Homeಫ್ಯಾಕ್ಟ್‌ಚೆಕ್FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

- Advertisement -
- Advertisement -

ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ ಜಾರ್ಜ್ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲ ಪಂಥೀಯ ಎಕ್ಸ್ ಬಳಕೆದಾರ ‘ಜಿತೇಂದ್ರ ಪ್ರತಾಪ್ ಸಿಂಗ್’ ವಿಡಿಯೋ ಹಂಚಿಕೊಂಡಿದ್ದು, ” ಮುಸ್ಲಿಂ ಉದ್ಯಮಿಗಳು ವಿವಿಧ ಬಗೆಯ ಔಷಧಗಳನ್ನು ಬೆರೆಸಿ ಹಿಂದೂ ಮತ್ತು ಕ್ರಿಶ್ಚಿಯನ್ನರನ್ನು ಬಲಹೀನರನ್ನಾಗಿಸಿ ಈ ದೇಶದ ಅಧಿಕಾರ ಹಿಡಿಯಲು ಯತ್ನಿಸುತ್ತಿರುವ ಕಾರಣ, ಕ್ರೈಸ್ತರು ಮತ್ತು ಹಿಂದೂಗಳು ಮುಸ್ಲಿಂ ರೆಸ್ಟೋರೆಂಟ್‌ಗಳಿಗೆ ಹೋಗಬಾರದು ಎಂದು ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ.ಜಾರ್ಜ್ ಹೇಳಿದ್ದಾರೆ. ಅವರು ಶ್ರೀಲಂಕಾದ ವೈದ್ಯರ ಹೆಸರನ್ನು ಸಹ ಹೇಳಿಕೆಗೆ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಅವರು ಹೇಳಿದ್ದರ ಬಗ್ಗೆ ಚರ್ಚೆಗೆ ಹೋಗದೆ, ಈ ವ್ಯಕ್ತಿ ಸಾಮಾನ್ಯ ವ್ಯಕ್ತಿಯಲ್ಲ, ಅವರು ಕೇರಳ ಸರ್ಕಾರದಲ್ಲಿ ಮಾಜಿ ಸಚಿವರಾಗಿದ್ದಾರೆ ಎಂಬುವುದನ್ನು ನೀವು ಯೋಚಿಸಬೇಕು” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಅನೇಕ ಎಕ್ಸ್‌ ಬಳಕೆದಾರರು ಇದೇ ರೀತಿಯ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ಕೀ ವರ್ಡ್‌ಗಳನ್ನು ಬಳಸಿ ನಾವು ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಮೇ 1, 2022ರಂದು “PC George arrested for controversial remarks against muslims” ಎಂಬ ಶೀರ್ಷಿಕೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿ ಲಭ್ಯವಾಗಿದೆ.

ಈ ವರದಿಯಲ್ಲಿ, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ ಪಿ.ಸಿ ಜಾರ್ಜ್ ಅವರನ್ನು ಕೊಟ್ಟಾಯಂ ಜಿಲ್ಲೆಯ ಇರಟ್ಟುಪೆಟ್ಟದ ನಿವಾಸದಿಂದ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿತ್ತು.

ವರದಿಯ ಕೊನೆಯಲ್ಲಿ, “ಮುಸ್ಲಿಮರು ನಡೆಸುವ ರೆಸ್ಟೋರೆಂಟ್‌ಗಳಿಗೆ ಮುಸ್ಲಿಮೇತರರು ತೆರಳದಂತೆ ಹೇಳಿಕೆ ನೀಡುವ ಮೂಲಕ ಕೇರಳ ಕಾಂಗ್ರೆಸ್‌ನ ಮಾಜಿ ನಾಯಕ ಪಿ.ಸಿ ಜಾರ್ಜ್ ವಿವಾದ ಸೃಷ್ಟಿಸಿದ್ದಾರೆ. ಅನಂತಪುರಿ ಹಿಂದೂ ಮಹಾ ಸಮ್ಮೇಳನದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಾರ್ಜ್ ಮುಸ್ಲಿಮರು ನಡೆಸುವ ರೆಸ್ಟೋರೆಂಟ್‌ಗಳ ಆಹಾರದಲ್ಲಿ ಔಷಧ ಹಾಕಿ ಮುಸ್ಲಿಮೇತರರನ್ನು ಬಲ ಹೀನರನ್ನಾಗಿ ಮಾಡುತ್ತಿದ್ದಾರೆ. ಈ ಮೂಲಕ ದೇಶವನ್ನು ತಮ್ಮ ವಶಕ್ಕೆ ಪಡೆಯಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಜಾರ್ಜ್ ಹೇಳಿದ್ದರು” ತಿಳಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಮೇ 1, 2022ರಂದು ‘ದಿ ಹಿಂದೂ’ “P.C. George arrested for hate speech, gets bail” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಸುದ್ದಿಯಲ್ಲಿ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದ ಹಿರಿಯ ರಾಜಕಾರಣಿ ಪಿ.ಸಿ ಜಾರ್ಜ್ ಅವರಿಗೆ ತಿರುವನಂತಪುರದ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ ಎಂದು ತಿಳಿಸಿತ್ತು.

ಲಭ್ಯವಾದ ವರದಿಗಳ ಪ್ರಕಾರ ಮುಸ್ಲಿಮರ ವಿರುದ್ದ ಪಿ.ಸಿ ಜಾರ್ಜ್ ದ್ವೇಷ ಭಾಷಣ ಮಾಡಿರುವುದು ಹೌದು. ಅವರನ್ನು ಪೊಲೀಸರು ಬಂಧಿಸಿರುವುದು ಹೌದು. ಆದರೆ, ಇದು 2022ರಲ್ಲಿ ನಡೆದ ಘಟನೆಯಾಗಿದೆ.

ವರದಿ ಲಿಂಕ್ ಇಲ್ಲಿದೆ 

ಪಿ.ಸಿ ಜಾರ್ಜ್ ಕಾಂಗ್ರೆಸ್‌ ನಾಯಕರ?

ಪಿಸಿ ಜಾರ್ಜ್ ಅವರು 1982-87 ಮತ್ತು 1996-2021 ರವರೆಗೆ ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯ ಪೂಂಜಾರ್ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕೊನೆಯದಾಗಿ 2016-2021 ರ ನಡುವೆ ಶಾಸಕರಾಗಿ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಶಾಸಕರಾಗಿ ಸೇವೆ ಸಲ್ಲಿಸಿದ ಆರು ಅವಧಿಗಳಲ್ಲಿ, ಜಾರ್ಜ್ ಅವರು ಕೇರಳ ಕಾಂಗ್ರೆಸ್‌ನ ವಿವಿಧ ಬಣಗಳಿಂದ ಆಯ್ಕೆಯಾಗಿದ್ದರು.

2016ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ.ಸಿ ಜಾರ್ಜ್ ಎಲ್‌ಡಿಎಫ್ ಮತ್ತು ಯುಡಿಎಫ್ ಅಭ್ಯರ್ಥಿಗಳನ್ನು 27,000 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, 2021ರ ವಿಧಾನಸಭೆ ಚುನಾವಣೆಯಲ್ಲಿ ಎಲ್‌ಡಿಎಫ್‌ ಅಭ್ಯರ್ಥಿ ಸೆಬಾಸ್ಟಿಯನ್‌ ಕುಳತುಂಕಲ್‌ ವಿರುದ್ಧ 16,000 ಮತಗಳ ಅಂತರದಿಂದ ಸೋತಿದ್ದರು. ಕೇರಳ ಕಾಂಗ್ರೆಸ್ (ಎಂ) ಸದಸ್ಯರಾಗಿ 2011 ರಿಂದ 2015 ರವರೆಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರದ ಮುಖ್ಯ ಸಚೇತಕರಾಗಿಯೂ ಸೇವೆ ಸಲ್ಲಿಸಿದ್ದರು.

ಫೆಬ್ರವರಿ 2017ರಲ್ಲಿ, ರಾಜ್ಯ ವಿಧಾನಸಭೆಯ ಏಕೈಕ ಸ್ವತಂತ್ರ ಶಾಸಕರಾಗಿದ್ದ ಪಿಸಿ ಜಾರ್ಜ್, ಕೇರಳ ಜನಪಕ್ಷಂ ಎಂಬ ಹೊಸ ಪಕ್ಷವನ್ನು ಕಟ್ಟಿದ್ದರು. ಏಪ್ರಿಲ್ 2019ರಲ್ಲಿ ಕೇರಳ ಜನಪಕ್ಷಂ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಬೆಂಬಲಿಸಿತ್ತು. ಜಾರ್ಜ್ ಕಾಂಗ್ರೆಸ್ ಅಥವಾ ಸಿಪಿಎಂ ಜೊತೆ ಮೈತ್ರಿ ಮಾಡಿಕೊಂಡಿರಲಿಲ್ಲ.

ಜನವರಿ 2024 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಿ.ಸಿ ಜಾರ್ಜ್‌ ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದರು. ಜನವರಿ 31ರಂದು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷ ವಿಲೀನಗೊಳಿಸಿ ಜಾರ್ಜ್ ಬಿಜೆಪಿ ಸೇರಿದ್ದರು.

ಇಲ್ಲಿ ಗಮನಾರ್ಹ ಸಂಗತಿಯೆಂದರೆ, ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ ಜಾರ್ಜ್ ಎಂದು ಸುದ್ದಿ ಹರಡುತ್ತಿದೆ. ಆದರೆ, ಜಾರ್ಜ್ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದು 2022ರಲ್ಲಿ. ಆಗ ಅವರು ಕಾಂಗ್ರೆಸ್ ಪಕ್ಷದಲ್ಲಿ ಇರಲ್ಲಿ. ಕಾಂಗ್ರೆಸ್ ಮಾತ್ರವಲ್ಲ ಯುಡಿಎಫ್‌ ಮತ್ತು ಎಲ್‌ಡಿಎಫ್‌ ಒಕ್ಕೂಟಗಳಲ್ಲೇ ಇರಲಿಲ್ಲ. ಅವರ ಕೇರಳ ಜನಪಕ್ಷಂ 2019ರಲ್ಲೇ ಬಿಜೆಪಿ ನೇತೃತ್ವ ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದೆ. ಹಾಗಾಗಿ, ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ ಎಂಬುವುದು ತಪ್ಪು ಮಾಹಿತಿ.

ಇದನ್ನೂ ಓದಿ : FACT CHECK : ರಾಯಚೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....