Homeನಿಜವೋ ಸುಳ್ಳೋFact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

- Advertisement -
- Advertisement -

ಭಾರತ ಸರ್ಕಾರವು ಎಲ್ಲಾ ರೀತಿಯ ಆನ್‌ಲೈನ್ ಮತ್ತು ದೂರವಾಣಿ ಸಂವಹನಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಜಕೀಯ ಅಥವಾ ಧರ್ಮಕ್ಕೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸದಂತೆ ಜನರನ್ನು ಕೇಳಿದೆ ಎಂದು ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದ್ದು “ಅಲ್ಟ್ ನ್ಯೂಸ್” ಇದರ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದೆ.

ವೈರಲ್ ಸಂದೇಶಗಳು ಹೀಗಿವೆ “ನಾಳೆಯಿಂದ ಭಾರತದಲ್ಲಿ ಹೊಸ ಸಂವಹನ ನಿಯಮಗಳಿವೆ. ಎಲ್ಲಾ ಕರೆಗಳನ್ನು ದಾಖಲಿಸಲಾಗುತ್ತದೆ, ಎಲ್ಲಾ ಫೋನ್ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗತ್ತದೆ, ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಮ್ಮ ಸಾಧನಗಳು ಸಚಿವಾಲಯ ವ್ಯವಸ್ಥೆಗಳಿಗೆ ಸಂಪರ್ಕ ಹೊಂದಿವೆ. ಯಾವುದೇ ಪೋಸ್ಟ್‌ಗಳು ಅಥವಾ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ, ಸರ್ಕಾರ / ಪ್ರಧಾನಿ ಇತ್ಯಾದಿಗಳ ಬಗ್ಗೆ ರಾಜಕೀಯ / ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನೀವು ಸ್ವೀಕರಿಸುತ್ತೀರಿ. ಯಾವುದೇ ರಾಜಕೀಯ ಮತ್ತು ಧಾರ್ಮಿಕ ಚರ್ಚೆಯಲ್ಲಿ ಯಾವುದೇ ಸಂದೇಶವನ್ನು ಬರೆಯುವುದು ಅಥವಾ ರವಾನಿಸುವುದು ಈಗ ಅಪರಾಧ …. ವಾರಂಟ್ ಇಲ್ಲದೆ ಬಂಧನ …ಇದು ತುಂಬಾ ಗಂಭೀರವಾಗಿದೆ. ಅನಗತ್ಯ ಸಂದೇಶಗಳನ್ನು ಕಳುಹಿಸದಂತೆ ನೋಡಿಕೊಳ್ಳಿ. ಕಾಳಜಿ ವಹಿಸಲು ಈ ಬಗ್ಗೆ ಎಲ್ಲರಿಗೂ ತಿಳಿಸಿ. ನಿಮ್ಮ ಸ್ನೇಹಿತರು ಮತ್ತು ಇತರರಿಗೆ ತಿಳಿಸಿ”

ಈ ಮಾಹಿತಿ ಹರಡುತ್ತಿದ್ದಂತೆ ವಾಟ್ಸಪ್ ಗಳಲ್ಲಿ ಸಂದೇಶವನ್ನು ಕೇವಲ ಅಡ್ಮಿನ್‌ಗಳು ಮಾತ್ರ ಹಾಕುವಂತೆ ಮಾಡಲಾಗಿತ್ತು. ಹಲವರು ಇದು ಸಂವಿಧಾನ ವಿರೋಧಿಯಾದ್ದು ಜನರ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲವೆಂದು ವಾದಿಸಿದ್ದರೂ ಸುಳ್ಳು ಸಂದೇಶ ನಿರಂತರವಾಗಿ ಹರಡಲಾಗುತ್ತಿತ್ತು.

ಮಾರ್ಚ್ 24 ರಂದು, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ “ಅಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ” ಎಂಬ ಸಂದೇಶವನ್ನು ಟ್ವಿಟರ್ ಮೂಲಕ ಹೇಳಿತ್ತು.

ವಾಟ್ಸಾಪ್‌ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ (E2EE) ಎಂಬ ವಿಷಯವಿದೆ, ಇದರರ್ಥ “ನೀವು ಮತ್ತು ನೀವು ಸಂವಹನ ನಡೆಸುತ್ತಿರುವ ವ್ಯಕ್ತಿ ಮಾತ್ರ ಕಳುಹಿಸಿದದನ್ನು ಓದಬಹುದು. ಇದರ ನಡುವೆ ಯಾರೂ ಇರುವುದಿಲ್ಲ, ವಾಟ್ಸಾಪ್ ಕೂಡಾ ಓದುವುದಿಲ್ಲ”. ನೀವು ಸಂದೇಶ ಕಳುಹಿಸಿರುವ ವ್ಯಕ್ತಿ ನಿಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳದ ಹೊರತು ಹಾಗೂ ಅಥವಾ ನಿಮ್ಮ ಮೊಬೈಲ್ ಸುರಕ್ಷತೆಯಲ್ಲಿ ಉಲ್ಲಂಘನೆಯಾಗದಿದ್ದರೆ E2EE ಸಂಭಾಷಣೆಗಳು ಖಾಸಗಿಯಾಗಿರುತ್ತವೆ.

ಫೇಸ್‌ಬುಕ್ ಮೆಸೆಂಜರ್ ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸಕ್ರಿಯಗೊಳಿಸಿ ಬರುವುದಿಲ್ಲ. ಆದರೆ ಇದು ‘ರಹಸ್ಯ ಸಂಭಾಷಣೆ’ ಎಂಬ ವೈಶಿಷ್ಟ್ಯವನ್ನು ಹೊಂದಿದೆ, ಅದು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ನಂತೆಯೇ ಕೆಲಸ ಮಾಡುತ್ತದೆ. ಅಂತೆಯೇ, ಟ್ವಿಟರ್ ತನ್ನ ನೇರ ಸಂದೇಶಗಳಿಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಹೊಂದಿಲ್ಲ. 2018 ರ ಟೆಕ್ ಕ್ರಂಚ್ ವರದಿಯ ಪ್ರಕಾರ, ಟ್ವಿಟರ್ ಫೇಸ್‌ಬುಕ್‌ನ ರಹಸ್ಯ ಸಂಭಾಷಣೆಯನ್ನು ಹೋಲುವ ವೈಶಿಷ್ಟ್ಯವನ್ನು ಹೊಂದಲು ಪರೀಕ್ಷೆಗಳನ್ನು ನಡೆಸುತ್ತಿದೆ.

ಎಲ್ಲಾ E2EE ಮೆಸೇಜಿಂಗ್ ಅಪ್ಲಿಕೇಶನ್‌ಗಳು ಒಂದೇ ರೀತಿ ಇರುವುದಿಲ್ಲ. ಟೆಕ್ ಬ್ಲಾಗ್ ಆದ ಟಾಮ್ಸ್ ಗೈಡ್, ಆಂಡ್ರಾಯ್ಡ್ ಅಥವಾ iOS ಆಗಿ ಲಭ್ಯವಿರುವ ವಿವಿಧ E2EE ಅಪ್ಲಿಕೇಶನ್ಗಳನ್ನು ಪಟ್ಟಿ ಮಾಡಿದೆ. ಯುಎಸ್ ಮೂಲದ ಎಂಗಡ್ಜೆಟ್ ಎಂಬ ಟೆಕ್ ನ್ಯೂಸ್ ವೆಬ್‌ಸೈಟ್  2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

ಇದಕ್ಕೂ ಮೊದಲು ವಾಟ್ಸಪ್ಪಿನಲ್ಲಿ, ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು, ಜೂನ್ 15 ರವರೆಗೆ ಭಾರತದಲ್ಲಿ ಲಾಕ್ ಡೌನ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ ಎಂದು ತಪ್ಪಾಗಿ ಸಂದೇಶ ಹರಡಲಾಗಿತ್ತು.


ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...