Homeನಿಜವೋ ಸುಳ್ಳೋFact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

- Advertisement -
- Advertisement -

ಭಾರತ ಸರ್ಕಾರವು ಎಲ್ಲಾ ರೀತಿಯ ಆನ್‌ಲೈನ್ ಮತ್ತು ದೂರವಾಣಿ ಸಂವಹನಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಜಕೀಯ ಅಥವಾ ಧರ್ಮಕ್ಕೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸದಂತೆ ಜನರನ್ನು ಕೇಳಿದೆ ಎಂದು ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದ್ದು “ಅಲ್ಟ್ ನ್ಯೂಸ್” ಇದರ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದೆ.

ವೈರಲ್ ಸಂದೇಶಗಳು ಹೀಗಿವೆ “ನಾಳೆಯಿಂದ ಭಾರತದಲ್ಲಿ ಹೊಸ ಸಂವಹನ ನಿಯಮಗಳಿವೆ. ಎಲ್ಲಾ ಕರೆಗಳನ್ನು ದಾಖಲಿಸಲಾಗುತ್ತದೆ, ಎಲ್ಲಾ ಫೋನ್ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗತ್ತದೆ, ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಮ್ಮ ಸಾಧನಗಳು ಸಚಿವಾಲಯ ವ್ಯವಸ್ಥೆಗಳಿಗೆ ಸಂಪರ್ಕ ಹೊಂದಿವೆ. ಯಾವುದೇ ಪೋಸ್ಟ್‌ಗಳು ಅಥವಾ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ, ಸರ್ಕಾರ / ಪ್ರಧಾನಿ ಇತ್ಯಾದಿಗಳ ಬಗ್ಗೆ ರಾಜಕೀಯ / ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನೀವು ಸ್ವೀಕರಿಸುತ್ತೀರಿ. ಯಾವುದೇ ರಾಜಕೀಯ ಮತ್ತು ಧಾರ್ಮಿಕ ಚರ್ಚೆಯಲ್ಲಿ ಯಾವುದೇ ಸಂದೇಶವನ್ನು ಬರೆಯುವುದು ಅಥವಾ ರವಾನಿಸುವುದು ಈಗ ಅಪರಾಧ …. ವಾರಂಟ್ ಇಲ್ಲದೆ ಬಂಧನ …ಇದು ತುಂಬಾ ಗಂಭೀರವಾಗಿದೆ. ಅನಗತ್ಯ ಸಂದೇಶಗಳನ್ನು ಕಳುಹಿಸದಂತೆ ನೋಡಿಕೊಳ್ಳಿ. ಕಾಳಜಿ ವಹಿಸಲು ಈ ಬಗ್ಗೆ ಎಲ್ಲರಿಗೂ ತಿಳಿಸಿ. ನಿಮ್ಮ ಸ್ನೇಹಿತರು ಮತ್ತು ಇತರರಿಗೆ ತಿಳಿಸಿ”

ಈ ಮಾಹಿತಿ ಹರಡುತ್ತಿದ್ದಂತೆ ವಾಟ್ಸಪ್ ಗಳಲ್ಲಿ ಸಂದೇಶವನ್ನು ಕೇವಲ ಅಡ್ಮಿನ್‌ಗಳು ಮಾತ್ರ ಹಾಕುವಂತೆ ಮಾಡಲಾಗಿತ್ತು. ಹಲವರು ಇದು ಸಂವಿಧಾನ ವಿರೋಧಿಯಾದ್ದು ಜನರ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲವೆಂದು ವಾದಿಸಿದ್ದರೂ ಸುಳ್ಳು ಸಂದೇಶ ನಿರಂತರವಾಗಿ ಹರಡಲಾಗುತ್ತಿತ್ತು.

ಮಾರ್ಚ್ 24 ರಂದು, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ “ಅಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ” ಎಂಬ ಸಂದೇಶವನ್ನು ಟ್ವಿಟರ್ ಮೂಲಕ ಹೇಳಿತ್ತು.

ವಾಟ್ಸಾಪ್‌ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ (E2EE) ಎಂಬ ವಿಷಯವಿದೆ, ಇದರರ್ಥ “ನೀವು ಮತ್ತು ನೀವು ಸಂವಹನ ನಡೆಸುತ್ತಿರುವ ವ್ಯಕ್ತಿ ಮಾತ್ರ ಕಳುಹಿಸಿದದನ್ನು ಓದಬಹುದು. ಇದರ ನಡುವೆ ಯಾರೂ ಇರುವುದಿಲ್ಲ, ವಾಟ್ಸಾಪ್ ಕೂಡಾ ಓದುವುದಿಲ್ಲ”. ನೀವು ಸಂದೇಶ ಕಳುಹಿಸಿರುವ ವ್ಯಕ್ತಿ ನಿಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳದ ಹೊರತು ಹಾಗೂ ಅಥವಾ ನಿಮ್ಮ ಮೊಬೈಲ್ ಸುರಕ್ಷತೆಯಲ್ಲಿ ಉಲ್ಲಂಘನೆಯಾಗದಿದ್ದರೆ E2EE ಸಂಭಾಷಣೆಗಳು ಖಾಸಗಿಯಾಗಿರುತ್ತವೆ.

ಫೇಸ್‌ಬುಕ್ ಮೆಸೆಂಜರ್ ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸಕ್ರಿಯಗೊಳಿಸಿ ಬರುವುದಿಲ್ಲ. ಆದರೆ ಇದು ‘ರಹಸ್ಯ ಸಂಭಾಷಣೆ’ ಎಂಬ ವೈಶಿಷ್ಟ್ಯವನ್ನು ಹೊಂದಿದೆ, ಅದು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ನಂತೆಯೇ ಕೆಲಸ ಮಾಡುತ್ತದೆ. ಅಂತೆಯೇ, ಟ್ವಿಟರ್ ತನ್ನ ನೇರ ಸಂದೇಶಗಳಿಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಹೊಂದಿಲ್ಲ. 2018 ರ ಟೆಕ್ ಕ್ರಂಚ್ ವರದಿಯ ಪ್ರಕಾರ, ಟ್ವಿಟರ್ ಫೇಸ್‌ಬುಕ್‌ನ ರಹಸ್ಯ ಸಂಭಾಷಣೆಯನ್ನು ಹೋಲುವ ವೈಶಿಷ್ಟ್ಯವನ್ನು ಹೊಂದಲು ಪರೀಕ್ಷೆಗಳನ್ನು ನಡೆಸುತ್ತಿದೆ.

ಎಲ್ಲಾ E2EE ಮೆಸೇಜಿಂಗ್ ಅಪ್ಲಿಕೇಶನ್‌ಗಳು ಒಂದೇ ರೀತಿ ಇರುವುದಿಲ್ಲ. ಟೆಕ್ ಬ್ಲಾಗ್ ಆದ ಟಾಮ್ಸ್ ಗೈಡ್, ಆಂಡ್ರಾಯ್ಡ್ ಅಥವಾ iOS ಆಗಿ ಲಭ್ಯವಿರುವ ವಿವಿಧ E2EE ಅಪ್ಲಿಕೇಶನ್ಗಳನ್ನು ಪಟ್ಟಿ ಮಾಡಿದೆ. ಯುಎಸ್ ಮೂಲದ ಎಂಗಡ್ಜೆಟ್ ಎಂಬ ಟೆಕ್ ನ್ಯೂಸ್ ವೆಬ್‌ಸೈಟ್  2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

ಇದಕ್ಕೂ ಮೊದಲು ವಾಟ್ಸಪ್ಪಿನಲ್ಲಿ, ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು, ಜೂನ್ 15 ರವರೆಗೆ ಭಾರತದಲ್ಲಿ ಲಾಕ್ ಡೌನ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ ಎಂದು ತಪ್ಪಾಗಿ ಸಂದೇಶ ಹರಡಲಾಗಿತ್ತು.


ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...