Homeಫ್ಯಾಕ್ಟ್‌ಚೆಕ್FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

- Advertisement -
- Advertisement -

ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಐತಿಹಾಸಿಕ ಅನ್ಯಾಯವೆಸಗಿದೆ ಮತ್ತು ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡಿದೆ ಎಂದು ಬಿಜೆಪಿ ಹೇಳಿದೆ.

ಇದಕ್ಕೂ ಮುನ್ನ ಹೇಳಿಕೆ ಕೊಟ್ಟಿದ್ದ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ (ಎನ್‌ಸಿಬಿಸಿ) ಅಧ್ಯಕ್ಷ ಹಂಸರಾಜ್ ಅಹಿರ್, ರಾಜ್ಯದಲ್ಲಿ ಮೀಸಲಾತಿ ಉದ್ದೇಶಗಳಿಗಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಸಾಮಾಜಿಕ ನ್ಯಾಯದ ತತ್ವಗಳನ್ನು ಹಾಳು ಮಾಡಿದೆ ಎಂದಿದ್ದರು. ಸಾಮಾಜಿಕ ನ್ಯಾಯದ ಒಟ್ಟಾರೆ ಚೌಕಟ್ಟಿನ ಮೇಲೆ, ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಇಂತಹ ಮೀಸಲಾತಿಗಳ ಪ್ರಭಾವವನ್ನು ಅವರು ಪ್ರಶ್ನಿಸಿದ್ದರು.

 

ಹಾಗಾದರೆ, ಸಿದ್ದರಾಮಯ್ಯ ಸರ್ಕಾರ ನಿಜವಾಗಿಯೂ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದು ಮುಸ್ಲಿಮರಿಗೆ ನೀಡಿದೆಯಾ? ಎಂಬುವುದರ ವಾಸ್ತವ ಇಲ್ಲಿದೆ.

ಫ್ಯಾಕ್ಟ್‌ಚೆಕ್ : ವಾಸ್ತವ ಏನೆಂದರೆ, 1977ರಿಂದ ಕರ್ನಾಟಕದಲ್ಲಿ ಮುಸ್ಲಿಮರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಮರಿಗೆ ಮೀಸಲಾತಿಯ ಇತಿಹಾಸ :

ಕರ್ನಾಟಕ ಹಿಂದುಳಿದ ವರ್ಗಗಳ ಕುರಿತು ಎಲ್‌ಜಿ ಹಾವನೂರ್ ಅವರು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದು ಗುರುತಿಸಲಾಗಿತ್ತು. ವರದಿಯ ಶಿಫಾರಸುಗಳ ಆಧಾರದ ಮೇಲೆ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಅಡಿಯಲ್ಲಿ ವರ್ಗೀಕರಿಸಲಾಯಿತು (ಇತರ ವರ್ಗಗಳು ಹಿಂದುಳಿದ ಜಾತಿ, ಹಿಂದುಳಿದ ಬುಡಕಟ್ಟು ಮತ್ತು ವಿಶೇಷ ಗುಂಪು) ಮತ್ತು ಮುಸ್ಲಿಮರು ಸೇರಿದಂತೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಲು ಮಾರ್ಚ್ 1977 ರಲ್ಲಿ ಆದೇಶ ನೀಡಲಾಯಿತು. ಮೇ 1979 ರಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಗುಂಪಿನಲ್ಲಿ ಇರಿಸಲಾಯಿತು.

ನಂತರ ವೆಂಕಟ ಸ್ವಾಮಿ ನೇತೃತ್ವದ ಆಯೋಗವು ಮುಸ್ಲಿಮರನ್ನು ಮೀಸಲಾತಿಗೆ ಅರ್ಹರಾದ ಹಿಂದುಳಿದ ವರ್ಗ ಎಂದು ಗುರುತಿಸಿದಾಗ ಗುಂಪುಗಳನ್ನು ಬದಲಾಯಿಸಲಾಯಿತು. ಈ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಮುಸ್ಲಿಮರನ್ನು ಸಿ ಗುಂಪಿನ ಅಡಿಯಲ್ಲಿ ವರ್ಗೀಕರಿಸಲಾಯಿತು.

ನಂತರ, ನ್ಯಾಯಮೂರ್ತಿ ಒ.ಚಿನಪ್ಪ ರೆಡ್ಡಿ ನೇತೃತ್ವದ ಆಯೋಗವು ಹಿಂದುಳಿದ ವರ್ಗಗಳನ್ನು ಪ್ರವರ್ಗ 1 (ಅತ್ಯಂತ ಹಿಂದುಳಿದ), ಪ್ರವರ್ಗ 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ), ಪ್ರವರ್ಗ 2ಬಿ (ಹೆಚ್ಚು ಹಿಂದುಳಿದ), ಪ್ರವರ್ಗ 3ಎ (ಹಿಂದುಳಿದ), ಪ್ರವರ್ಗ 3ಬಿ (ತುಲನಾತ್ಮಕವಾಗಿ ಹಿಂದುಳಿದ) ಮತ್ತು ವರ್ಗ 4 (ಔದ್ಯೋಗಿಕ ಗುಂಪು) ಎಂದು ವರ್ಗೀಕರಿಸಿತ್ತು. ಸೆಪ್ಟೆಂಬರ್ 1994 ರಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸಲಾಯಿತು. ಅಲ್ಲಿ ಮುಸ್ಲಿಮರನ್ನು ವರ್ಗ 2 ಬಿ ಅಡಿಯಲ್ಲಿ ಇರಿಸಲಾಯಿತು. ಅಂದರೆ, ಪ್ರಸ್ತುತ ಇರುವ ಮೀಸಲಾತಿಯನ್ನು 30 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿದೆ.

ನಂತರ ಪ್ರೊ.ರವಿವರ್ಮ ಕುಮಾರ್ ನೇತೃತ್ವದ ಆಯೋಗವು ಔದ್ಯೋಗಿಕ ಗುಂಪು ವರ್ಗವನ್ನು ತೆಗೆದು ಹಾಕಿತು ಮತ್ತು ಅದನ್ನು ಇತರ ಗುಂಪುಗಳಿಗೆ ಒಳಪಡಿಸಲಾಯಿತು. ಮುಸ್ಲಿಮರನ್ನು 2 ಬಿ ವರ್ಗದಲ್ಲಿ ಇರಿಸಲಾಯಿತು. ಹದಿನೇಳು ಮುಸ್ಲಿಂ ಸಮುದಾಯಗಳನ್ನು ವರ್ಗ 1 (ಅತ್ಯಂತ ಹಿಂದುಳಿದ) ಮತ್ತು 19 ಮುಸ್ಲಿಂ ಸಮುದಾಯಗಳನ್ನು 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ) ಅಡಿಯಲ್ಲಿ ವರ್ಗೀಕರಿಸಲಾಗಿದೆ.

ರಾಜ್ಯದಲ್ಲಿ ಒಬಿಸಿ ವರ್ಗವು 32% ಮೀಸಲಾತಿಯನ್ನು ಹೊಂದಿದೆ. ವಿಭಾಗ 1 ಮತ್ತು 2ಎ ನಲ್ಲಿ ಪಟ್ಟಿ ಮಾಡಲಾದ 36 ಮುಸ್ಲಿಂ ಸಮುದಾಯಗಳು ಕೂಡ ಒಬಿಸಿಗಳ ಮೂಲ ಪಟ್ಟಿಯಲ್ಲಿ ಪಟ್ಟಿ ಮಾಡಲಾಗಿದೆ. ‘ಕ್ರೀಮಿ ಲೇಯರ್’ (8 ಲಕ್ಷ ವಾರ್ಷಿಕ ಆದಾಯ ಅಥವಾ ಅದಕ್ಕಿಂತ ಹೆಚ್ಚು) ಇರಬಾರದು ಎಂದು ನಿರ್ಧರಿಸಿದವರು ಮಾತ್ರ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿಗೆ ಅರ್ಹರಾಗಿರುತ್ತಾರೆ.

2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರ 2ಬಿ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದು ಹಾಕಿ ಒಕ್ಕಲಿಗರನ್ನು 2ಸಿ ವರ್ಗದಲ್ಲಿ ಮತ್ತು ಲಿಂಗಾಯತರನ್ನು 2ಡಿ ವರ್ಗದಲ್ಲಿ ವಿಭಜಿಸಿ ಅವರ ಮೀಸಲಾತಿ ಹೆಚ್ಚಿಸಲು ನಿರ್ಧರಿಸಿತು. ವರ್ಗ 1 ಮತ್ತು 2ಎ ಅಡಿಯಲ್ಲಿ ಮುಸ್ಲಿಮರು ಒಬಿಸಿ ಮೀಸಲಾತಿಯ ಪ್ರಯೋಜನ ಪಡೆಯುವುದನ್ನು ಮುಂದುವರಿಸಲಿದ್ದಾರೆ ಎಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.

ಮುಸ್ಲಿಮರ 4% ಮೀಸಲಾತಿ ರದ್ದುಗೊಳಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆಗ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಸರ್ಕಾರ ಮೀಸಲಾತಿ ರದ್ದುಗೊಳಿಸುವುದಿಲ್ಲ ಹಿಂದಿನ ನೀತಿಯು ಮುಂದಿನ ಆದೇಶಗಳವರೆಗೆ ಮುಂದುವರಿಯಲಿದೆ ಎಂದು ಭರವಸೆ ನೀಡಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ, ಸಿದ್ದರಾಮಯ್ಯ ಸರ್ಕಾರ ಅದೇ ಆದೇಶದ ಅಡಿಯಲ್ಲಿ ಮೀಸಲಾತಿಯನ್ನು ಮುಂದುವರೆಸಿದೆ.

ಸಾಂವಿಧಾನಿಕ ಬಲ :

ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಮೀಸಲಾತಿ ಒದಗಿಸುವುದು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುತ್ತದೆ. ಮೀಸಲಾತಿಯ ಶೇಕಡಾವಾರು ಪ್ರತಿ ರಾಜ್ಯದಲ್ಲಿ ಬದಲಾಗುತ್ತದೆ. ಮೀಸಲಾತಿಯು ಧರ್ಮಾಧಾರಿತವಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಆಧರಿಸಿದೆ. ಕೆಲವು ರಾಜ್ಯಗಳು ಒಟ್ಟಾರೆಯಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ, ಇತರ ರಾಜ್ಯಗಳು ಕೆಲವು ವರ್ಗದ ಮುಸ್ಲಿಮರಿಗೆ ಮಾತ್ರ ಮೀಸಲಾತಿಯನ್ನು ಒದಗಿಸುತ್ತವೆ.

ಯಾವುದೇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರ ಅಥವಾ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪ್ರಗತಿಗಾಗಿ ವಿಶೇಷ ನಿಬಂಧನೆಗಳನ್ನು ರೂಪಿಸಲು ಸಂವಿಧಾನದ 15 (4) ನೇ ವಿಧಿ ರಾಜ್ಯಕ್ಕೆ ಅವಕಾಶ ನೀಡುತ್ತದೆ.

ಸಂವಿಧಾನ ವಿಧಿ 16 (4) ಕೂಡ ರಾಜ್ಯಕ್ಕೆ ಈ ಅವಕಾಶ ನೀಡುತ್ತದೆ. ಈ ವಿಧಿಯು ರಾಜ್ಯವು ಯಾವುದೇ ಹಿಂದುಳಿದ ವರ್ಗದ ನಾಗರಿಕರ ಪರವಾಗಿ ನೇಮಕಾತಿಗಳು ಅಥವಾ ಹುದ್ದೆಗಳ ಮೀಸಲಾತಿಗೆ ಯಾವುದೇ ನಿಬಂಧನೆ ರೂಪಿಸುವುದನ್ನು ತಡೆಯುವುದಿಲ್ಲ.

ಮಾಹಿತಿ ಕೃಪೆ : ದಿ ನ್ಯೂಸ್‌ ಮಿನಿಟ್ 

ಇದನ್ನೂ ಓದಿ : FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...