Homeಫ್ಯಾಕ್ಟ್‌ಚೆಕ್FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

- Advertisement -
- Advertisement -

ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ ಜಾರ್ಜ್ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲ ಪಂಥೀಯ ಎಕ್ಸ್ ಬಳಕೆದಾರ ‘ಜಿತೇಂದ್ರ ಪ್ರತಾಪ್ ಸಿಂಗ್’ ವಿಡಿಯೋ ಹಂಚಿಕೊಂಡಿದ್ದು, ” ಮುಸ್ಲಿಂ ಉದ್ಯಮಿಗಳು ವಿವಿಧ ಬಗೆಯ ಔಷಧಗಳನ್ನು ಬೆರೆಸಿ ಹಿಂದೂ ಮತ್ತು ಕ್ರಿಶ್ಚಿಯನ್ನರನ್ನು ಬಲಹೀನರನ್ನಾಗಿಸಿ ಈ ದೇಶದ ಅಧಿಕಾರ ಹಿಡಿಯಲು ಯತ್ನಿಸುತ್ತಿರುವ ಕಾರಣ, ಕ್ರೈಸ್ತರು ಮತ್ತು ಹಿಂದೂಗಳು ಮುಸ್ಲಿಂ ರೆಸ್ಟೋರೆಂಟ್‌ಗಳಿಗೆ ಹೋಗಬಾರದು ಎಂದು ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ.ಜಾರ್ಜ್ ಹೇಳಿದ್ದಾರೆ. ಅವರು ಶ್ರೀಲಂಕಾದ ವೈದ್ಯರ ಹೆಸರನ್ನು ಸಹ ಹೇಳಿಕೆಗೆ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಅವರು ಹೇಳಿದ್ದರ ಬಗ್ಗೆ ಚರ್ಚೆಗೆ ಹೋಗದೆ, ಈ ವ್ಯಕ್ತಿ ಸಾಮಾನ್ಯ ವ್ಯಕ್ತಿಯಲ್ಲ, ಅವರು ಕೇರಳ ಸರ್ಕಾರದಲ್ಲಿ ಮಾಜಿ ಸಚಿವರಾಗಿದ್ದಾರೆ ಎಂಬುವುದನ್ನು ನೀವು ಯೋಚಿಸಬೇಕು” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಅನೇಕ ಎಕ್ಸ್‌ ಬಳಕೆದಾರರು ಇದೇ ರೀತಿಯ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ಕೀ ವರ್ಡ್‌ಗಳನ್ನು ಬಳಸಿ ನಾವು ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಮೇ 1, 2022ರಂದು “PC George arrested for controversial remarks against muslims” ಎಂಬ ಶೀರ್ಷಿಕೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿ ಲಭ್ಯವಾಗಿದೆ.

ಈ ವರದಿಯಲ್ಲಿ, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ ಪಿ.ಸಿ ಜಾರ್ಜ್ ಅವರನ್ನು ಕೊಟ್ಟಾಯಂ ಜಿಲ್ಲೆಯ ಇರಟ್ಟುಪೆಟ್ಟದ ನಿವಾಸದಿಂದ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿತ್ತು.

ವರದಿಯ ಕೊನೆಯಲ್ಲಿ, “ಮುಸ್ಲಿಮರು ನಡೆಸುವ ರೆಸ್ಟೋರೆಂಟ್‌ಗಳಿಗೆ ಮುಸ್ಲಿಮೇತರರು ತೆರಳದಂತೆ ಹೇಳಿಕೆ ನೀಡುವ ಮೂಲಕ ಕೇರಳ ಕಾಂಗ್ರೆಸ್‌ನ ಮಾಜಿ ನಾಯಕ ಪಿ.ಸಿ ಜಾರ್ಜ್ ವಿವಾದ ಸೃಷ್ಟಿಸಿದ್ದಾರೆ. ಅನಂತಪುರಿ ಹಿಂದೂ ಮಹಾ ಸಮ್ಮೇಳನದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಾರ್ಜ್ ಮುಸ್ಲಿಮರು ನಡೆಸುವ ರೆಸ್ಟೋರೆಂಟ್‌ಗಳ ಆಹಾರದಲ್ಲಿ ಔಷಧ ಹಾಕಿ ಮುಸ್ಲಿಮೇತರರನ್ನು ಬಲ ಹೀನರನ್ನಾಗಿ ಮಾಡುತ್ತಿದ್ದಾರೆ. ಈ ಮೂಲಕ ದೇಶವನ್ನು ತಮ್ಮ ವಶಕ್ಕೆ ಪಡೆಯಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಜಾರ್ಜ್ ಹೇಳಿದ್ದರು” ತಿಳಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಮೇ 1, 2022ರಂದು ‘ದಿ ಹಿಂದೂ’ “P.C. George arrested for hate speech, gets bail” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಸುದ್ದಿಯಲ್ಲಿ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದ ಹಿರಿಯ ರಾಜಕಾರಣಿ ಪಿ.ಸಿ ಜಾರ್ಜ್ ಅವರಿಗೆ ತಿರುವನಂತಪುರದ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ ಎಂದು ತಿಳಿಸಿತ್ತು.

ಲಭ್ಯವಾದ ವರದಿಗಳ ಪ್ರಕಾರ ಮುಸ್ಲಿಮರ ವಿರುದ್ದ ಪಿ.ಸಿ ಜಾರ್ಜ್ ದ್ವೇಷ ಭಾಷಣ ಮಾಡಿರುವುದು ಹೌದು. ಅವರನ್ನು ಪೊಲೀಸರು ಬಂಧಿಸಿರುವುದು ಹೌದು. ಆದರೆ, ಇದು 2022ರಲ್ಲಿ ನಡೆದ ಘಟನೆಯಾಗಿದೆ.

ವರದಿ ಲಿಂಕ್ ಇಲ್ಲಿದೆ 

ಪಿ.ಸಿ ಜಾರ್ಜ್ ಕಾಂಗ್ರೆಸ್‌ ನಾಯಕರ?

ಪಿಸಿ ಜಾರ್ಜ್ ಅವರು 1982-87 ಮತ್ತು 1996-2021 ರವರೆಗೆ ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯ ಪೂಂಜಾರ್ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕೊನೆಯದಾಗಿ 2016-2021 ರ ನಡುವೆ ಶಾಸಕರಾಗಿ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಶಾಸಕರಾಗಿ ಸೇವೆ ಸಲ್ಲಿಸಿದ ಆರು ಅವಧಿಗಳಲ್ಲಿ, ಜಾರ್ಜ್ ಅವರು ಕೇರಳ ಕಾಂಗ್ರೆಸ್‌ನ ವಿವಿಧ ಬಣಗಳಿಂದ ಆಯ್ಕೆಯಾಗಿದ್ದರು.

2016ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ.ಸಿ ಜಾರ್ಜ್ ಎಲ್‌ಡಿಎಫ್ ಮತ್ತು ಯುಡಿಎಫ್ ಅಭ್ಯರ್ಥಿಗಳನ್ನು 27,000 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, 2021ರ ವಿಧಾನಸಭೆ ಚುನಾವಣೆಯಲ್ಲಿ ಎಲ್‌ಡಿಎಫ್‌ ಅಭ್ಯರ್ಥಿ ಸೆಬಾಸ್ಟಿಯನ್‌ ಕುಳತುಂಕಲ್‌ ವಿರುದ್ಧ 16,000 ಮತಗಳ ಅಂತರದಿಂದ ಸೋತಿದ್ದರು. ಕೇರಳ ಕಾಂಗ್ರೆಸ್ (ಎಂ) ಸದಸ್ಯರಾಗಿ 2011 ರಿಂದ 2015 ರವರೆಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರದ ಮುಖ್ಯ ಸಚೇತಕರಾಗಿಯೂ ಸೇವೆ ಸಲ್ಲಿಸಿದ್ದರು.

ಫೆಬ್ರವರಿ 2017ರಲ್ಲಿ, ರಾಜ್ಯ ವಿಧಾನಸಭೆಯ ಏಕೈಕ ಸ್ವತಂತ್ರ ಶಾಸಕರಾಗಿದ್ದ ಪಿಸಿ ಜಾರ್ಜ್, ಕೇರಳ ಜನಪಕ್ಷಂ ಎಂಬ ಹೊಸ ಪಕ್ಷವನ್ನು ಕಟ್ಟಿದ್ದರು. ಏಪ್ರಿಲ್ 2019ರಲ್ಲಿ ಕೇರಳ ಜನಪಕ್ಷಂ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಬೆಂಬಲಿಸಿತ್ತು. ಜಾರ್ಜ್ ಕಾಂಗ್ರೆಸ್ ಅಥವಾ ಸಿಪಿಎಂ ಜೊತೆ ಮೈತ್ರಿ ಮಾಡಿಕೊಂಡಿರಲಿಲ್ಲ.

ಜನವರಿ 2024 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಿ.ಸಿ ಜಾರ್ಜ್‌ ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದರು. ಜನವರಿ 31ರಂದು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷ ವಿಲೀನಗೊಳಿಸಿ ಜಾರ್ಜ್ ಬಿಜೆಪಿ ಸೇರಿದ್ದರು.

ಇಲ್ಲಿ ಗಮನಾರ್ಹ ಸಂಗತಿಯೆಂದರೆ, ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ ಜಾರ್ಜ್ ಎಂದು ಸುದ್ದಿ ಹರಡುತ್ತಿದೆ. ಆದರೆ, ಜಾರ್ಜ್ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದು 2022ರಲ್ಲಿ. ಆಗ ಅವರು ಕಾಂಗ್ರೆಸ್ ಪಕ್ಷದಲ್ಲಿ ಇರಲ್ಲಿ. ಕಾಂಗ್ರೆಸ್ ಮಾತ್ರವಲ್ಲ ಯುಡಿಎಫ್‌ ಮತ್ತು ಎಲ್‌ಡಿಎಫ್‌ ಒಕ್ಕೂಟಗಳಲ್ಲೇ ಇರಲಿಲ್ಲ. ಅವರ ಕೇರಳ ಜನಪಕ್ಷಂ 2019ರಲ್ಲೇ ಬಿಜೆಪಿ ನೇತೃತ್ವ ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದೆ. ಹಾಗಾಗಿ, ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ ಎಂಬುವುದು ತಪ್ಪು ಮಾಹಿತಿ.

ಇದನ್ನೂ ಓದಿ : FACT CHECK : ರಾಯಚೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...