Homeಫ್ಯಾಕ್ಟ್‌ಚೆಕ್FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

FACT CHECK : ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದ್ರಾ?

- Advertisement -
- Advertisement -

ಇಸ್ರೇಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ಹೈದರಾಬಾದ್‌ನ ಬಿಜೆಪಿ ಶಾಸಕ ಹಾಗೂ ಹಿಂದುತ್ವವಾದಿ ಟೈಗರ್ ರಾಜಾ ಸಿಂಗ್ ಹೆಸರಿನಲ್ಲಿರುವ ಎಕ್ಸ್‌ ಖಾತೆಯಲ್ಲಿ ಅಕ್ಟೋಬರ್ 4ರಂದು ವಿಡಿಯೋ ಹಂಚಿಕೊಂಡು “ಪ್ಯಾಲೆಸ್ತೀನಿಯರು ಭಾರತದ ತ್ರಿವರ್ಣ ಧ್ವಜ ಹಿಡಿದು ದೇಶದಿಂದ ಪಲಾಯನ ಮಾಡುತ್ತಿದ್ದಾರೆ. ಏಕೆಂದರೆ, ಇಸ್ರೇಲ್ ಭಾರತದ ತ್ರಿವರ್ಣ ಧ್ವಜದ ಮೇಲೆ ದಾಳಿ ಮಾಡುವುದಿಲ್ಲ. ಇಸ್ರೇಲ್ ಮಾತ್ರವಲ್ಲ, ಈಗ ಜಗತ್ತಿನಲ್ಲಿ ಯಾವ ದೇಶಕ್ಕೂ ತ್ರಿವರ್ಣ ಧ್ವಜದ ಮೇಲೆ ದಾಳಿ ಮಾಡಲು ಧೈರ್ಯ ಇಲ್ಲ. ಇದು ತ್ರಿವರ್ಣ ಧ್ವಜದ ಮತ್ತು ಮೋದಿಯವರ ಶಕ್ತಿ” ಎಂದು ಬರೆದುಕೊಳ್ಳಲಾಗಿತ್ತು.

ಇನ್ನೂ ಕೆಲ ಎಕ್ಸ್‌, ಫೇಸ್‌ಬುಕ್ ಖಾತೆಗಳಲ್ಲಿ ಇದೇ ಬರಹದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಪ್ಯಾಲೆಸ್ತೀನಿಯರು ಭಾರತದ ಧ್ವಜ ಹಿಡಿದಿರುವುದಲ್ಲ. ಅದು 2023ರಲ್ಲಿ ಭಾರತೀಯ ಯಾತ್ರಾರ್ಥಿಗಳು ಇರಾಕ್‌ನ ಮುಸ್ಲಿಮರ ಪವಿತ್ರ ಸ್ಥಳ ಕರ್ಬಲಾಗೆ ನಡೆದುಕೊಂಡು ಹೋದ ಅಥವಾ ‘ಅರ್ಬಯೀನ್ ವಾಕ್‌’ನ ದೃಶ್ಯವಾಗಿದೆ.

‘ಅರ್ಬಯೀನ್ ವಾಕ್‌’ ಎಂದರೆ ನಲ್ವತ್ತನೇ ನಡಿಗೆ ಎಂದರ್ಥ. ಮುಸ್ಲಿಮರು, ವಿಶೇಷವಾಗಿ ಶಿಯಾ ಮುಸ್ಲಿಮರು ಇಮಾಮ್ ಹುಸೇನ್ ಅವರು ಹುತಾತ್ಮರಾದ 40ನೇ ದಿನದಂದು, ಇರಾಕ್‌ನ ಕರ್ಬಾಲಾದಲ್ಲಿರುವ ಅವರ ಸಮಾಧಿಯ ಬಳಿಗೆ ನಡೆದುಕೊಂಡು ಹೋಗುತ್ತಾರೆ.

ವೈರಲ್ ವಿಡಿಯೋ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ನಮಗೆ ಅದು ಅರ್ಬಯೀನ್ ವಾಕ್‌ನ ದೃಶ್ಯ ಎಂಬುವುದು ಖಚಿತವಾಗಿದೆ.

ಆಗಸ್ಟ್ 31, 2023ರಂದು ಭಾರತದ ಮೂಲದ ಇನ್‌ಸ್ಟಾಗ್ರಾಂ ಖಾತೆ ಫಲಕ್ ಹಕ್‌ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ‘ನಜಾಫ್-ಅಲ್‌-ಅಶ್ರಾ’ ಎಂದು ಸ್ಥಳವನ್ನು ಉಲ್ಲೇಖಿಸಲಾಗಿತ್ತು. ‘ಅರ್ಬಯೀನ್ ವಾಕ್-2023’ ಎಂದು ವಿಡಿಯೋಗೆ ಕ್ಯಾಪ್ಶನ್ ಕೊಡಲಾಗಿತ್ತು. ಇಲ್ಲಿ ನಜಾಫ್ ಎಂಬುವುದು ಇರಾಕ್‌ನಲ್ಲಿರುವ ಮುಸ್ಲಿಮರ ಮತ್ತೊಂದು ಪವಿತ್ರ ಸ್ಥಳವಾಗಿದೆ.

ಈ ನಜಾಫ್‌ನಲ್ಲಿ ಪ್ರವಾದಿ ಮುಹಮ್ಮದ್ ಅವರ ಅಳಿಯಾ ಹಾಗೂ ಇಸ್ಲಾಮಿನ ನಾಲ್ಕನೇ ಖಲೀಫಾ ಇಮಾಮ್ ಅಲೀ ಅವರ ಸಮಾಧಿಯಿದೆ. ಇಲ್ಲಿಂದ ಸುಮಾರು 70 ಕಿ.ಮೀ ದೂರದಲ್ಲಿ ಕರ್ಬಲಾದಲ್ಲಿ ಅಲೀ ಅವರ ಮಗ ಹಝ್ರತ್ ಹುಸೇನ್ ಅವರ ಸಮಾಧಿಯಿದೆ. ಹಝ್ರತ್ ಹುಸೇನ್ ಮುಹಮ್ಮದ್ ಪೈಗಂಬರ್ ಅವರ ಮೊಮ್ಮಗ. ಅವರು ಹುತಾತ್ಮರಾದ ದಿನದಂದು ಮೊಹರಂ ಆಚರಣೆ ಮಾಡಲಾಗುತ್ತದೆ. ಶಿಯಾ ಮುಸ್ಲಿಮರಿಗೆ ನಜಾಫ್ ಮತ್ತು ಕರ್ಬಲಾ ಎರಡೂ ಜಾಗಗಳು ಅತ್ಯಂತ ಪವಿತ್ರವಾಗಿದೆ.

ಸೆಪ್ಟೆಂಬರ್ 8, 2023 ರಲ್ಲಿ ಎನ್‌ಡಿಟಿವಿ ಪ್ರಕಟಿಸಿದ್ದ ವರದಿಯಲ್ಲಿ, “2023ರ ಅರ್ಬಯೀನ್ ವಾಕ್ ಸೆಪ್ಟೆಂಬರ್ 6ರಂದು ಕರ್ಬಲಾದಲ್ಲಿ ಕೊನೆಗೊಂಡಿದ್ದು, ಭಾರತದಿಂದ ಸುಮಾರು 1 ಲಕ್ಷ ಶಿಯಾ ಮುಸ್ಲಿಮರು ನಡಿಗೆಯಲ್ಲಿ ಪಾಲ್ಗೊಳ್ಳಲು ಕರ್ಬಲಾಕ್ಕೆ ತೆರಳಿದ್ದರು” ಎಂದು ಹೇಳಲಾಗಿತ್ತು.

ಎನ್‌ಡಿವಿ ಸುದ್ದಿಯ ಜೊತೆ ವ್ಯಕ್ತಿಯೊಬ್ಬರು ಮಗುವನ್ನು ಹಿಡಿದುಕೊಂಡಿರುವುದು ಮತ್ತು ಆ ಮಗು ಭಾರತದ ತ್ರಿವರ್ಣ ಧ್ವಜ ಹೊದ್ದುಕೊಂಡಿದ್ದ ಫೋಟೋ ಸೇರಿಸಿತ್ತು.

ಅಲ್ಲದೆ, 6 ಸೆಪ್ಟೆಂಬರ್ 2023ರಂದು ಎನ್‌ಡಿವಿ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ನಜಾಫ್‌ನಿಂದ ಗ್ರೌಂಡ್‌ ರಿಪೋರ್ಟ್ ಕುರಿತ ವಿಡಿಯೋ ಅಪ್ಲೋಡ್ ಮಾಡಿತ್ತು. ಅದರಲ್ಲಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಭಾರತದ ತ್ರಿವರ್ಣ ಧ್ವಜ ಹಿಡಿದು ಮಾತನಾಡಿರುವುದು ಇದೆ.

ಭಾರತದ ಧ್ವಜ ಏಕೆ?

ಜಗತ್ತಿನಲ್ಲಿ ನಾಲ್ಕೈದು ಮುಸ್ಲಿಮರ ಪ್ರಮುಖ ಪವಿತ್ರ ಸ್ಥಳಗಳಿವೆ. ಅಲ್ಲಿಗೆ ವಿಶ್ವದ ಮೂಲೆ ಮೂಲೆಗಳಿಂದ ಮುಸ್ಲಿಮರು ತೆರಳುತ್ತಾರೆ. ಮಕ್ಕಾ, ಮದೀನಾ, ಕರ್ಬಲಾ, ನಜಾಫ್ ಮತ್ತು ಬೈತುಲ್ ಮುಕದ್ದಸ್ ಅಥವಾ ಜೆರುಸಲೇಂನ ಮಸ್ಜಿದುಲ್ ಅಕ್ಸಾ ಆ ಪ್ರಮುಖ ಧಾರ್ಮಿಕ ಕೇಂದ್ರಗಳಾಗಿವೆ.

ಸಾಮಾನ್ಯವಾಗಿ ಮಕ್ಕಾಗೆ ಹಜ್‌-ಉಮ್ರಾಗೆ ತೆರಳಿದಾಗ, ನಜಾಫ್-ಕರ್ಬಲಾಗೆ ತೆರಳಿದಾಗ ಆಯಾ ದೇಶದ ಜನರು ತಮ್ಮ ದೇಶದ ಮೇಲಿನ ಪ್ರೀತಿಯಿಂದ ಮತ್ತು ಜನರ ನಡುವೆ ಒಬ್ಬರಿಗೊಬ್ಬರನ್ನು ಸುಲಭವಾಗಿ ಗುರುತಿಸಲು ರಾಷ್ಟ್ರ ಧ್ವಜಗಳನ್ನು ಹಿಡಿಯುತ್ತಾರೆ. ಅದೇ ರೀತಿ ಭಾರತೀಯರು ಕೂಡ ತಮ್ಮ ದೇಶದ ತ್ರಿವರ್ಣ ಧ್ವಜ ಹಿಡಿದು ನಡೆಯುತ್ತಾರೆ.

ಆದ್ದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಇಸ್ರೇಲ್‌ ದಾಳಿಯಿಂದ ರಕ್ಷಿಸಿಕೊಳ್ಳಲು ಪ್ಯಾಲೆಸ್ತೀಯರು ಭಾರತ ಧ್ವಜ ಹಿಡಿದಿರುವುದಕ್ಕೆ ಸಂಬಂಧಿಸಿದ್ದಲ್ಲ. ಅದು ಅರ್ಬಯೀನ್ ನಡಿಗೆಯ ವೇಳೆ ಭಾರತೀಯ ಶಿಯಾ ಮುಸ್ಲಿಮರು ಇರಾಕ್‌ನ ಕರ್ಬಲಾ ಕಡೆಗೆ ಧ್ವಜ ಹಿಡಿದು ಸಾಗಿದ ದೃಶ್ಯವಾಗಿದೆ.

ಇದನ್ನೂ ಓದಿ : FACT CHECK : ಶಿವಲಿಂಗ ಧ್ವಂಸ ಘಟನೆಗೆ ಕೋಮು ಬಣ್ಣ ಬಳಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...