Homeಫ್ಯಾಕ್ಟ್‌ಚೆಕ್Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

- Advertisement -
- Advertisement -

“ಒಂದು ಕಡೆ ಬಿಜೆಪಿ ಜನರನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಧರ್ಮ, ಪ್ರದೇಶದ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದೆ” ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿರುವುದಾಗಿ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಇಂಟರ್‌ನಲ್ಲಿ ಸಂಬಂಧಿತ ಕೀವರ್ಡ್ ಹಾಕಿ ಹುಡುಕಾಡಿದ್ದೇವೆ. ಈ ವೇಳೆ ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಮಗೆ ದೊರೆತಿದೆ.

ಈ ವಿಡಿಯೋ ಮಾರ್ಚ್‌ 2,2024ರಂದು ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಪುನರಾರಂಭದ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾಡಿರುವ ಭಾಷಣದ್ದು ಎಂದು ತಿಳಿದು ಬಂದಿದೆ.

“Bharat Jodo Nyay Yatra flag handover ceremony in Morena, Madhya Pradesh”ಎಂಬ ಶೀರ್ಷಿಕೆಯ ನೇರ ಪ್ರಸಾರದ ವಿಡಿಯೋ, ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯು 2 ಮಾರ್ಚ್ 2024 ರಂದು ರಾಜಸ್ಥಾನದಿಂದ ಮಧ್ಯಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ಮೊರೆನಾ ನಗರದ ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಧ್ವಜ ಹಸ್ತಾಂತರ ಸಮಾರಂಭದ್ದು ಎಂದು ಗೊತ್ತಾಗಿದೆ.

ಒಟ್ಟು 43 ನಿಮಿಷ 35 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಪರಿಶೀಲಿಸಿದಾಗ, 20 ನಿಮಿಷ 11 ಸೆಕೆಂಡ್‌ನಿಂದ 20 ನಿಮಿಷ 30 ಸೆಕೆಂಡ್‌ ನಡುವೆ ರಾಹುಲ್ ಗಾಂಧಿಯವರು ವೈರಲ್ ಕ್ಲಿಪ್‌ಗೆ ಸಂಬಂಧಿತ ಹೇಳಿಕೆ ನೀಡಿರುವುದು ಕಂಡು ಬಂದಿದೆ. ಆದರೆ, ಇಲ್ಲಿ ರಾಹುಲ್ ಗಾಂಧಿಯವರ ಭಾಷಣವನ್ನು ಎಡಿಟ್‌ ಮಾಡಲಾಗಿದೆ.

ಕಾಂಗ್ರೆಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿರುವ ರಾಹುಲ್ ಗಾಂಧಿಯವರ ಮೂಲ ವಿಡಿಯೋದಲ್ಲಿ “ಬಿಜೆಪಿ ಕೆ ಲೋಗ್ ಏಕ್ ಧರ್ಮ್ ಕೋ ದುಸ್ರೇ ಧರ್ಮ್ ಸೇ ಬಾಟ್‌ ರಹೇ ಹೈ, ಏಕ್ ಜಾಥ್ ಕೋ ದುಸ್ರೆ ಜಾತ್ ಸೆ ಬಾಟ್‌ ರಹೇ ಹೈ, ಏಕ್ ಪ್ರದೇಶ್ ಕೋ ದುಸ್ರೆ ಪ್ರದೇಶ್ ಸೇ ಬಾಟ್‌ ರಹೇ ಹೈ, ಔರ್ ದುಸ್ರಿ ಸಾಬ್ ತರಫ್ ಕಾಂಗ್ರೆಸ್ ಪಾರ್ಟಿ ಕೋ ಏಕ್ ಸಾಥ್ ಲೇನ್ ಕಿ ಕೋಶಿಶ್ ಕರ್ ರಹೀ ಹೈ” ಎಂದು ಹೇಳಿದ್ದಾರೆ. ಇದನ್ನು ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿದಾಗ, “ಬಿಜೆಪಿಯವರು ಧರ್ಮ, ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಪಕ್ಷವು ಜನರನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಾಧ್ಯಮ ವರದಿಗಳು ಕೂಡ ಮಧ್ಯಪ್ರದೇಶದ ಮೊರೆನಾದಲ್ಲಿ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಮೂಲ ಸಾರಾಂಶವನ್ನು ಹೇಳಿವೆ. ಮೂಲ ವಿಡಿಯೋವನ್ನು 20 ನಿಮಿಷ 11 ಸೆಕೆಂಡ್‌ನಿಂದ 20 ನಿಮಿಷ 30 ಸೆಕೆಂಡ್‌ಗಳ ನಡುವೆ ಎಡಿಟ್ ಮಾಡಲಾಗಿದೆ ಮತ್ತು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೊನೆಯದಾಗಿ ಹೇಳುವುದಾದರೆ, “ಕಾಂಗ್ರೆಸ್ ಪಕ್ಷವು ಧರ್ಮ, ಜಾತಿ ಮತ್ತು ಪ್ರದೇಶಗಳ ಆಧಾರದಲ್ಲಿ ದೇಶವನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿರುವುದಾಗಿ ಆರೋಪಿಸಿ, ರಾಹುಲ್ ಗಾಂಧಿಯವರ ಎಡಿಟೆಡ್ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: Fact Check: ಅಖಿಲೇಶ್ ಯಾದವ್ ದಂಪತಿ ಅತೀಕ್ ಅಹ್ಮದ್ ಸಮಾಧಿಗೆ ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...