Homeಫ್ಯಾಕ್ಟ್‌ಚೆಕ್Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

- Advertisement -
- Advertisement -

ಕಾಂಗ್ರೆಸ್ ಅಥವಾ ಇಂಡಿಯಾ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ’50 ಶೇ.ಮೀಸಲಾತಿಯನ್ನು ತೆಗೆದು ಹಾಕಲಾಗುವುದು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

‘Students Facts’ಎಂಬ ಹೆಸರಿನಲ್ಲಿ ಹರಿದಾಡುತ್ತಿರುವ ಪೋಸ್ಟರ್‌ನಲ್ಲಿ ಮೇಲಿನಂತೆ ಹೇಳಲಾಗಿದೆ.

ಫ್ಯಾಕ್ಟ್‌ಚೆಕ್‌ : ಮೀಸಲಾತಿ ಹೆಚ್ಚಳದ ಬಗ್ಗೆ ಸದಾ ಮಾತನಾಡುವ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿಯನ್ನು ತೆಗೆದು ಹಾಕುವ ಬಗ್ಗೆ ಮಾತನಾಡಿದ್ದಾರೆಯೇ? ಎಂಬ ಬಗ್ಗೆ ನಾನುಗೌರಿ.ಕಾಂ ಫ್ಯಾಕ್ಟ್ ಚೆಕ್ ಮಾಡಿದೆ.

ರಾಹುಲ್ ಗಾಂಧಿಯವರ ಹೇಳಿಕೆಯ ಕುರಿತು ಫೆಬ್ರವರಿ 6,2024ರಂದು ನಾವು (ನಾನುಗೌರಿ) ‘ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 50% ಮೀಸಲಾತಿ ಮಿತಿ ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ‘ ಸುದ್ದಿಯನ್ನು ಪ್ರಕಟಿಸಿದ್ದೇವೆ. ಆ ಸುದ್ದಿಯ ಪ್ರಕಾರ, ‘50% ಮೀಸಲಾತಿ ಮಿತಿಯನ್ನು ತೆಗೆದು ಹಾಕುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆಯೇ ಹೊರತು 50% ಮೀಸಲಾತಿಯನ್ನೇ ರದ್ದುಪಡಿಸುತ್ತೇವೆ ಎಂದಿಲ್ಲ.

ಮಣಿಪುರದಿಂದ-ಮುಂಬೈಗೆ ರಾಹುಲ್ ಗಾಂಧಿ ಕೈಗೊಂಡಿರುವ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಫೆ.5ರಂದು ಜಾರ್ಖಂಡ್‌ನ ರಾಂಚಿಗೆ ತಲುಪಿತ್ತು. ಅಲ್ಲಿ ಬುಡಕ್ಕಟ್ಟು ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, 50% ಮೀಸಲಾತಿ ಮಿತಿಯನ್ನು ತೆಗೆದುಹಾಕಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಮೀಸಲಾತಿಯನ್ನು ರದ್ದುಪಡಿಸುವ ಬಗ್ಗೆ ಹೇಳಿಕೆ ಕೊಟ್ಟಿಲ್ಲ.

ರಾಹುಲ್ ಗಾಂಧಿಯವರ ಹೇಳಿಕೆಯ ವಿಡಿಯೋವನ್ನು ಫೆ.6,2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ ಹಿಂದಿ ಭಾಷಣದ ಕನ್ನಡ ಭಾಷಾಂತರವೂ ಅಕ್ಷರ ರೂಪದಲ್ಲಿದೆ. ಯಾರೂ ಬೇಕಾದರು ನೋಡಿ ಅರ್ಥೈಸಿಕೊಳ್ಳಬಹುದು.

ವಿಡಿಯೋದ ಜೊತೆಗೆ “ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಾಡುವ ಮೊದಲ ಕೆಲಸವೇ ‘ಮೀಸಲಾತಿಗೆ ಇರುವ ಮಿತಿ’ಯನ್ನು ಕಿತ್ತೆಸೆಯುವುದು ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದರು.

ಹಾಗಾಗಿ, ರಾಹುಲ್ ಗಾಂಧಿ ಮೀಸಲಾತಿ ‘ಮಿತಿ’ಯನ್ನು ಕಿತ್ತೆಸೆಯುತ್ತೇವೆ ಎಂದಿದ್ದಾರೆಯೇ ಹೊರತು ಮೀಸಲಾತಿಯನ್ನೇ ತೆಗೆದು ಹಾಕುತ್ತೇವೆ ಎಂದಿಲ್ಲ. ವೈರಲ್ ಪೋಸ್ಟರ್‌ನಲ್ಲಿ ತಪ್ಪು ಮಾಹಿತಿಯನ್ನು ಹರಡಲಾಗಿದೆ.

ಇದನ್ನೂ ಓದಿ: Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...