Homeಫ್ಯಾಕ್ಟ್‌ಚೆಕ್Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

- Advertisement -
- Advertisement -

ಟೈಮ್ಸ್ ನೆಟ್‌ವರ್ಕ್‌ ನಡೆಸಿದ ‘ಟೈಮ್ಸ್‌ ನೌ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಿರೂಪಕಿ, “ನೀವು ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ?” ಎಂದು ಕೇಳಿದ್ದಕ್ಕೆ. “ಇಲ್ಲ, ಚುನಾವಣೆಗೆ ಎದುರಿಸುವಷ್ಟು ಹಣ ನನ್ನಲ್ಲಿ ಇಲ್ಲ” ಎಂದು ನಿರ್ಮಲಾ ಸೀತಾರಾಮ್ ಉತ್ತರಿಸಿದ್ದಾರೆ.

“ಏನಿದು! ದೇಶದ ಹಣಕಾಸು ಸಚಿವೆಯ ಬಳಿ ಹಣ ಇಲ್ಲವೇ?” ಎಂದು ನಿರೂಪಕಿ ಕೇಳಿದ್ದಕ್ಕೆ. “ಹೌದು, ದೇಶದ ಏಕೀಕೃ ನಿಧಿ (Consolidated Fund) ನನ್ನದಲ್ಲ ದೇಶದ್ದು. ನನ್ನ ಏನಿದ್ದರೂ ವೇತನ ಇತ್ಯಾದಿ ಮಾತ್ರ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹಾಗಾದರೆ, ನಿಜವಾಗಿಯೂ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸಲು ಹಣ ಇಲ್ವಾ? ದೇಶದ ಹಣಕಾಸು ಸಚಿವೆ, ಪ್ರಭಾವಿ ರಾಜಕಾರಣಿ ಅಷ್ಟೊಂದು ಅರ್ಥಿಕ ಸಂಕಷ್ಟದಲ್ಲಿ ಇದ್ದಾರಾ? ನಿರ್ಮಲಾ ಸೀತಾರಾಮನ್ ಬಳಿ ಇತರ ಯಾವುದೇ ಆಸ್ತಿಗಳು ಇಲ್ವಾ? ಎಂಬುವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ನಿರ್ಮಲಾ ಸೀತಾರಾಮನ್ ಹೇಳಿಕೆ ಸಂಬಂಧಪಟ್ಟಂತೆ ಅವರ ಆಸ್ತಿ ವಿವರ ತಿಳಿಯಲು 2023ರಲ್ಲಿ ಸೀತಾರಾಮನ್ ಅವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸಲ್ಲಿಸಿದ್ದ ಚುನಾವಣಾ ಅಫಿಡವಿಟ್ ಪರಿಶೀಲಿಸಿದ್ದೇವೆ. ಈ ವೇಳೆ ನಮಗೆ ಗೊತ್ತಾದ ಮಾಹಿತಿಯೆಂದರೆ, ನಿರ್ಮಲಾ ಸೀತಾರಾಮನ್ ಅವರೇ ಘೋಷಿಸಿಕೊಂಡಂತೆ ಅವರ ಬಳಿ 2 ಕೋಟಿಗೂ ಅಧಿಕ ಮೌಲ್ಯದ ಆಸ್ತಿ-ಪಾಸ್ತಿ ಇದೆ.

ನಿರ್ಮಲಾ ಸೀತಾರಾಮನ್ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ, ಅವರು ಸುಮಾರು 1.87 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮತ್ತು 69.12 ಲಕ್ಷ ಮೌಲ್ಯದ ಚರಾಸ್ತಿ ಸೇರಿ ಒಟ್ಟು 2.56 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.

ಸುದ್ದಿ ಲಿಂಕ್ 

ನಿರ್ಮಲಾ ಸೀತಾರಾಮನ್ ಮತ್ತು ಅವರ ಪತಿ ಪರಕಾಲ ಪ್ರಭಾಕರ್ ಮಾಲೀಕತ್ವದ 1.7 ಕೋಟಿ ರೂ. ಮೌಲ್ಯದ
ವಸತಿ ಕಟ್ಟಡವೊಂದರಲ್ಲಿ ನಿರ್ಮಲಾ ಅವರು ಶೇ. 50ರಷ್ಟು ಪಾಲನ್ನು ಹೊಂದಿದ್ದಾರೆ. 17 ಲಕ್ಷ ಮೌಲ್ಯದ ಕೃಷಿಯೇತರ ಜಮೀನೂ ಅವರ ಬಳಿಯಿದೆ.

ಇನ್ನೂ, ಚರಾಸ್ತಿ ನೋಡುವುದಾದರೆ, ನಿರ್ಮಲಾ ಅವರು 35.52 ಲಕ್ಷ ರೂಪಾಯಿ ಹಣ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದಾರೆ ಮತ್ತು 18.39 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ.

ಈ ಅಂಕಿ ಅಂಶಗಳು ನಿರ್ಮಲಾ ಸೀತಾರಾಮನ್ ಚುನಾವಣೆ ಎದುರಿಸುವಷ್ಟು ಹಣ ಇಲ್ಲದವರಲ್ಲ ಎಂಬುವುದನ್ನು ಸಾಬೀತುಪಡಿಸುತ್ತದೆ.

ಚುನಾವಣಾ ಖರ್ಚು ಮಿತಿ ಮೀರುತ್ತಿದೆಯಾ ಬಿಜೆಪಿ?

ಟೈಮ್ಸ್‌ ನೌ ಸಮ್ಮಿಟ್‌ನಲ್ಲಿ ಮಾತನಾಡುವಾಗ ನಿರ್ಮಲಾ ಸೀತಾರಾಮನ್ “ನನ್ನ ಬಳಿ ಚುನಾವಣೆ ಎದುರಿಸಲು ಹಣವಿಲ್ಲ” ಎಂದಿರುವುದು ಕೆಲವೊಂದು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಪೈಕಿ ಒಂದು ಬಿಜೆಪಿ ಚುನಾವಣಾ ಖರ್ಚಿನ ಮಿತಿ ಮೀರುತ್ತಿದೆಯಾ? ಎಂಬುವುದು.

ಸುದ್ದಿ ಲಿಂಕ್ 

ಚುನಾವಣಾ ಆಯೋಗದ ನಿಯಮ ಪ್ರಕಾರ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಯ ಖರ್ಚಿನ ಮಿತಿ 95 ಲಕ್ಷ ರೂಪಾಯಿ ಎಂದು ನಿಗದಿಪಡಿಸಲಾಗಿದೆ. ನಿರ್ಮಲಾ ಸೀತಾರಾಮನ್ ಬಳಿ ಪ್ರಸ್ತುತ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಇದೆ. ಅಂದರೆ, 95 ಲಕ್ಷ ರೂಪಾಯಿಗಿಂತ ಹೆಚ್ಚು ಮೌಲ್ಯದ ಆಸ್ತಿ ಇದೆ. ಆದರೂ, ಹಣ ಇಲ್ಲ ಎಂಬುವುದರ ಅರ್ಥ, ಬಿಜೆಪಿ ನಿಯಮ ಮೀರಿ ಖರ್ಚು ಮಾಡುತ್ತಿದೆ ಎಂದಾ? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...