Homeಫ್ಯಾಕ್ಟ್‌ಚೆಕ್Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

- Advertisement -
- Advertisement -

ಟೈಮ್ಸ್ ನೆಟ್‌ವರ್ಕ್‌ ನಡೆಸಿದ ‘ಟೈಮ್ಸ್‌ ನೌ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಿರೂಪಕಿ, “ನೀವು ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ?” ಎಂದು ಕೇಳಿದ್ದಕ್ಕೆ. “ಇಲ್ಲ, ಚುನಾವಣೆಗೆ ಎದುರಿಸುವಷ್ಟು ಹಣ ನನ್ನಲ್ಲಿ ಇಲ್ಲ” ಎಂದು ನಿರ್ಮಲಾ ಸೀತಾರಾಮ್ ಉತ್ತರಿಸಿದ್ದಾರೆ.

“ಏನಿದು! ದೇಶದ ಹಣಕಾಸು ಸಚಿವೆಯ ಬಳಿ ಹಣ ಇಲ್ಲವೇ?” ಎಂದು ನಿರೂಪಕಿ ಕೇಳಿದ್ದಕ್ಕೆ. “ಹೌದು, ದೇಶದ ಏಕೀಕೃ ನಿಧಿ (Consolidated Fund) ನನ್ನದಲ್ಲ ದೇಶದ್ದು. ನನ್ನ ಏನಿದ್ದರೂ ವೇತನ ಇತ್ಯಾದಿ ಮಾತ್ರ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹಾಗಾದರೆ, ನಿಜವಾಗಿಯೂ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸಲು ಹಣ ಇಲ್ವಾ? ದೇಶದ ಹಣಕಾಸು ಸಚಿವೆ, ಪ್ರಭಾವಿ ರಾಜಕಾರಣಿ ಅಷ್ಟೊಂದು ಅರ್ಥಿಕ ಸಂಕಷ್ಟದಲ್ಲಿ ಇದ್ದಾರಾ? ನಿರ್ಮಲಾ ಸೀತಾರಾಮನ್ ಬಳಿ ಇತರ ಯಾವುದೇ ಆಸ್ತಿಗಳು ಇಲ್ವಾ? ಎಂಬುವುದನ್ನು ನೋಡೋಣ.

ಫ್ಯಾಕ್ಟ್‌ಚೆಕ್ : ನಿರ್ಮಲಾ ಸೀತಾರಾಮನ್ ಹೇಳಿಕೆ ಸಂಬಂಧಪಟ್ಟಂತೆ ಅವರ ಆಸ್ತಿ ವಿವರ ತಿಳಿಯಲು 2023ರಲ್ಲಿ ಸೀತಾರಾಮನ್ ಅವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸಲ್ಲಿಸಿದ್ದ ಚುನಾವಣಾ ಅಫಿಡವಿಟ್ ಪರಿಶೀಲಿಸಿದ್ದೇವೆ. ಈ ವೇಳೆ ನಮಗೆ ಗೊತ್ತಾದ ಮಾಹಿತಿಯೆಂದರೆ, ನಿರ್ಮಲಾ ಸೀತಾರಾಮನ್ ಅವರೇ ಘೋಷಿಸಿಕೊಂಡಂತೆ ಅವರ ಬಳಿ 2 ಕೋಟಿಗೂ ಅಧಿಕ ಮೌಲ್ಯದ ಆಸ್ತಿ-ಪಾಸ್ತಿ ಇದೆ.

ನಿರ್ಮಲಾ ಸೀತಾರಾಮನ್ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ, ಅವರು ಸುಮಾರು 1.87 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮತ್ತು 69.12 ಲಕ್ಷ ಮೌಲ್ಯದ ಚರಾಸ್ತಿ ಸೇರಿ ಒಟ್ಟು 2.56 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.

ಸುದ್ದಿ ಲಿಂಕ್ 

ನಿರ್ಮಲಾ ಸೀತಾರಾಮನ್ ಮತ್ತು ಅವರ ಪತಿ ಪರಕಾಲ ಪ್ರಭಾಕರ್ ಮಾಲೀಕತ್ವದ 1.7 ಕೋಟಿ ರೂ. ಮೌಲ್ಯದ
ವಸತಿ ಕಟ್ಟಡವೊಂದರಲ್ಲಿ ನಿರ್ಮಲಾ ಅವರು ಶೇ. 50ರಷ್ಟು ಪಾಲನ್ನು ಹೊಂದಿದ್ದಾರೆ. 17 ಲಕ್ಷ ಮೌಲ್ಯದ ಕೃಷಿಯೇತರ ಜಮೀನೂ ಅವರ ಬಳಿಯಿದೆ.

ಇನ್ನೂ, ಚರಾಸ್ತಿ ನೋಡುವುದಾದರೆ, ನಿರ್ಮಲಾ ಅವರು 35.52 ಲಕ್ಷ ರೂಪಾಯಿ ಹಣ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದಾರೆ ಮತ್ತು 18.39 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಹೊಂದಿದ್ದಾರೆ.

ಈ ಅಂಕಿ ಅಂಶಗಳು ನಿರ್ಮಲಾ ಸೀತಾರಾಮನ್ ಚುನಾವಣೆ ಎದುರಿಸುವಷ್ಟು ಹಣ ಇಲ್ಲದವರಲ್ಲ ಎಂಬುವುದನ್ನು ಸಾಬೀತುಪಡಿಸುತ್ತದೆ.

ಚುನಾವಣಾ ಖರ್ಚು ಮಿತಿ ಮೀರುತ್ತಿದೆಯಾ ಬಿಜೆಪಿ?

ಟೈಮ್ಸ್‌ ನೌ ಸಮ್ಮಿಟ್‌ನಲ್ಲಿ ಮಾತನಾಡುವಾಗ ನಿರ್ಮಲಾ ಸೀತಾರಾಮನ್ “ನನ್ನ ಬಳಿ ಚುನಾವಣೆ ಎದುರಿಸಲು ಹಣವಿಲ್ಲ” ಎಂದಿರುವುದು ಕೆಲವೊಂದು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಈ ಪೈಕಿ ಒಂದು ಬಿಜೆಪಿ ಚುನಾವಣಾ ಖರ್ಚಿನ ಮಿತಿ ಮೀರುತ್ತಿದೆಯಾ? ಎಂಬುವುದು.

ಸುದ್ದಿ ಲಿಂಕ್ 

ಚುನಾವಣಾ ಆಯೋಗದ ನಿಯಮ ಪ್ರಕಾರ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಯ ಖರ್ಚಿನ ಮಿತಿ 95 ಲಕ್ಷ ರೂಪಾಯಿ ಎಂದು ನಿಗದಿಪಡಿಸಲಾಗಿದೆ. ನಿರ್ಮಲಾ ಸೀತಾರಾಮನ್ ಬಳಿ ಪ್ರಸ್ತುತ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಇದೆ. ಅಂದರೆ, 95 ಲಕ್ಷ ರೂಪಾಯಿಗಿಂತ ಹೆಚ್ಚು ಮೌಲ್ಯದ ಆಸ್ತಿ ಇದೆ. ಆದರೂ, ಹಣ ಇಲ್ಲ ಎಂಬುವುದರ ಅರ್ಥ, ಬಿಜೆಪಿ ನಿಯಮ ಮೀರಿ ಖರ್ಚು ಮಾಡುತ್ತಿದೆ ಎಂದಾ? ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿರುವುದು ಮೋಹನ್ ಭಾಗವತ್ ನೇತೃತ್ವದ ಆರ್‌ಎಸ್‌ಎಸ್‌ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...