Homeಫ್ಯಾಕ್ಟ್‌ಚೆಕ್FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

- Advertisement -
- Advertisement -

ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಐತಿಹಾಸಿಕ ಅನ್ಯಾಯವೆಸಗಿದೆ ಮತ್ತು ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡಿದೆ ಎಂದು ಬಿಜೆಪಿ ಹೇಳಿದೆ.

ಇದಕ್ಕೂ ಮುನ್ನ ಹೇಳಿಕೆ ಕೊಟ್ಟಿದ್ದ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ (ಎನ್‌ಸಿಬಿಸಿ) ಅಧ್ಯಕ್ಷ ಹಂಸರಾಜ್ ಅಹಿರ್, ರಾಜ್ಯದಲ್ಲಿ ಮೀಸಲಾತಿ ಉದ್ದೇಶಗಳಿಗಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಸಾಮಾಜಿಕ ನ್ಯಾಯದ ತತ್ವಗಳನ್ನು ಹಾಳು ಮಾಡಿದೆ ಎಂದಿದ್ದರು. ಸಾಮಾಜಿಕ ನ್ಯಾಯದ ಒಟ್ಟಾರೆ ಚೌಕಟ್ಟಿನ ಮೇಲೆ, ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಇಂತಹ ಮೀಸಲಾತಿಗಳ ಪ್ರಭಾವವನ್ನು ಅವರು ಪ್ರಶ್ನಿಸಿದ್ದರು.

 

ಹಾಗಾದರೆ, ಸಿದ್ದರಾಮಯ್ಯ ಸರ್ಕಾರ ನಿಜವಾಗಿಯೂ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದು ಮುಸ್ಲಿಮರಿಗೆ ನೀಡಿದೆಯಾ? ಎಂಬುವುದರ ವಾಸ್ತವ ಇಲ್ಲಿದೆ.

ಫ್ಯಾಕ್ಟ್‌ಚೆಕ್ : ವಾಸ್ತವ ಏನೆಂದರೆ, 1977ರಿಂದ ಕರ್ನಾಟಕದಲ್ಲಿ ಮುಸ್ಲಿಮರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಮರಿಗೆ ಮೀಸಲಾತಿಯ ಇತಿಹಾಸ :

ಕರ್ನಾಟಕ ಹಿಂದುಳಿದ ವರ್ಗಗಳ ಕುರಿತು ಎಲ್‌ಜಿ ಹಾವನೂರ್ ಅವರು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದು ಗುರುತಿಸಲಾಗಿತ್ತು. ವರದಿಯ ಶಿಫಾರಸುಗಳ ಆಧಾರದ ಮೇಲೆ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಅಡಿಯಲ್ಲಿ ವರ್ಗೀಕರಿಸಲಾಯಿತು (ಇತರ ವರ್ಗಗಳು ಹಿಂದುಳಿದ ಜಾತಿ, ಹಿಂದುಳಿದ ಬುಡಕಟ್ಟು ಮತ್ತು ವಿಶೇಷ ಗುಂಪು) ಮತ್ತು ಮುಸ್ಲಿಮರು ಸೇರಿದಂತೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಲು ಮಾರ್ಚ್ 1977 ರಲ್ಲಿ ಆದೇಶ ನೀಡಲಾಯಿತು. ಮೇ 1979 ರಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಗುಂಪಿನಲ್ಲಿ ಇರಿಸಲಾಯಿತು.

ನಂತರ ವೆಂಕಟ ಸ್ವಾಮಿ ನೇತೃತ್ವದ ಆಯೋಗವು ಮುಸ್ಲಿಮರನ್ನು ಮೀಸಲಾತಿಗೆ ಅರ್ಹರಾದ ಹಿಂದುಳಿದ ವರ್ಗ ಎಂದು ಗುರುತಿಸಿದಾಗ ಗುಂಪುಗಳನ್ನು ಬದಲಾಯಿಸಲಾಯಿತು. ಈ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಮುಸ್ಲಿಮರನ್ನು ಸಿ ಗುಂಪಿನ ಅಡಿಯಲ್ಲಿ ವರ್ಗೀಕರಿಸಲಾಯಿತು.

ನಂತರ, ನ್ಯಾಯಮೂರ್ತಿ ಒ.ಚಿನಪ್ಪ ರೆಡ್ಡಿ ನೇತೃತ್ವದ ಆಯೋಗವು ಹಿಂದುಳಿದ ವರ್ಗಗಳನ್ನು ಪ್ರವರ್ಗ 1 (ಅತ್ಯಂತ ಹಿಂದುಳಿದ), ಪ್ರವರ್ಗ 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ), ಪ್ರವರ್ಗ 2ಬಿ (ಹೆಚ್ಚು ಹಿಂದುಳಿದ), ಪ್ರವರ್ಗ 3ಎ (ಹಿಂದುಳಿದ), ಪ್ರವರ್ಗ 3ಬಿ (ತುಲನಾತ್ಮಕವಾಗಿ ಹಿಂದುಳಿದ) ಮತ್ತು ವರ್ಗ 4 (ಔದ್ಯೋಗಿಕ ಗುಂಪು) ಎಂದು ವರ್ಗೀಕರಿಸಿತ್ತು. ಸೆಪ್ಟೆಂಬರ್ 1994 ರಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸಲಾಯಿತು. ಅಲ್ಲಿ ಮುಸ್ಲಿಮರನ್ನು ವರ್ಗ 2 ಬಿ ಅಡಿಯಲ್ಲಿ ಇರಿಸಲಾಯಿತು. ಅಂದರೆ, ಪ್ರಸ್ತುತ ಇರುವ ಮೀಸಲಾತಿಯನ್ನು 30 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿದೆ.

ನಂತರ ಪ್ರೊ.ರವಿವರ್ಮ ಕುಮಾರ್ ನೇತೃತ್ವದ ಆಯೋಗವು ಔದ್ಯೋಗಿಕ ಗುಂಪು ವರ್ಗವನ್ನು ತೆಗೆದು ಹಾಕಿತು ಮತ್ತು ಅದನ್ನು ಇತರ ಗುಂಪುಗಳಿಗೆ ಒಳಪಡಿಸಲಾಯಿತು. ಮುಸ್ಲಿಮರನ್ನು 2 ಬಿ ವರ್ಗದಲ್ಲಿ ಇರಿಸಲಾಯಿತು. ಹದಿನೇಳು ಮುಸ್ಲಿಂ ಸಮುದಾಯಗಳನ್ನು ವರ್ಗ 1 (ಅತ್ಯಂತ ಹಿಂದುಳಿದ) ಮತ್ತು 19 ಮುಸ್ಲಿಂ ಸಮುದಾಯಗಳನ್ನು 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ) ಅಡಿಯಲ್ಲಿ ವರ್ಗೀಕರಿಸಲಾಗಿದೆ.

ರಾಜ್ಯದಲ್ಲಿ ಒಬಿಸಿ ವರ್ಗವು 32% ಮೀಸಲಾತಿಯನ್ನು ಹೊಂದಿದೆ. ವಿಭಾಗ 1 ಮತ್ತು 2ಎ ನಲ್ಲಿ ಪಟ್ಟಿ ಮಾಡಲಾದ 36 ಮುಸ್ಲಿಂ ಸಮುದಾಯಗಳು ಕೂಡ ಒಬಿಸಿಗಳ ಮೂಲ ಪಟ್ಟಿಯಲ್ಲಿ ಪಟ್ಟಿ ಮಾಡಲಾಗಿದೆ. ‘ಕ್ರೀಮಿ ಲೇಯರ್’ (8 ಲಕ್ಷ ವಾರ್ಷಿಕ ಆದಾಯ ಅಥವಾ ಅದಕ್ಕಿಂತ ಹೆಚ್ಚು) ಇರಬಾರದು ಎಂದು ನಿರ್ಧರಿಸಿದವರು ಮಾತ್ರ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿಗೆ ಅರ್ಹರಾಗಿರುತ್ತಾರೆ.

2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರ 2ಬಿ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದು ಹಾಕಿ ಒಕ್ಕಲಿಗರನ್ನು 2ಸಿ ವರ್ಗದಲ್ಲಿ ಮತ್ತು ಲಿಂಗಾಯತರನ್ನು 2ಡಿ ವರ್ಗದಲ್ಲಿ ವಿಭಜಿಸಿ ಅವರ ಮೀಸಲಾತಿ ಹೆಚ್ಚಿಸಲು ನಿರ್ಧರಿಸಿತು. ವರ್ಗ 1 ಮತ್ತು 2ಎ ಅಡಿಯಲ್ಲಿ ಮುಸ್ಲಿಮರು ಒಬಿಸಿ ಮೀಸಲಾತಿಯ ಪ್ರಯೋಜನ ಪಡೆಯುವುದನ್ನು ಮುಂದುವರಿಸಲಿದ್ದಾರೆ ಎಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.

ಮುಸ್ಲಿಮರ 4% ಮೀಸಲಾತಿ ರದ್ದುಗೊಳಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆಗ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಸರ್ಕಾರ ಮೀಸಲಾತಿ ರದ್ದುಗೊಳಿಸುವುದಿಲ್ಲ ಹಿಂದಿನ ನೀತಿಯು ಮುಂದಿನ ಆದೇಶಗಳವರೆಗೆ ಮುಂದುವರಿಯಲಿದೆ ಎಂದು ಭರವಸೆ ನೀಡಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ, ಸಿದ್ದರಾಮಯ್ಯ ಸರ್ಕಾರ ಅದೇ ಆದೇಶದ ಅಡಿಯಲ್ಲಿ ಮೀಸಲಾತಿಯನ್ನು ಮುಂದುವರೆಸಿದೆ.

ಸಾಂವಿಧಾನಿಕ ಬಲ :

ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಮೀಸಲಾತಿ ಒದಗಿಸುವುದು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುತ್ತದೆ. ಮೀಸಲಾತಿಯ ಶೇಕಡಾವಾರು ಪ್ರತಿ ರಾಜ್ಯದಲ್ಲಿ ಬದಲಾಗುತ್ತದೆ. ಮೀಸಲಾತಿಯು ಧರ್ಮಾಧಾರಿತವಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಆಧರಿಸಿದೆ. ಕೆಲವು ರಾಜ್ಯಗಳು ಒಟ್ಟಾರೆಯಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ, ಇತರ ರಾಜ್ಯಗಳು ಕೆಲವು ವರ್ಗದ ಮುಸ್ಲಿಮರಿಗೆ ಮಾತ್ರ ಮೀಸಲಾತಿಯನ್ನು ಒದಗಿಸುತ್ತವೆ.

ಯಾವುದೇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರ ಅಥವಾ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪ್ರಗತಿಗಾಗಿ ವಿಶೇಷ ನಿಬಂಧನೆಗಳನ್ನು ರೂಪಿಸಲು ಸಂವಿಧಾನದ 15 (4) ನೇ ವಿಧಿ ರಾಜ್ಯಕ್ಕೆ ಅವಕಾಶ ನೀಡುತ್ತದೆ.

ಸಂವಿಧಾನ ವಿಧಿ 16 (4) ಕೂಡ ರಾಜ್ಯಕ್ಕೆ ಈ ಅವಕಾಶ ನೀಡುತ್ತದೆ. ಈ ವಿಧಿಯು ರಾಜ್ಯವು ಯಾವುದೇ ಹಿಂದುಳಿದ ವರ್ಗದ ನಾಗರಿಕರ ಪರವಾಗಿ ನೇಮಕಾತಿಗಳು ಅಥವಾ ಹುದ್ದೆಗಳ ಮೀಸಲಾತಿಗೆ ಯಾವುದೇ ನಿಬಂಧನೆ ರೂಪಿಸುವುದನ್ನು ತಡೆಯುವುದಿಲ್ಲ.

ಮಾಹಿತಿ ಕೃಪೆ : ದಿ ನ್ಯೂಸ್‌ ಮಿನಿಟ್ 

ಇದನ್ನೂ ಓದಿ : FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...