Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ದೇವಸ್ಥಾನದ ರಥೋತ್ಸವ ಸಮಿತಿಗೆ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ...

FACT CHECK : ಹಿಂದೂ ದೇವಸ್ಥಾನದ ರಥೋತ್ಸವ ಸಮಿತಿಗೆ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಆಯ್ಕೆ ಮಾಡಿದೆಯಾ?

- Advertisement -
- Advertisement -

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ರಾಜ್ಯ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸದಸ್ಯನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಬ್ರಹ್ಮರಥೋತ್ಸವ ಸಮಿತಿ ರಚಿಸಿ ಸರ್ಕಾರ ಹೊರಡಿಸಿರುವ ಆದೇಶ ಪತ್ರ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಸಮಿತಿಯ ಪಟ್ಟಿಯೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ‘ನವಾಝ್’ ಎಂಬ ಸದಸ್ಯನ ಹೆಸರಿದೆ. ಬಿಜೆಪಿ ತನ್ನ ಪೋಸ್ಟ್‌ನಲ್ಲಿ ಈ ಕೆಳಗಿನಂತೆ ಬರೆದುಕೊಂಡಿದೆ.

“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ರಚಿಸಿರುವ ಸಮಿತಿಯ ಸದಸ್ಯನಾಗಿ ನವಾಝ್ ಎಂಬ ವ್ಯಕ್ತಿಯನ್ನು ಸರ್ಕಾರ ನೇಮಿಸಿದೆ. ಹಿಂದೂ ದೇವಸ್ಥಾನಗಳನ್ನು ಪ್ರಯತ್ನ ನಡೆಸಿದ ಬಳಿಕ, ಹಿಂದೂ ವಿರೋಧಿ ಸಿದ್ದರಾಮಯ್ಯ ಅವರು, ಈಗ ಹಿಂದೂಯೇತರ ವ್ಯಕ್ತಿಯನ್ನು ಸಮಿತಿಗೆ ನೇಮಿಸುವ ಮೂಲಕ ದೇವಸ್ಥಾನ ಮತ್ತು ಅದರ ಸಂಪತ್ತನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.”

“ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಹಕ್ಕು ಕಿತ್ತು ಒಂದು ಸಮುದಾಯಕ್ಕೆ ಕೊಡುವ ರಾಹುಲ್ ಗಾಂಧಿಯ ಕನಸಿನ ಯೋಜನೆಯನ್ನು ಜಾರಿಗೊಳಿಸುವ ತವಕದಲ್ಲಿದೆ. ಇಂದು ಇದು ಕರ್ನಾಟಕದ ಒಂದು ದೇವಸ್ಥಾನವಾಗಿರಬಹುದು. ಆದರೆ, ನಾಳೆ ಭಾರತದ ಎಲ್ಲಾ ದೇವಸ್ಥಾನಗಳಲ್ಲಿ ಆಗುತ್ತದೆ. ಕಾಂಗ್ರೆಸ್‌ ಬಗ್ಗೆ ಎಚ್ಚರವಾಗಿರಿ.”

ಪ್ರಸ್ತುತ, ಎಕ್ಸ್‌ನಿಂದ ಬಿಜೆಪಿ ತನ್ನ ಪೋಸ್ಟ್ ಡಿಲಿಟ್ ಮಾಡಿದೆ 

ಫ್ಯಾಕ್ಟ್‌ಚೆಕ್ : ಬಿಜೆಪಿ ಆರೋಪಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೇವಸ್ಥಾನದ ಬ್ರಹ್ಮರಥೋತ್ಸವದ ಸಮಿತಿಗೆ ಸದಸ್ಯನಾಗಿ ಮುಸ್ಲಿಂ ವ್ಯಕ್ತಿಯನ್ನು ನೇಮಿಸಿದೆಯಾ? ಎಂದು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಿಜೆಪಿ ಮಾಡಿರುವ ಆರೋಪ ಸುಳ್ಳು ಎಂದು ತಿಳಿದು ಬಂದಿದೆ.

ಬಿಜೆಪಿಯ ಆರೋಪದ ಕುರಿತು ಮೇ 8, 2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಸಿಎಂ ತಿಳಿಸಿದಂತೆ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ ಸಮಿತಿ ರಚಿಸುವಾಗ ಅನ್ಯ ಧರ್ಮದ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನೇಮಿಸಿಕೊಳ್ಳುವುದು ಬಹಳ ಹಿಂದಿನಿಂದಲೂ ನಡೆದುಕೊಂಡ ಬಂದ ಸಂಪ್ರದಾಯ. ಅದರಂತೆ ಈ ಬಾರಿಯೂ ಸರ್ಕಾರ ಮುಸ್ಲಿಂ ವ್ಯಕ್ತಿಯನ್ನು ಸದಸ್ಯನಾಗಿ ನೇಮಿಸಿದೆ.

ಗಮನಾರ್ಹವಾಗಿ, ಈ ಹಿಂದೆ (2021-22) ರಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗಲೂ ದೇವಸ್ಥಾನ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗಳಿಗೆ ಸ್ಥಾನ ನೀಡಲಾಗಿತ್ತು. 2020ರಲ್ಲಿ ಇಮ್ತಿಯಾಝ್ ಪಾಷಾ ಎಂಬವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಎಂಬವರನ್ನು ಸದಸ್ಯರನ್ನಾಗಿ ಮಾಡಿತ್ತು. ಈ ಕುರಿತ ಸರ್ಕಾರದ ಆದೇಶ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

“ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದೂ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರು ಕೂಡ ಎಕ್ಸ್‌ನಲ್ಲಿ ದಾಖಲೆಗಳನ್ನು ಹಂಚಿಕೊಂಡಿದ್ದು, “ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಮೋದಿ ಪ್ರತಿಕೃತಿ ದಹಿಸಲು ಹೋದ ಕಾಂಗ್ರೆಸ್ಸಿಗರ ಪಂಚೆಗೆ ಬೆಂಕಿ ತಗುಲಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...