Homeಫ್ಯಾಕ್ಟ್‌ಚೆಕ್FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

- Advertisement -
- Advertisement -

ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ಹೈದರಾಬಾದ್‌ನ ಬಿಜೆಪಿ ಶಾಸಕ ಹಾಗೂ ಹಿಂದುತ್ವವಾದಿ ಟೈಗರ್ ರಾಜಾ ಸಿಂಗ್ ಹೆಸರಿನಲ್ಲಿರುವ ಎಕ್ಸ್‌ ಖಾತೆಯಲ್ಲಿ ಅಕ್ಟೋಬರ್ 4ರಂದು ವಿಡಿಯೋ ಹಂಚಿಕೊಂಡು “ಪ್ಯಾಲೆಸ್ತೀನಿಯರು ಭಾರತದ ತ್ರಿವರ್ಣ ಧ್ವಜ ಹಿಡಿದು ದೇಶದಿಂದ ಪಲಾಯನ ಮಾಡುತ್ತಿದ್ದಾರೆ. ಏಕೆಂದರೆ, ಇಸ್ರೇಲ್ ಭಾರತದ ತ್ರಿವರ್ಣ ಧ್ವಜದ ಮೇಲೆ ದಾಳಿ ಮಾಡುವುದಿಲ್ಲ. ಇಸ್ರೇಲ್ ಮಾತ್ರವಲ್ಲ, ಈಗ ಜಗತ್ತಿನಲ್ಲಿ ಯಾವ ದೇಶಕ್ಕೂ ತ್ರಿವರ್ಣ ಧ್ವಜದ ಮೇಲೆ ದಾಳಿ ಮಾಡಲು ಧೈರ್ಯ ಇಲ್ಲ. ಇದು ತ್ರಿವರ್ಣ ಧ್ವಜದ ಮತ್ತು ಮೋದಿಯವರ ಶಕ್ತಿ” ಎಂದು ಬರೆದುಕೊಳ್ಳಲಾಗಿತ್ತು.

ಇನ್ನೂ ಕೆಲ ಎಕ್ಸ್‌, ಫೇಸ್‌ಬುಕ್ ಖಾತೆಗಳಲ್ಲಿ ಇದೇ ಬರಹದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದಿರುವುದಲ್ಲ. ಅದು 2023ರಲ್ಲಿ ಭಾರತೀಯ ಯಾತ್ರಾರ್ಥಿಗಳು ಇರಾಕ್‌ನ ಮುಸ್ಲಿಮರ ಪವಿತ್ರ ಸ್ಥಳ ಕರ್ಬಲಾಗೆ ನಡೆದುಕೊಂಡು ಹೋದ ಅಥವಾ ‘ಅರ್ಬಯೀನ್ ವಾಕ್‌’ನ ದೃಶ್ಯವಾಗಿದೆ.

‘ಅರ್ಬಯೀನ್ ವಾಕ್‌’ ಎಂದರೆ ನಲ್ವತ್ತನೇ ನಡಿಗೆ ಎಂದರ್ಥ. ಮುಸ್ಲಿಮರು, ವಿಶೇಷವಾಗಿ ಶಿಯಾ ಮುಸ್ಲಿಮರು ಇಮಾಮ್ ಹುಸೇನ್ ಅವರು ಹುತಾತ್ಮರಾದ 40ನೇ ದಿನದಂದು, ಇರಾಕ್‌ನ ಕರ್ಬಾಲಾದಲ್ಲಿರುವ ಅವರ ಸಮಾಧಿಯ ಬಳಿಗೆ ನಡೆದುಕೊಂಡು ಹೋಗುತ್ತಾರೆ.

ವೈರಲ್ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ನಮಗೆ ಅದು ಅರ್ಬಯೀನ್ ವಾಕ್‌ನ ದೃಶ್ಯ ಎಂಬುವುದು ಖಚಿತವಾಗಿದೆ.

ಆಗಸ್ಟ್ 31, 2023ರಂದು ಭಾರತದ ಮೂಲದ ಇನ್‌ಸ್ಟಾಗ್ರಾಂ ಖಾತೆ ಫಲಕ್ ಹಕ್‌ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ‘ನಜಾಫ್-ಅಲ್‌-ಅಶ್ರಾ’ ಎಂದು ಸ್ಥಳವನ್ನು ಉಲ್ಲೇಖಿಸಲಾಗಿತ್ತು. ‘ಅರ್ಬಯೀನ್ ವಾಕ್-2023’ ಎಂದು ವಿಡಿಯೋಗೆ ಕ್ಯಾಪ್ಶನ್ ಕೊಡಲಾಗಿತ್ತು. ಇಲ್ಲಿ ನಜಾಫ್ ಎಂಬುವುದು ಇರಾಕ್‌ನಲ್ಲಿರುವ ಮುಸ್ಲಿಮರ ಮತ್ತೊಂದು ಪವಿತ್ರ ಸ್ಥಳವಾಗಿದೆ.

ಈ ನಜಾಫ್‌ನಲ್ಲಿ ಪ್ರವಾದಿ ಮುಹಮ್ಮದ್ ಅವರ ಅಳಿಯಾ ಹಾಗೂ ಇಸ್ಲಾಮಿನ ನಾಲ್ಕನೇ ಖಲೀಫಾ ಇಮಾಮ್ ಅಲೀ ಅವರ ಸಮಾಧಿಯಿದೆ. ಇಲ್ಲಿಂದ ಸುಮಾರು 70 ಕಿ.ಮೀ ದೂರದಲ್ಲಿ ಕರ್ಬಲಾದಲ್ಲಿ ಅಲೀ ಅವರ ಮಗ ಹಝ್ರತ್ ಹುಸೇನ್ ಅವರ ಸಮಾಧಿಯಿದೆ. ಹಝ್ರತ್ ಹುಸೇನ್ ಮುಹಮ್ಮದ್ ಪೈಗಂಬರ್ ಅವರ ಮೊಮ್ಮಗ. ಅವರು ಹುತಾತ್ಮರಾದ ದಿನದಂದು ಮೊಹರಂ ಆಚರಣೆ ಮಾಡಲಾಗುತ್ತದೆ. ಶಿಯಾ ಮುಸ್ಲಿಮರಿಗೆ ನಜಾಫ್ ಮತ್ತು ಕರ್ಬಲಾ ಎರಡೂ ಜಾಗಗಳು ಅತ್ಯಂತ ಪವಿತ್ರವಾಗಿದೆ.

ಸೆಪ್ಟೆಂಬರ್ 8, 2023 ರಲ್ಲಿ ಎನ್‌ಡಿಟಿವಿ ಪ್ರಕಟಿಸಿದ್ದ ವರದಿಯಲ್ಲಿ, “2023ರ ಅರ್ಬಯೀನ್ ವಾಕ್ ಸೆಪ್ಟೆಂಬರ್ 6ರಂದು ಕರ್ಬಲಾದಲ್ಲಿ ಕೊನೆಗೊಂಡಿದ್ದು, ಭಾರತದಿಂದ ಸುಮಾರು 1 ಲಕ್ಷ ಶಿಯಾ ಮುಸ್ಲಿಮರು ನಡಿಗೆಯಲ್ಲಿ ಪಾಲ್ಗೊಳ್ಳಲು ಕರ್ಬಲಾಕ್ಕೆ ತೆರಳಿದ್ದರು” ಎಂದು ಹೇಳಲಾಗಿತ್ತು.

ಎನ್‌ಡಿವಿ ಸುದ್ದಿಯ ಜೊತೆ ವ್ಯಕ್ತಿಯೊಬ್ಬರು ಮಗುವನ್ನು ಹಿಡಿದುಕೊಂಡಿರುವುದು ಮತ್ತು ಆ ಮಗು ಭಾರತದ ತ್ರಿವರ್ಣ ಧ್ವಜ ಹೊದ್ದುಕೊಂಡಿದ್ದ ಫೋಟೋ ಸೇರಿಸಿತ್ತು.

ಅಲ್ಲದೆ, 6 ಸೆಪ್ಟೆಂಬರ್ 2023ರಂದು ಎನ್‌ಡಿವಿ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ನಜಾಫ್‌ನಿಂದ ಗ್ರೌಂಡ್‌ ರಿಪೋರ್ಟ್ ಕುರಿತ ವಿಡಿಯೋ ಅಪ್ಲೋಡ್ ಮಾಡಿತ್ತು. ಅದರಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಭಾರತದ ತ್ರಿವರ್ಣ ಧ್ವಜ ಹಿಡಿದು ಮಾತನಾಡಿರುವುದು ಇದೆ.

ಭಾರತದ ಧ್ವಜ ಏಕೆ?

ಜಗತ್ತಿನಲ್ಲಿ ನಾಲ್ಕೈದು ಮುಸ್ಲಿಮರ ಪ್ರಮುಖ ಪವಿತ್ರ ಸ್ಥಳಗಳಿವೆ. ಅಲ್ಲಿಗೆ ವಿಶ್ವದ ಮೂಲೆ ಮೂಲೆಗಳಿಂದ ಮುಸ್ಲಿಮರು ತೆರಳುತ್ತಾರೆ. ಮಕ್ಕಾ, ಮದೀನಾ, ಕರ್ಬಲಾ, ನಜಾಫ್ ಮತ್ತು ಬೈತುಲ್ ಮುಕದ್ದಸ್ ಅಥವಾ ಜೆರುಸಲೇಂನ ಮಸ್ಜಿದುಲ್ ಅಕ್ಸಾ ಆ ಪ್ರಮುಖ ಧಾರ್ಮಿಕ ಕೇಂದ್ರಗಳಾಗಿವೆ.

ಸಾಮಾನ್ಯವಾಗಿ ಮಕ್ಕಾಗೆ ಹಜ್‌-ಉಮ್ರಾಗೆ ತೆರಳಿದಾಗ, ನಜಾಫ್-ಕರ್ಬಲಾಗೆ ತೆರಳಿದಾಗ ಆಯಾ ದೇಶದ ಜನರು ತಮ್ಮ ದೇಶದ ಮೇಲಿನ ಪ್ರೀತಿಯಿಂದ ಮತ್ತು ಜನರ ನಡುವೆ ಒಬ್ಬರಿಗೊಬ್ಬರನ್ನು ಸುಲಭವಾಗಿ ಗುರುತಿಸಲು ರಾಷ್ಟ್ರ ಧ್ವಜಗಳನ್ನು ಹಿಡಿಯುತ್ತಾರೆ. ಅದೇ ರೀತಿ ಭಾರತೀಯರು ಕೂಡ ತಮ್ಮ ದೇಶದ ತ್ರಿವರ್ಣ ಧ್ವಜ ಹಿಡಿದು ನಡೆಯುತ್ತಾರೆ.

ಆದ್ದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಇಸ್ರೇಲ್‌ ದಾಳಿಯಿಂದ ರಕ್ಷಿಸಿಕೊಳ್ಳಲು ಪ್ಯಾಲೆಸ್ತೀಯರು ಭಾರತ ಧ್ವಜ ಹಿಡಿದಿರುವುದಕ್ಕೆ ಸಂಬಂಧಿಸಿದ್ದಲ್ಲ. ಅದು ಅರ್ಬಯೀನ್ ನಡಿಗೆಯ ವೇಳೆ ಭಾರತೀಯ ಶಿಯಾ ಮುಸ್ಲಿಮರು ಇರಾಕ್‌ನ ಕರ್ಬಲಾ ಕಡೆಗೆ ಧ್ವಜ ಹಿಡಿದು ಸಾಗಿದ ದೃಶ್ಯವಾಗಿದೆ.

ಇದನ್ನೂ ಓದಿ : FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...