮತ್ತು 1976ರ ಒಪ್ಪಂದಗಳ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾದ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲಿಯವರೆಗೆ ಆ ದ್ವೀಪವು ಯಾರ ವ್ಯಾಪ್ತಿಗೆ ಸೇರುತ್ತದೆ ಎಂಬುದನ್ನು ಗುರುತಿಸಿರಲೇ ಇಲ್ಲ. ಹೀಗಾಗಿ ಎರಡೂ ದೇಶಗಳ ಮಧ್ಯೆ ಜಲಗಡಿಯನ್ನು ಗುರುತಿಸುವ ಅವಧಿಯಲ್ಲಿ ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಡುವ ಅಥವಾ ಸ್ವಾಧೀನಪಡಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸಚಿವಾಲಯವು ವಿವರಿಸಿತ್ತು.

ಅಲ್ಲದೆ, ಜಲ ಒಪ್ಪಂದಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಉತ್ತರದೊಂದಿಗೆ ನೀಡಿತ್ತು. ಮೋದಿ ಅವರ ಸರ್ಕಾರದ್ದೇ ಸಚಿವಾಲಯವು ಅಧಿಕೃತವಾಗಿ ನೀಡಿದ್ದ ದಾಖಲೆಗಳ ಪ್ರಕಾರ ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲ ಎಂದು ಏಪ್ರಿಲ್ 2, 2024ರಂದು ಪ್ರಜಾವಾಣಿ ಪ್ರಕಟಿಸಿದ ವರದಿಯಲ್ಲಿ ಉಲ್ಲೇಖಿಸಿದೆ.

ಪ್ರಜಾವಾಣಿ ವರದಿಯ ಲಿಂಕ್ ಇಲ್ಲಿದೆ 

ಪ್ರಧಾನಿ ಮೋದಿ ನೇತೃತ್ವದ ಸರ್ಕಾರವೇ ಈ ಹಿಂದೆ ಆರ್‌ಟಿಐ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತಾ, ‘ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲಎಂದು ಉತ್ತರಿಸಿತ್ತು. ತಮ್ಮದೇ ಸರ್ಕಾರ ನೀಡಿದ್ದ ಉತ್ತರಕ್ಕೆ ವ್ಯತಿರಿಕ್ತವಾದ ಆರೋಪವನ್ನು ಈಗ ಪ್ರಧಾನಿ ಮಾಡಿದ್ದಾರೆ. ಹಾಗಾಗಿ, ಇದು ಕಚ್ಚತೀವು ದ್ವೀಪದ ವಿಚಾರ ಮುಂದಿಟ್ಟುಕೊಂಡು 2024ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಸ್ಥಾನವನ್ನು ಗೆಲ್ಲಲು ಮಾಡುತ್ತಿರುವ ತಂತ್ರ ಎಂದೇ ಹೇಳಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಇದು ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

ನಾವು ನಡೆಸಿದ ಪರಿಶೀಲನೆ ಪ್ರಕಾರ, ಮೋದಿ ಸರ್ಕಾರವೇ ನೀಡಿದ ಮಾಹಿತಿ ಪ್ರಕಾರ ಕಚ್ಚತೀವು ದ್ವೀಪ ಎಂದಿಗೂ ಭಾರತದ ಭಾಗವಾಗಿ ಇರಲೇ ಇಲ್ಲ. ಹೀಗಿರುವಾಗ ಅದನ್ನು ಕಾಂಗ್ರೆಸ್ ಸರ್ಕಾರ ಶ್ರೀಲಂಕಾಗೆ ಬಿಟ್ಟು ಕೊಡುವ ಪ್ರಮೇಯವೇ ಬರುವುದಿಲ್ಲ. ಆದ್ದರಿಂದ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ: Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅನ್ಯಾಯ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...