Homeಫ್ಯಾಕ್ಟ್‌ಚೆಕ್Fact Check: 'ದಿಲ್ಲಿ ಚಲೋ' ಪ್ರತಿಭಟನಾ ನಿರತ ರೈತರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ರಾ?

Fact Check: ‘ದಿಲ್ಲಿ ಚಲೋ’ ಪ್ರತಿಭಟನಾ ನಿರತ ರೈತರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ರಾ?

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಹಮ್ಮಿಕೊಂಡಿರುವ ‘ದಿಲ್ಲಿ ಚಲೋ’ ಹೋರಾಟ ಮುಂದುವರೆಯುತ್ತಿದೆ. ಈ ನಡುವೆ ರೈತರ ಟ್ರ್ಯಾಕ್ಟರ್‌ ಚಕ್ರಕ್ಕೆ ಪೊಲೀಸ್ ಸಿಬ್ಬಂದಿಯೊಬ್ಬರು ಸಿಲುಕಿರುವ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರು ” ದೆಹಲಿಯ ಆಸುಪಾಸಿನಲ್ಲಿ ಹೋರಾಟ ನಿರತ ರೈತರು ಪೊಲೀಸ್ ಸಿಬ್ಬಂದಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ದಾರೆ” ಎಂಬರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ.

‘Anjna'(@SaffronQueen_) ಎಂಬ ಎಕ್ಸ್ ಬಳೆದಾರರೊಬ್ಬರು ಈ ವಿಡಿಯೋ ಹಂಚಿಕೊಂಡಿದ್ದು, ” ರೈತರು ಎನ್ನಲಾದವರು ಪೊಲೀಸ್ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ದಾರೆ. ಇದು ಯಾವ ರೀತಿಯ ಶಾಂತಿಯುತ ಹೋರಾಟ?. ಇವರು ನನ್ನ ರೈತರಲ್ಲ” ಎಂದು ಬರೆದುಕೊಂಡಿದ್ದಾರೆ.


ಪೋಸ್ಟ್ ಲಿಂಕ್ ಇಲ್ಲಿದೆ 

‘Sunanda Roy'(@SaffronSunanda)ಎಂಬ ಮತ್ತೊಬ್ಬರು ಎಕ್ಸ್ ಬಳಕೆದಾರರು ಕೂಡ ಈ ವಿಡಿಯೋ ಹಂಚಿಕೊಂಡಿದ್ದು, “ನಿಜವಾದ ರೈತರು ಯಾವತ್ತೂ ಪೋಲೀಸರನ್ನು ಅಥವಾ ಇತರ ಮನುಷ್ಯರನ್ನು ಕೊಲ್ಲುವುದಿಲ್ಲ. ಸೋ ಕಾಲ್ಡ್ ರೈತರು ಪೊಲೀಸರ ಮೇಲೆ ಟ್ರ್ಯಾಕ್ಟರ್‌ ಹತ್ತಿಸಿದ್ದಾರೆ. ಇವರು ರೈತರ ಸೋಗಿನಲ್ಲಿರುವ ಖಲಿಸ್ತಾನಿ ಭಯೋತ್ಪಾದಕರು. ಕೇಂದ್ರ ಗೃಹ ಸಚಿವಾಲಯ ದಯವಿಟ್ಟು ಈ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲಿನ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ಮಾಡಿದೆ. ಈ ವೇಳೆ ಇದು ಆಗಸ್ಟ್ 2023 ರಲ್ಲಿ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಲಾಂಗೋವಾಲ್‌ನಲ್ಲಿ ನಡೆದ ರೈತ ಹೋರಾಟದ ವೇಳೆ ನಡೆದ ದುರ್ಘಟನೆಯೊಂದರ ದೃಶ್ಯ ಎಂದು ತಿಳಿದು ಬಂದಿದೆ.

ರೈತರು ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ಸಂಭವಿಸಿದೆ. ಆಗ ಓರ್ವ ರೈತ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು. ಓರ್ವ ಪೊಲೀಸ್ ಸಿಬ್ಬಂದಿ ಘಟನೆಯಲ್ಲಿ ಗಾಯಗೊಂಡಿದ್ದರು.

‘Gagandeep Singh'(@Gagan4344)ಎಂಬ ಪಂಜಾಬ್‌ನ ಪತ್ರಕರ್ತರೊಬ್ಬರು ಆಗಸ್ಟ್ 21, 2023ರಂದು ಈ ವಿಡಿಯೋ ಹಂಚಿಕೊಂಡಿದ್ದು, “ಪ್ರತಿಭಟನೆಯಲ್ಲಿ ಭಾಗವಹಿಸಲು ಚಂಡೀಗಢಕ್ಕೆ ತೆರಳುತ್ತಿದ್ದ ಸಂಗ್ರೂರ್‌ನ ಲಾಂಗೋವಾಲ್‌ನಲ್ಲಿ ರೈತರು ಮತ್ತು ಪಂಜಾಬ್ ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಘರ್ಷಣೆಯ ಸಮಯದಲ್ಲಿ, ಒಬ್ಬ ರೈತ ಟ್ರ್ಯಾಕ್ಟರ್ ಟ್ರಾಲಿ ಟೈರ್‌ಗೆ ಸಿಲುಕಿ ತನ್ನ ಕಾಲು ಕಳೆದುಕೊಂಡಿದ್ದು ಚಿಕಿತ್ಸೆಯ ಸಮಯದಲ್ಲಿ ಅವರು ಮೃತಪಟ್ಟಿದ್ದಾರೆ. ಈ ವೇಳೆ ಓರ್ವ ಪೊಲೀಸ್ ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಸಂಗ್ರೂರ್ ಪೊಲೀಸರು ಕೂಡ 21 ಆಗಸ್ಟ್ 2023ರಂದು ಈ ವಿಡಿಯೋ ಹಂಚಿಕೊಂಡಿದ್ದರು. ಇಂದು ಲಾಂಗೋವಾಲ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಒಬ್ಬರು ಮೃತಪಟ್ಟಿರುವುದು ದುರೃಷ್ಟಕರ ಸಂಗತಿ. ಸಾಕ್ಷಿಗಳು ಮತ್ತು ವಿಡಿಯೋಗಳ ಪ್ರಕಾರ, ಪ್ರತಿಭಟನಾಕಾರರ ಟ್ರಾಕ್ಟರ್ ಟ್ರಾಲಿ ಮೃತ ರೈತ ಮೇಲೆ ಹರಿದಿದೆ. ಘಟನೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ನಾವು ನಡೆಸಿದ ಪರಿಶೀಲನೆಯಲ್ಲಿ ಇದು 2023ರಲ್ಲಿ ಪಂಜಾಬ್‌ನ ಸಂಗ್ರೂರ್‌ನಲ್ಲಿ ರೈತ ಪ್ರತಿಭಟನೆಯ ವೇಳೆ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಟ್ರಾಲಿ ಹರಿದ ಪರಿಣಾಮ ಸಂಭವಿಸಿದ ದುರ್ಘಟನೆಯ ವಿಡಿಯೋ ಎಂಬುವುದು ಖಚಿತವಾಗಿದೆ. ಫೆ.13, 2024ರಿಂದ ದಿಲ್ಲಿ ಚಲೋ ಹಮ್ಮಿಕೊಂಡಿರುವ ರೈತರು ಪೊಲೀಸ್ ಅಧಿಕಾರಿಯ ಮೇಲೆ ಟ್ರ್ಯಾಕ್ಟರ್‌ ಹತ್ತಿಸಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ.

ಇದನ್ನೂ ಓದಿ: Fact Check: ‘ದಿಲ್ಲಿ ಚಲೋ’ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...