Homeಫ್ಯಾಕ್ಟ್‌ಚೆಕ್Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

- Advertisement -
- Advertisement -

ಟೈಮ್ಸ್ ನೆಟ್‌ವರ್ಕ್‌ ನಡೆಸಿದ ‘ಟೈಮ್ಸ್‌ ನೌ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಿರೂಪಕಿ, “ನೀವು ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ?” ಎಂದು ಕೇಳಿದ್ದಕ್ಕೆ. “ಇಲ್ಲ, ಚುನಾವಣೆಗೆ ಎದುರಿಸುವಷ್ಟು ಹಣ ನನ್ನಲ್ಲಿ ಇಲ್ಲ” ಎಂದು ನಿರ್ಮಲಾ ಸೀತಾರಾಮ್ ಉತ್ತರಿಸಿದ್ದಾರೆ.

“ಏನಿದು! ದೇಶದ ಹಣಕಾಸು ಸಚಿವೆಯ ಬಳಿ ಹಣ ಇಲ್ಲವೇ?” ಎಂದು ನಿರೂಪಕಿ ಕೇಳಿದ್ದಕ್ಕೆ. “ಹೌದು, ದೇಶದ ಏಕೀಕೃ ನಿಧಿ (Consolidated Fund) ನನ್ನದಲ್ಲ ದೇಶದ್ದು. ನನ್ನ ಏನಿದ್ದರೂ ವೇತನ ಇತ್ಯಾದಿ ಮಾತ್ರ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹಾಗಾದರೆ, ನಿಜವಾಗಿಯೂ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸಲು ಹಣ ಇಲ್ವಾ? ದೇಶದ ಹಣಕಾಸು ಸಚಿವೆ, ಪ್ರಭಾವಿ ರಾಜಕಾರಣಿ ಅಷ್ಟೊಂದು ಅರ್ಥಿಕ ಸಂಕಷ್ಟದಲ್ಲಿ ಇದ್ದಾರಾ? ನಿರ್ಮಲಾ ಸೀತಾರಾಮನ್ ಬಳಿ ಇತರ ಯಾವುದೇ ಆಸ್ತಿಗಳು ಇಲ್ವಾ? ಎಂಬುವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ನಿರ್ಮಲಾ ಸೀತಾರಾಮನ್ ಹೇಳಿಕೆ ಸಂಬಂಧಪಟ್ಟಂತೆ ಅವರ ಆಸ್ತಿ ವಿವರ ತಿಳಿಯಲು 2023ರಲ್ಲಿ ಸೀತಾರಾಮನ್ ಅವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸಲ್ಲಿಸಿದ್ದ ಚುನಾವಣಾ ಅಫಿಡವಿಟ್ ಪರಿಶೀಲಿಸಿದ್ದೇವೆ. ಈ ವೇಳೆ ನಮಗೆ ಗೊತ್ತಾದ ಮಾಹಿತಿಯೆಂದರೆ, ನಿರ್ಮಲಾ ಸೀತಾರಾಮನ್ ಅವರೇ ಘೋಷಿಸಿಕೊಂಡಂತೆ ಅವರ ಬಳಿ 2 ಕೋಟಿಗೂ ಅಧಿಕ ಮೌಲ್ಯದ ಆಸ್ತಿ-ಪಾಸ್ತಿ ಇದೆ.

ನಿರ್ಮಲಾ ಸೀತಾರಾಮನ್ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ, ಅವರು ಸುಮಾರು 1.87 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮತ್ತು 69.12 ಲಕ್ಷ ಮೌಲ್ಯದ ಚರಾಸ್ತಿ ಸೇರಿ ಒಟ್ಟು 2.56 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.

ಸುದ್ದಿ ಲಿಂಕ್ 

ನಿರ್ಮಲಾ ಸೀತಾರಾಮನ್ ಮತ್ತು ಅವರ ಪತಿ ಪರಕಾಲ ಪ್ರಭಾಕರ್ ಮಾಲೀಕತ್ವದ 1.7 ಕೋಟಿ ರೂ. ಮೌಲ್ಯದ
ವಸತಿ ಕಟ್ಟಡವೊಂದರಲ್ಲಿ ನಿರ್ಮಲಾ ಅವರು ಶೇ. 50ರಷ್ಟು ಪಾಲನ್ನು ಹೊಂದಿದ್ದಾರೆ. 17 ಲಕ್ಷ ಮೌಲ್ಯದ ಕೃಷಿಯೇತರ ಜಮೀನೂ ಅವರ ಬಳಿಯಿದೆ.

ಇನ್ನೂ, ಚರಾಸ್ತಿ ನೋಡುವುದಾದರೆ, ನಿರ್ಮಲಾ ಅವರು 35.52 ಲಕ್ಷ ರೂಪಾಯಿ ಹಣ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದಾರೆ ಮತ್ತು 18.39 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ.

ಈ ಅಂಕಿ ಅಂಶಗಳು ನಿರ್ಮಲಾ ಸೀತಾರಾಮನ್ ಚುನಾವಣೆ ಎದುರಿಸುವಷ್ಟು ಹಣ ಇಲ್ಲದವರಲ್ಲ ಎಂಬುವುದನ್ನು ಸಾಬೀತುಪಡಿಸುತ್ತದೆ.

ಚುನಾವಣಾ ಖರ್ಚು ಮಿತಿ ಮೀರುತ್ತಿದೆಯಾ ಬಿಜೆಪಿ?

ಟೈಮ್ಸ್‌ ನೌ ಸಮ್ಮಿಟ್‌ನಲ್ಲಿ ಮಾತನಾಡುವಾಗ ನಿರ್ಮಲಾ ಸೀತಾರಾಮನ್ “ನನ್ನ ಬಳಿ ಚುನಾವಣೆ ಎದುರಿಸಲು ಹಣವಿಲ್ಲ” ಎಂದಿರುವುದು ಕೆಲವೊಂದು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಪೈಕಿ ಒಂದು ಬಿಜೆಪಿ ಚುನಾವಣಾ ಖರ್ಚಿನ ಮಿತಿ ಮೀರುತ್ತಿದೆಯಾ? ಎಂಬುವುದು.

ಸುದ್ದಿ ಲಿಂಕ್ 

ಚುನಾವಣಾ ಆಯೋಗದ ನಿಯಮ ಪ್ರಕಾರ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಯ ಖರ್ಚಿನ ಮಿತಿ 95 ಲಕ್ಷ ರೂಪಾಯಿ ಎಂದು ನಿಗದಿಪಡಿಸಲಾಗಿದೆ. ನಿರ್ಮಲಾ ಸೀತಾರಾಮನ್ ಬಳಿ ಪ್ರಸ್ತುತ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಇದೆ. ಅಂದರೆ, 95 ಲಕ್ಷ ರೂಪಾಯಿಗಿಂತ ಹೆಚ್ಚು ಮೌಲ್ಯದ ಆಸ್ತಿ ಇದೆ. ಆದರೂ, ಹಣ ಇಲ್ಲ ಎಂಬುವುದರ ಅರ್ಥ, ಬಿಜೆಪಿ ನಿಯಮ ಮೀರಿ ಖರ್ಚು ಮಾಡುತ್ತಿದೆ ಎಂದಾ? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....