Homeಫ್ಯಾಕ್ಟ್‌ಚೆಕ್FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

- Advertisement -
- Advertisement -

ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಐತಿಹಾಸಿಕ ಅನ್ಯಾಯವೆಸಗಿದೆ ಮತ್ತು ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡಿದೆ ಎಂದು ಬಿಜೆಪಿ ಹೇಳಿದೆ.

ಇದಕ್ಕೂ ಮುನ್ನ ಹೇಳಿಕೆ ಕೊಟ್ಟಿದ್ದ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ (ಎನ್‌ಸಿಬಿಸಿ) ಅಧ್ಯಕ್ಷ ಹಂಸರಾಜ್ ಅಹಿರ್, ರಾಜ್ಯದಲ್ಲಿ ಮೀಸಲಾತಿ ಉದ್ದೇಶಗಳಿಗಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರ ಸಾಮಾಜಿಕ ನ್ಯಾಯದ ತತ್ವಗಳನ್ನು ಹಾಳು ಮಾಡಿದೆ ಎಂದಿದ್ದರು. ಸಾಮಾಜಿಕ ನ್ಯಾಯದ ಒಟ್ಟಾರೆ ಚೌಕಟ್ಟಿನ ಮೇಲೆ, ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಇಂತಹ ಮೀಸಲಾತಿಗಳ ಪ್ರಭಾವವನ್ನು ಅವರು ಪ್ರಶ್ನಿಸಿದ್ದರು.

 

ಹಾಗಾದರೆ, ಸಿದ್ದರಾಮಯ್ಯ ಸರ್ಕಾರ ನಿಜವಾಗಿಯೂ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕನ್ನು ಕಸಿದು ಮುಸ್ಲಿಮರಿಗೆ ನೀಡಿದೆಯಾ? ಎಂಬುವುದರ ವಾಸ್ತವ ಇಲ್ಲಿದೆ.

ಫ್ಯಾಕ್ಟ್‌ಚೆಕ್ : ವಾಸ್ತವ ಏನೆಂದರೆ, 1977ರಿಂದ ಕರ್ನಾಟಕದಲ್ಲಿ ಮುಸ್ಲಿಮರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಮರಿಗೆ ಮೀಸಲಾತಿಯ ಇತಿಹಾಸ :

ಕರ್ನಾಟಕ ಹಿಂದುಳಿದ ವರ್ಗಗಳ ಕುರಿತು ಎಲ್‌ಜಿ ಹಾವನೂರ್ ಅವರು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದು ಗುರುತಿಸಲಾಗಿತ್ತು. ವರದಿಯ ಶಿಫಾರಸುಗಳ ಆಧಾರದ ಮೇಲೆ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಅಡಿಯಲ್ಲಿ ವರ್ಗೀಕರಿಸಲಾಯಿತು (ಇತರ ವರ್ಗಗಳು ಹಿಂದುಳಿದ ಜಾತಿ, ಹಿಂದುಳಿದ ಬುಡಕಟ್ಟು ಮತ್ತು ವಿಶೇಷ ಗುಂಪು) ಮತ್ತು ಮುಸ್ಲಿಮರು ಸೇರಿದಂತೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಲು ಮಾರ್ಚ್ 1977 ರಲ್ಲಿ ಆದೇಶ ನೀಡಲಾಯಿತು. ಮೇ 1979 ರಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಮುಸ್ಲಿಮರನ್ನು ಹಿಂದುಳಿದ ಸಮುದಾಯಗಳ ಗುಂಪಿನಲ್ಲಿ ಇರಿಸಲಾಯಿತು.

ನಂತರ ವೆಂಕಟ ಸ್ವಾಮಿ ನೇತೃತ್ವದ ಆಯೋಗವು ಮುಸ್ಲಿಮರನ್ನು ಮೀಸಲಾತಿಗೆ ಅರ್ಹರಾದ ಹಿಂದುಳಿದ ವರ್ಗ ಎಂದು ಗುರುತಿಸಿದಾಗ ಗುಂಪುಗಳನ್ನು ಬದಲಾಯಿಸಲಾಯಿತು. ಈ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಮುಸ್ಲಿಮರನ್ನು ಸಿ ಗುಂಪಿನ ಅಡಿಯಲ್ಲಿ ವರ್ಗೀಕರಿಸಲಾಯಿತು.

ನಂತರ, ನ್ಯಾಯಮೂರ್ತಿ ಒ.ಚಿನಪ್ಪ ರೆಡ್ಡಿ ನೇತೃತ್ವದ ಆಯೋಗವು ಹಿಂದುಳಿದ ವರ್ಗಗಳನ್ನು ಪ್ರವರ್ಗ 1 (ಅತ್ಯಂತ ಹಿಂದುಳಿದ), ಪ್ರವರ್ಗ 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ), ಪ್ರವರ್ಗ 2ಬಿ (ಹೆಚ್ಚು ಹಿಂದುಳಿದ), ಪ್ರವರ್ಗ 3ಎ (ಹಿಂದುಳಿದ), ಪ್ರವರ್ಗ 3ಬಿ (ತುಲನಾತ್ಮಕವಾಗಿ ಹಿಂದುಳಿದ) ಮತ್ತು ವರ್ಗ 4 (ಔದ್ಯೋಗಿಕ ಗುಂಪು) ಎಂದು ವರ್ಗೀಕರಿಸಿತ್ತು. ಸೆಪ್ಟೆಂಬರ್ 1994 ರಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸಲಾಯಿತು. ಅಲ್ಲಿ ಮುಸ್ಲಿಮರನ್ನು ವರ್ಗ 2 ಬಿ ಅಡಿಯಲ್ಲಿ ಇರಿಸಲಾಯಿತು. ಅಂದರೆ, ಪ್ರಸ್ತುತ ಇರುವ ಮೀಸಲಾತಿಯನ್ನು 30 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿದೆ.

ನಂತರ ಪ್ರೊ.ರವಿವರ್ಮ ಕುಮಾರ್ ನೇತೃತ್ವದ ಆಯೋಗವು ಔದ್ಯೋಗಿಕ ಗುಂಪು ವರ್ಗವನ್ನು ತೆಗೆದು ಹಾಕಿತು ಮತ್ತು ಅದನ್ನು ಇತರ ಗುಂಪುಗಳಿಗೆ ಒಳಪಡಿಸಲಾಯಿತು. ಮುಸ್ಲಿಮರನ್ನು 2 ಬಿ ವರ್ಗದಲ್ಲಿ ಇರಿಸಲಾಯಿತು. ಹದಿನೇಳು ಮುಸ್ಲಿಂ ಸಮುದಾಯಗಳನ್ನು ವರ್ಗ 1 (ಅತ್ಯಂತ ಹಿಂದುಳಿದ) ಮತ್ತು 19 ಮುಸ್ಲಿಂ ಸಮುದಾಯಗಳನ್ನು 2ಎ (ತುಲನಾತ್ಮಕವಾಗಿ ಹೆಚ್ಚು ಹಿಂದುಳಿದ) ಅಡಿಯಲ್ಲಿ ವರ್ಗೀಕರಿಸಲಾಗಿದೆ.

ರಾಜ್ಯದಲ್ಲಿ ಒಬಿಸಿ ವರ್ಗವು 32% ಮೀಸಲಾತಿಯನ್ನು ಹೊಂದಿದೆ. ವಿಭಾಗ 1 ಮತ್ತು 2ಎ ನಲ್ಲಿ ಪಟ್ಟಿ ಮಾಡಲಾದ 36 ಮುಸ್ಲಿಂ ಸಮುದಾಯಗಳು ಕೂಡ ಒಬಿಸಿಗಳ ಮೂಲ ಪಟ್ಟಿಯಲ್ಲಿ ಪಟ್ಟಿ ಮಾಡಲಾಗಿದೆ. ‘ಕ್ರೀಮಿ ಲೇಯರ್’ (8 ಲಕ್ಷ ವಾರ್ಷಿಕ ಆದಾಯ ಅಥವಾ ಅದಕ್ಕಿಂತ ಹೆಚ್ಚು) ಇರಬಾರದು ಎಂದು ನಿರ್ಧರಿಸಿದವರು ಮಾತ್ರ ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿಗೆ ಅರ್ಹರಾಗಿರುತ್ತಾರೆ.

2023ರಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರ 2ಬಿ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದು ಹಾಕಿ ಒಕ್ಕಲಿಗರನ್ನು 2ಸಿ ವರ್ಗದಲ್ಲಿ ಮತ್ತು ಲಿಂಗಾಯತರನ್ನು 2ಡಿ ವರ್ಗದಲ್ಲಿ ವಿಭಜಿಸಿ ಅವರ ಮೀಸಲಾತಿ ಹೆಚ್ಚಿಸಲು ನಿರ್ಧರಿಸಿತು. ವರ್ಗ 1 ಮತ್ತು 2ಎ ಅಡಿಯಲ್ಲಿ ಮುಸ್ಲಿಮರು ಒಬಿಸಿ ಮೀಸಲಾತಿಯ ಪ್ರಯೋಜನ ಪಡೆಯುವುದನ್ನು ಮುಂದುವರಿಸಲಿದ್ದಾರೆ ಎಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು.

ಮುಸ್ಲಿಮರ 4% ಮೀಸಲಾತಿ ರದ್ದುಗೊಳಿಸಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆಗ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಸರ್ಕಾರ ಮೀಸಲಾತಿ ರದ್ದುಗೊಳಿಸುವುದಿಲ್ಲ ಹಿಂದಿನ ನೀತಿಯು ಮುಂದಿನ ಆದೇಶಗಳವರೆಗೆ ಮುಂದುವರಿಯಲಿದೆ ಎಂದು ಭರವಸೆ ನೀಡಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ, ಸಿದ್ದರಾಮಯ್ಯ ಸರ್ಕಾರ ಅದೇ ಆದೇಶದ ಅಡಿಯಲ್ಲಿ ಮೀಸಲಾತಿಯನ್ನು ಮುಂದುವರೆಸಿದೆ.

ಸಾಂವಿಧಾನಿಕ ಬಲ :

ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಮೀಸಲಾತಿ ಒದಗಿಸುವುದು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುತ್ತದೆ. ಮೀಸಲಾತಿಯ ಶೇಕಡಾವಾರು ಪ್ರತಿ ರಾಜ್ಯದಲ್ಲಿ ಬದಲಾಗುತ್ತದೆ. ಮೀಸಲಾತಿಯು ಧರ್ಮಾಧಾರಿತವಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಆಧರಿಸಿದೆ. ಕೆಲವು ರಾಜ್ಯಗಳು ಒಟ್ಟಾರೆಯಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ, ಇತರ ರಾಜ್ಯಗಳು ಕೆಲವು ವರ್ಗದ ಮುಸ್ಲಿಮರಿಗೆ ಮಾತ್ರ ಮೀಸಲಾತಿಯನ್ನು ಒದಗಿಸುತ್ತವೆ.

ಯಾವುದೇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರ ಅಥವಾ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪ್ರಗತಿಗಾಗಿ ವಿಶೇಷ ನಿಬಂಧನೆಗಳನ್ನು ರೂಪಿಸಲು ಸಂವಿಧಾನದ 15 (4) ನೇ ವಿಧಿ ರಾಜ್ಯಕ್ಕೆ ಅವಕಾಶ ನೀಡುತ್ತದೆ.

ಸಂವಿಧಾನ ವಿಧಿ 16 (4) ಕೂಡ ರಾಜ್ಯಕ್ಕೆ ಈ ಅವಕಾಶ ನೀಡುತ್ತದೆ. ಈ ವಿಧಿಯು ರಾಜ್ಯವು ಯಾವುದೇ ಹಿಂದುಳಿದ ವರ್ಗದ ನಾಗರಿಕರ ಪರವಾಗಿ ನೇಮಕಾತಿಗಳು ಅಥವಾ ಹುದ್ದೆಗಳ ಮೀಸಲಾತಿಗೆ ಯಾವುದೇ ನಿಬಂಧನೆ ರೂಪಿಸುವುದನ್ನು ತಡೆಯುವುದಿಲ್ಲ.

ಮಾಹಿತಿ ಕೃಪೆ : ದಿ ನ್ಯೂಸ್‌ ಮಿನಿಟ್ 

ಇದನ್ನೂ ಓದಿ : FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...