Homeಫ್ಯಾಕ್ಟ್‌ಚೆಕ್Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

- Advertisement -
- Advertisement -

“ಒಂದು ಕಡೆ ಬಿಜೆಪಿ ಜನರನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಧರ್ಮ, ಪ್ರದೇಶದ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದೆ” ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿರುವುದಾಗಿ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಇಂಟರ್‌ನಲ್ಲಿ ಸಂಬಂಧಿತ ಕೀವರ್ಡ್ ಹಾಕಿ ಹುಡುಕಾಡಿದ್ದೇವೆ. ಈ ವೇಳೆ ರಾಹುಲ್ ಗಾಂಧಿಯವರ ಭಾಷಣದ ಮೂಲ ವಿಡಿಯೋ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಮಗೆ ದೊರೆತಿದೆ.

ಈ ವಿಡಿಯೋ ಮಾರ್ಚ್‌ 2,2024ರಂದು ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಪುನರಾರಂಭದ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾಡಿರುವ ಭಾಷಣದ್ದು ಎಂದು ತಿಳಿದು ಬಂದಿದೆ.

“Bharat Jodo Nyay Yatra flag handover ceremony in Morena, Madhya Pradesh”ಎಂಬ ಶೀರ್ಷಿಕೆಯ ನೇರ ಪ್ರಸಾರದ ವಿಡಿಯೋ, ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯು 2 ಮಾರ್ಚ್ 2024 ರಂದು ರಾಜಸ್ಥಾನದಿಂದ ಮಧ್ಯಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ಮೊರೆನಾ ನಗರದ ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಧ್ವಜ ಹಸ್ತಾಂತರ ಸಮಾರಂಭದ್ದು ಎಂದು ಗೊತ್ತಾಗಿದೆ.

ಒಟ್ಟು 43 ನಿಮಿಷ 35 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಪರಿಶೀಲಿಸಿದಾಗ, 20 ನಿಮಿಷ 11 ಸೆಕೆಂಡ್‌ನಿಂದ 20 ನಿಮಿಷ 30 ಸೆಕೆಂಡ್‌ ನಡುವೆ ರಾಹುಲ್ ಗಾಂಧಿಯವರು ವೈರಲ್ ಕ್ಲಿಪ್‌ಗೆ ಸಂಬಂಧಿತ ಹೇಳಿಕೆ ನೀಡಿರುವುದು ಕಂಡು ಬಂದಿದೆ. ಆದರೆ, ಇಲ್ಲಿ ರಾಹುಲ್ ಗಾಂಧಿಯವರ ಭಾಷಣವನ್ನು ಎಡಿಟ್‌ ಮಾಡಲಾಗಿದೆ.

ಕಾಂಗ್ರೆಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿರುವ ರಾಹುಲ್ ಗಾಂಧಿಯವರ ಮೂಲ ವಿಡಿಯೋದಲ್ಲಿ “ಬಿಜೆಪಿ ಕೆ ಲೋಗ್ ಏಕ್ ಧರ್ಮ್ ಕೋ ದುಸ್ರೇ ಧರ್ಮ್ ಸೇ ಬಾಟ್‌ ರಹೇ ಹೈ, ಏಕ್ ಜಾಥ್ ಕೋ ದುಸ್ರೆ ಜಾತ್ ಸೆ ಬಾಟ್‌ ರಹೇ ಹೈ, ಏಕ್ ಪ್ರದೇಶ್ ಕೋ ದುಸ್ರೆ ಪ್ರದೇಶ್ ಸೇ ಬಾಟ್‌ ರಹೇ ಹೈ, ಔರ್ ದುಸ್ರಿ ಸಾಬ್ ತರಫ್ ಕಾಂಗ್ರೆಸ್ ಪಾರ್ಟಿ ಕೋ ಏಕ್ ಸಾಥ್ ಲೇನ್ ಕಿ ಕೋಶಿಶ್ ಕರ್ ರಹೀ ಹೈ” ಎಂದು ಹೇಳಿದ್ದಾರೆ. ಇದನ್ನು ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿದಾಗ, “ಬಿಜೆಪಿಯವರು ಧರ್ಮ, ಜಾತಿ ಮತ್ತು ಪ್ರದೇಶದ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಪಕ್ಷವು ಜನರನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮಾಧ್ಯಮ ವರದಿಗಳು ಕೂಡ ಮಧ್ಯಪ್ರದೇಶದ ಮೊರೆನಾದಲ್ಲಿ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಮೂಲ ಸಾರಾಂಶವನ್ನು ಹೇಳಿವೆ. ಮೂಲ ವಿಡಿಯೋವನ್ನು 20 ನಿಮಿಷ 11 ಸೆಕೆಂಡ್‌ನಿಂದ 20 ನಿಮಿಷ 30 ಸೆಕೆಂಡ್‌ಗಳ ನಡುವೆ ಎಡಿಟ್ ಮಾಡಲಾಗಿದೆ ಮತ್ತು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಕೊನೆಯದಾಗಿ ಹೇಳುವುದಾದರೆ, “ಕಾಂಗ್ರೆಸ್ ಪಕ್ಷವು ಧರ್ಮ, ಜಾತಿ ಮತ್ತು ಪ್ರದೇಶಗಳ ಆಧಾರದಲ್ಲಿ ದೇಶವನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿರುವುದಾಗಿ ಆರೋಪಿಸಿ, ರಾಹುಲ್ ಗಾಂಧಿಯವರ ಎಡಿಟೆಡ್ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: Fact Check: ಅಖಿಲೇಶ್ ಯಾದವ್ ದಂಪತಿ ಅತೀಕ್ ಅಹ್ಮದ್ ಸಮಾಧಿಗೆ ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...