Homeಫ್ಯಾಕ್ಟ್‌ಚೆಕ್Fact Check: ಉತ್ತರ ಪ್ರದೇಶದ ಯೋಗಿ ಸರ್ಕಾರ ಮೀಸಲಾತಿಯನ್ನು ಸಂಪೂರ್ಣ ರದ್ದುಪಡಿಸಿದೆಯಾ?

Fact Check: ಉತ್ತರ ಪ್ರದೇಶದ ಯೋಗಿ ಸರ್ಕಾರ ಮೀಸಲಾತಿಯನ್ನು ಸಂಪೂರ್ಣ ರದ್ದುಪಡಿಸಿದೆಯಾ?

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮೀಸಲಾತಿಯನ್ನು ಸಂಪೂರ್ಣ ರದ್ದುಪಡಿಸಿದೆ ಎಂಬ ಹಿಂದಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಗಳಿಂದ ಮೀಸಲಾತಿಯನ್ನು ತೆಗೆದು ಹಾಕಲಾಗಿದೆ. ಮುಂದಿನ 25 ವರ್ಷ ರಾಜ್ಯದಲ್ಲಿ ಮೀಸಲಾತಿ ಜಾರಿಯಲ್ಲಿ ಇರುವುದಿಲ್ಲ ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ಮೇಲೆ ತಿಳಿಸಿದ ಸಂದೇಶದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ, ಉತ್ತರ ಪ್ರದೇಶ ಸರ್ಕಾರ ಮೀಸಲಾತಿ ತೆಗೆದು ಹಾಕಿರುವ ಬಗ್ಗೆ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಸುದ್ದಿಯಾಗಿಲ್ಲ. ಅಲ್ಲದೆ, ಮೀಸಲಾತಿ ರದ್ದುಪಡಿಸಬೇಕೆಂದರೆ ಅಥವಾ ಸರ್ಕಾರ ಮೀಸಲಾತಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಬೇಕಾದರೆ ಮಸೂದೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಉತ್ತರ ಪ್ರದೇಶ ಸರ್ಕಾರ ಇತ್ತೀಚೆಗೆ ಅಂತಹ ಯಾವುದೇ ಮಸೂದೆ ಮಂಡಿಸಿಲ್ಲ.

ಅಲ್ಲದೆ, ಜನವರಿ1, 2024ರಂದು ಉತ್ತರ ಪ್ರದೇಶದ ಲೋಕ ಸೇವಾ ಆಯೋಗ ಹೊರಡಿಸಿದ ನೇಮಕಾತಿ ಆದೇಶದಲ್ಲೂ ಮೀಸಲಾತಿ ಬಗ್ಗೆ ಉಲ್ಲೇಖಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಆರ್ಥಿಕವಾಗಿ ಹಿಂದುಳಿದ ವರ್ಗ, ಇತರ ಹಿಂದುಳಿದ ವರ್ಗಳಿಗೆ ಸಾಮಾನ್ಯವಾಗಿ ನೀಡುವಂತೆ ನೇಮಕಾತಿ ಅಧಿಸೂಚನೆಯಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘Factly’ ಹೇಳಿದೆ.

2019ರಲ್ಲೂ ಉತ್ತರ ಪ್ರದೇಶ ಸರ್ಕಾರವು ರಾಜ್ಯದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ವದಂತಿಗಳು ಹಬ್ಬಿತ್ತು. ಬಳಿಕ, ಸಂಬಂಧಿತ ಅಧಿಕಾರಿಗಳ ಸ್ಪಷ್ಟೀಕರಣದ ನಂತರ, ಅಂತಹ ಮೀಸಲಾತಿಯೇ ಇಲ್ಲ ಎಂದು ಬಹಿರಂಗಗೊಂಡಿತ್ತು. 2006ರಲ್ಲಿ ಸ್ಥಾಪಿತವಾದ ಅಸ್ತಿತ್ವದಲ್ಲಿರುವ ನೀತಿಯಂತೆ ಖಾಸಗಿ ವಲಯದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿ ಪ್ರವೇಶ ಪ್ರಕ್ರಿಯೆಯ ಭಾಗವಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ವೈರಲ್‌ ಪೋಸ್ಟ್‌ನಲ್ಲಿ ಯಾವುದೇ ಸಂದರ್ಭದಲ್ಲೂ ಮೀಸಲಾತಿ ವರ್ಗದ ವ್ಯಕ್ತಿಗಳು ಸಾಮಾನ್ಯ ವರ್ಗದ ಸ್ಥಾನಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿರುವುದಾಗಿ ಹೇಳಲಾಗಿದೆ. ಆದರೆ, ನ್ಯಾಯಾಲಯ ಈ ತೀರ್ಪನ್ನು ಯಾವಾಗ ಪ್ರಕಟಿಸಿದೆ ಎಂದ ನಿರ್ದಿಷ್ಟ ಸಮಯದ ಮತ್ತು ಪ್ರಕರಣದ ಕುರಿತು ಪೋಸ್ಟ್‌ನಲ್ಲಿ ವಿವರಗಳಿಲ್ಲ.

ನಾವು ನಡೆಸಿದ ಪರಿಶೀಲನೆಯಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿದ್ದ ಮೀಸಲಾತಿಯನ್ನು ರದ್ದುಪಡಿಸಿದೆ ಎಂಬುವುದು ಸುಳ್ಳು ಸುದ್ದಿ ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ಇನ್ನು ಮುಂದೆ ವಾರಕ್ಕೆ ಮೂರು ದಿನ ರಜೆ ಎನ್ನುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...