Homeಫ್ಯಾಕ್ಟ್‌ಚೆಕ್Fact Check: ಶ್ರೀಲಂಕಾದ ಕಚ್ಚತೀವು ದ್ವೀಪದ ಕುರಿತು ಸುಳ್ಳು ಹೇಳಿದ್ರಾ ಪ್ರಧಾನಿ ಮೋದಿ?

Fact Check: ಶ್ರೀಲಂಕಾದ ಕಚ್ಚತೀವು ದ್ವೀಪದ ಕುರಿತು ಸುಳ್ಳು ಹೇಳಿದ್ರಾ ಪ್ರಧಾನಿ ಮೋದಿ?

- Advertisement -
- Advertisement -

ಕಳೆದ ಕೆಲ ದಿನಗಳಿಂದ ಭಾರತ ಮತ್ತು ಶ್ರೀಲಂಕಾದ ನಡುವಿನ ಕಚ್ಚತೀವು ದ್ವೀಪದ ಬಗ್ಗೆ ದೇಶದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಭಾರತದ ಭಾಗವಾಗಿದ್ದ ಕಚ್ಚತೀವು ದ್ವೀಪವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಲಂಕಾಗೆ ಬಿಟ್ಟು ಕೊಡಲಾಗಿದೆ ಎಂದು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಈ ವಿಷಯ ಮಹತ್ವ ಪಡೆದುಕೊಂಡಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆರ್‌ಟಿಐ ಮೂಲಕ ಪಡೆದ ಮಾಹಿತಿಯ ಪ್ರಕಾರ ಇಂದಿರಾ ಗಾಂಧಿ ದೇಶದ ಪ್ರಧಾನಿಯಾಗಿದ್ದಾಗ ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟು ಕೊಡಲಾಗಿದೆ ಎಂದು ಸರ್ಕಾರ ತಿಳಿಸಿದೆಯಂತೆ. ಈ ಕುರಿತು ಟೈಮ್ಸ್‌ ಆಫ್ ಇಂಡಿಯಾ ಸುದ್ದಿಯೊಂದನ್ನು ಪ್ರಕಟಿಸಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಟೈಮ್ಸ್ ಆಫ್ ಇಂಡಿಯಾ ವರದಿಯನ್ನು ಮಾರ್ಚ್ 31,2024ರಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, “ಕಣ್ಣು ತೆರೆಸುವ ಮತ್ತು ಬೆಚ್ಚಿಬೀಳಿಸುವ ವಿಷಯ. ಕಚ್ಚತೀವು ಅನ್ನು ಕಾಂಗ್ರೆಸ್ ಹೇಗೆ ಬಿಟ್ಟು ಕೊಟ್ಟಿತ್ತು ಎಂದು ಹೊಸ ವಿಷಯಗಳು ಬಹಿರಂಗಪಡಿಸಿವೆ. ಇದು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ ಮತ್ತು ಜನರ ಮನಸ್ಸಿನಲ್ಲಿ ನಾವು ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ ಎಂದು ಮತ್ತೊಮ್ಮೆ ದೃಢಪಟ್ಟಿದೆ. ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್‌ 75 ವರ್ಷಗಳಿಂದ ಮಾಡುತ್ತಾ ಬಂದಿರುವ ಕೆಲಸವಾಗಿದೆ” ಎಂದು ಬರೆದುಕೊಂಡಿದ್ದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆ ಸಚಿವ ಎಸ್‌ ಜೈಶಂಕರ್, “ಭಾರತದಲ್ಲಿ ನಡೆಯುತ್ತಿದ್ದ ವಿರೋಧವನ್ನು ಗಮನದಲ್ಲಿಟ್ಟುಕೊಂಡು, ಮೇ 10, 1961 ರಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಒಂದು ನಿಮಿಷದಲ್ಲಿ ಈ ವಿಷಯವನ್ನು ಅಪ್ರಸ್ತುತವೆಂದು ತಳ್ಳಿ ಹಾಕಿದ್ದರು. ಈ ದ್ವೀಪದ ಮೇಲಿನ ಹಕ್ಕು ಬಿಟ್ಟುಕೊಡಲು ನಾನು ಯಾವುದೇ ಹಿಂಜರಿಕೆ ತೋರಿಸುವುದಿಲ್ಲ ಎಂದು ಅವರು ಬರೆದಿದ್ದರು. ನಾನು ಈ ಪುಟ್ಟ ದ್ವೀಪವನ್ನು ಗೌರವಿಸುವುದಿಲ್ಲ ಮತ್ತು ಅದರ ಮೇಲಿನ ನನ್ನ ಹಕ್ಕನ್ನು ಬಿಟ್ಟುಕೊಡಲು ಯಾವುದೇ ಹಿಂಜರಿಕೆಯಿಲ್ಲ. ಈ ವಿವಾದವು ಅನಿರ್ದಿಷ್ಟವಾಗಿ ಮುಂದುವರಿಯುವುದು ಮತ್ತು ಸಂಸತ್ತಿನಲ್ಲಿ ಮತ್ತೆ ಪ್ರಸ್ತಾಪಿಸುವುದು ನನಗೆ ಇಷ್ಟವಿಲ್ಲ ಎಂದಿದ್ದರು ಎಂದು” ಹೇಳಿದ್ದರು.

ಹಾಗಿದ್ದರೆ, ನಿಜವಾಗಿಯೂ ಕಾಂಗ್ರೆಸ್‌ ಸರ್ಕಾರ ಅಥವಾ ಜವಹರಲಾಲ್ ನೆಹರು, ಇಂದಿರಾ ಗಾಂಧಿ ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟು ಕೊಟ್ಟರಾ? ಎಂಬುವುದನ್ನು ನೋಡೋಣಾ.

ಫ್ಯಾಕ್ಟ್‌ಚೆಕ್ : ಈಗ ‘ಕಚ್ಚತೀವು’ ಎಂದು ಕರೆಯಲ್ಪಡುವ ಪ್ರದೇಶವು 14ನೇ ಶತಮಾನದಲ್ಲಿ ಜ್ವಾಲಾಮುಖಿ ಸ್ಫೋಟದಿಂದ ನಿರ್ಮಾಣವಾದ ದ್ವೀಪವಾಗಿದೆ. ಇದು ಶ್ರೀಲಂಕಾದ ಜಾಫ್ನಾ ಸಾಮ್ರಾಜ್ಯದಿಂದ ನಿಯಂತ್ರಿಸಲ್ಪಟ್ಟಿತ್ತು. ಕಚ್ಚತೀವು ದ್ವೀಪ ಭಾರತ ಮತ್ತು ಶ್ರೀಲಂಕಾದ ನಡುವಿನ ಪಾಕ್ ಜಲಸಂಧಿಯಲ್ಲಿದೆ. ಭಾರತದ ರಾಮೇಶ್ವರಂ ಕರಾವಳಿಯಿಂದ ಈಶಾನ್ಯ ದಿಕ್ಕಿನಲ್ಲಿದೆ. 285 ಎಕರೆ ವಿಸ್ತಾರವುಳ್ಳ ಈ ದ್ವೀಪವು ಕುಡಿಯಲು ನೀರಿಲ್ಲದ ಕಾರಣ ಜನ ವಸತಿಗೆ ಯೋಗ್ಯವಾಗಿಲ್ಲ.

ಈ ದ್ವೀಪವು ತಮಗೆ ಸೇರಿದ್ದು ಎಂದು ಶ್ರೀಲಂಕಾವು ಡಚ್ಚರು ಮತ್ತು ಬ್ರಿಟಿಷರ ಆಳ್ವಿಕೆ ಅವಧಿಯ ದಾಖಲೆಗಳನ್ನು ತೋರಿಸಿತ್ತು. ರಾಮನಾಥಪುರದ ಅರಸು ಮನೆತನ ಇದರ ಒಡೆತನ ಹೊಂದಿತ್ತು ಎಂದು ಪ್ರತಿಪಾದಿಸಿತ್ತಾದರೂ, ಅದನ್ನು ಬೆಂಬಲಿಸುವ ಯಾವುದೇ ದಾಖಲೆಗಳನ್ನು ಒದಗಿಸಿರಲಿಲ್ಲ. ಎರಡು ದಶಕಕ್ಕೂ ಮೀರಿದ ಅವಧಿಯಲ್ಲಿ ಹಲವು ಸುತ್ತಿನ ಮಾತುಕತೆಗಳ ನಂತರ 1973ರಲ್ಲಿ ಭಾರತ–ಶ್ರೀಲಂಕಾ ಜಲಗಡಿಯನ್ನು ಅಂತಿಮಗೊಳಿಸಲು ನಿರ್ಧರಿಸಲಾಯಿತು. ಆ ಸಂಬಂಧ 1974ರಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು.

1974ರಲ್ಲಿ ಒಪ್ಪಂದಲ್ಲಿ ಏನಿದೆ?

1974ರ ಒಪ್ಪಂದದಲ್ಲಿ ಗುರುತಿಸಲಾದ ಜಲಗಡಿಯ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾಕ್ಕೆ ಸೇರಿತು. ಆದರೆ, ಈ ದ್ವೀಪವನ್ನು ಶ್ರೀಲಂಕಾದಿಂದ ಪಡೆದುಕೊಳ್ಳಬೇಕು ಎಂಬ ಕೂಗೂ ರಾಜಕೀಯ ವಲಯದಲ್ಲಿ ಇದ್ದೇ ಇತ್ತು. ಈ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಪ್ರಶ್ನೆಗಳನ್ನು ಎತ್ತಿದಾಗ ಎಲ್ಲಾ ಸರ್ಕಾರಗಳು, ಕಚ್ಚತೀವು ದ್ವೀಪದ ವಿಚಾರ ಈಗಾಗಲೇ ಮುಗಿದಿದೆ. ಅಲ್ಲಿನ ಕೆಲವು ಹಕ್ಕುಗಳ ಬಗ್ಗೆ ಮಾತ್ರ ವಿವಾದವಿದೆ ಎಂದೇ ಹೇಳಿಕೆ ನೀಡಿದ್ದವು.

ಈ ಬಗ್ಗೆ ಪ್ರಶ್ನೆ ಕೇಳಿ, ಅಲಾಡಿ ಗುರುಸ್ವಾಮಿ ಅವರು 2015ರ ಜನವರಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು. ಸಚಿವೆ ಸುಷ್ಮಾ ಸ್ವರಾಜ್‌ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆ ಅರ್ಜಿಗೆ ಅದೇ ಜನವರಿ 27ರಂದು ಉತ್ತರ ನೀಡಿತ್ತು.

ಉತ್ತರದಲ್ಲಿ, ‘1974 ಮತ್ತು 1976ರ ಒಪ್ಪಂದಗಳ ಪ್ರಕಾರ ಕಚ್ಚತೀವು ದ್ವೀಪವು ಶ್ರೀಲಂಕಾದ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲಿಯವರೆಗೆ ಆ ದ್ವೀಪವು ಯಾರ ವ್ಯಾಪ್ತಿಗೆ ಸೇರುತ್ತದೆ ಎಂಬುದನ್ನು ಗುರುತಿಸಿರಲೇ ಇಲ್ಲ. ಹೀಗಾಗಿ ಎರಡೂ ದೇಶಗಳ ಮಧ್ಯೆ ಜಲಗಡಿಯನ್ನು ಗುರುತಿಸುವ ಅವಧಿಯಲ್ಲಿ ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಡುವ ಅಥವಾ ಸ್ವಾಧೀನಪಡಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸಚಿವಾಲಯವು ವಿವರಿಸಿತ್ತು.

ಅಲ್ಲದೆ, ಜಲ ಒಪ್ಪಂದಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಉತ್ತರದೊಂದಿಗೆ ನೀಡಿತ್ತು. ಮೋದಿ ಅವರ ಸರ್ಕಾರದ್ದೇ ಸಚಿವಾಲಯವು ಅಧಿಕೃತವಾಗಿ ನೀಡಿದ್ದ ದಾಖಲೆಗಳ ಪ್ರಕಾರ ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲ ಎಂದು ಏಪ್ರಿಲ್ 2, 2024ರಂದು ಪ್ರಜಾವಾಣಿ ಪ್ರಕಟಿಸಿದ ವರದಿಯಲ್ಲಿ ಉಲ್ಲೇಖಿಸಿದೆ.

ಪ್ರಜಾವಾಣಿ ವರದಿಯ ಲಿಂಕ್ ಇಲ್ಲಿದೆ 

ಪ್ರಧಾನಿ ಮೋದಿ ನೇತೃತ್ವದ ಸರ್ಕಾರವೇ ಈ ಹಿಂದೆ ಆರ್‌ಟಿಐ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತಾ, ‘ಕಚ್ಚತೀವು ದ್ವೀಪವು ಎಂದಿಗೂ ಭಾರತಕ್ಕೆ ಸೇರಿರಲೇ ಇಲ್ಲಎಂದು ಉತ್ತರಿಸಿತ್ತು. ತಮ್ಮದೇ ಸರ್ಕಾರ ನೀಡಿದ್ದ ಉತ್ತರಕ್ಕೆ ವ್ಯತಿರಿಕ್ತವಾದ ಆರೋಪವನ್ನು ಈಗ ಪ್ರಧಾನಿ ಮಾಡಿದ್ದಾರೆ. ಹಾಗಾಗಿ, ಇದು ಕಚ್ಚತೀವು ದ್ವೀಪದ ವಿಚಾರ ಮುಂದಿಟ್ಟುಕೊಂಡು 2024ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಸ್ಥಾನವನ್ನು ಗೆಲ್ಲಲು ಮಾಡುತ್ತಿರುವ ತಂತ್ರ ಎಂದೇ ಹೇಳಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಇದು ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

ನಾವು ನಡೆಸಿದ ಪರಿಶೀಲನೆ ಪ್ರಕಾರ, ಮೋದಿ ಸರ್ಕಾರವೇ ನೀಡಿದ ಮಾಹಿತಿ ಪ್ರಕಾರ ಕಚ್ಚತೀವು ದ್ವೀಪ ಎಂದಿಗೂ ಭಾರತದ ಭಾಗವಾಗಿ ಇರಲೇ ಇಲ್ಲ. ಹೀಗಿರುವಾಗ ಅದನ್ನು ಕಾಂಗ್ರೆಸ್ ಸರ್ಕಾರ ಶ್ರೀಲಂಕಾಗೆ ಬಿಟ್ಟು ಕೊಡುವ ಪ್ರಮೇಯವೇ ಬರುವುದಿಲ್ಲ. ಆದ್ದರಿಂದ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ: Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...