Homeನಿಜವೋ ಸುಳ್ಳೋFact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

- Advertisement -
- Advertisement -

ಭಾರತ ಸರ್ಕಾರವು ಎಲ್ಲಾ ರೀತಿಯ ಆನ್‌ಲೈನ್ ಮತ್ತು ದೂರವಾಣಿ ಸಂವಹನಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಜಕೀಯ ಅಥವಾ ಧರ್ಮಕ್ಕೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸದಂತೆ ಜನರನ್ನು ಕೇಳಿದೆ ಎಂದು ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದ್ದು “ಅಲ್ಟ್ ನ್ಯೂಸ್” ಇದರ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದೆ.

ವೈರಲ್ ಸಂದೇಶಗಳು ಹೀಗಿವೆ “ನಾಳೆಯಿಂದ ಭಾರತದಲ್ಲಿ ಹೊಸ ಸಂವಹನ ನಿಯಮಗಳಿವೆ. ಎಲ್ಲಾ ಕರೆಗಳನ್ನು ದಾಖಲಿಸಲಾಗುತ್ತದೆ, ಎಲ್ಲಾ ಫೋನ್ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗತ್ತದೆ, ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಮ್ಮ ಸಾಧನಗಳು ಸಚಿವಾಲಯ ವ್ಯವಸ್ಥೆಗಳಿಗೆ ಸಂಪರ್ಕ ಹೊಂದಿವೆ. ಯಾವುದೇ ಪೋಸ್ಟ್‌ಗಳು ಅಥವಾ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ, ಸರ್ಕಾರ / ಪ್ರಧಾನಿ ಇತ್ಯಾದಿಗಳ ಬಗ್ಗೆ ರಾಜಕೀಯ / ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನೀವು ಸ್ವೀಕರಿಸುತ್ತೀರಿ. ಯಾವುದೇ ರಾಜಕೀಯ ಮತ್ತು ಧಾರ್ಮಿಕ ಚರ್ಚೆಯಲ್ಲಿ ಯಾವುದೇ ಸಂದೇಶವನ್ನು ಬರೆಯುವುದು ಅಥವಾ ರವಾನಿಸುವುದು ಈಗ ಅಪರಾಧ …. ವಾರಂಟ್ ಇಲ್ಲದೆ ಬಂಧನ …ಇದು ತುಂಬಾ ಗಂಭೀರವಾಗಿದೆ. ಅನಗತ್ಯ ಸಂದೇಶಗಳನ್ನು ಕಳುಹಿಸದಂತೆ ನೋಡಿಕೊಳ್ಳಿ. ಕಾಳಜಿ ವಹಿಸಲು ಈ ಬಗ್ಗೆ ಎಲ್ಲರಿಗೂ ತಿಳಿಸಿ. ನಿಮ್ಮ ಸ್ನೇಹಿತರು ಮತ್ತು ಇತರರಿಗೆ ತಿಳಿಸಿ”

ಈ ಮಾಹಿತಿ ಹರಡುತ್ತಿದ್ದಂತೆ ವಾಟ್ಸಪ್ ಗಳಲ್ಲಿ ಸಂದೇಶವನ್ನು ಕೇವಲ ಅಡ್ಮಿನ್‌ಗಳು ಮಾತ್ರ ಹಾಕುವಂತೆ ಮಾಡಲಾಗಿತ್ತು. ಹಲವರು ಇದು ಸಂವಿಧಾನ ವಿರೋಧಿಯಾದ್ದು ಜನರ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲವೆಂದು ವಾದಿಸಿದ್ದರೂ ಸುಳ್ಳು ಸಂದೇಶ ನಿರಂತರವಾಗಿ ಹರಡಲಾಗುತ್ತಿತ್ತು.

ಮಾರ್ಚ್ 24 ರಂದು, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ “ಅಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ” ಎಂಬ ಸಂದೇಶವನ್ನು ಟ್ವಿಟರ್ ಮೂಲಕ ಹೇಳಿತ್ತು.

ವಾಟ್ಸಾಪ್‌ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ (E2EE) ಎಂಬ ವಿಷಯವಿದೆ, ಇದರರ್ಥ “ನೀವು ಮತ್ತು ನೀವು ಸಂವಹನ ನಡೆಸುತ್ತಿರುವ ವ್ಯಕ್ತಿ ಮಾತ್ರ ಕಳುಹಿಸಿದದನ್ನು ಓದಬಹುದು. ಇದರ ನಡುವೆ ಯಾರೂ ಇರುವುದಿಲ್ಲ, ವಾಟ್ಸಾಪ್ ಕೂಡಾ ಓದುವುದಿಲ್ಲ”. ನೀವು ಸಂದೇಶ ಕಳುಹಿಸಿರುವ ವ್ಯಕ್ತಿ ನಿಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳದ ಹೊರತು ಹಾಗೂ ಅಥವಾ ನಿಮ್ಮ ಮೊಬೈಲ್ ಸುರಕ್ಷತೆಯಲ್ಲಿ ಉಲ್ಲಂಘನೆಯಾಗದಿದ್ದರೆ E2EE ಸಂಭಾಷಣೆಗಳು ಖಾಸಗಿಯಾಗಿರುತ್ತವೆ.

ಫೇಸ್‌ಬುಕ್ ಮೆಸೆಂಜರ್ ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸಕ್ರಿಯಗೊಳಿಸಿ ಬರುವುದಿಲ್ಲ. ಆದರೆ ಇದು ‘ರಹಸ್ಯ ಸಂಭಾಷಣೆ’ ಎಂಬ ವೈಶಿಷ್ಟ್ಯವನ್ನು ಹೊಂದಿದೆ, ಅದು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ನಂತೆಯೇ ಕೆಲಸ ಮಾಡುತ್ತದೆ. ಅಂತೆಯೇ, ಟ್ವಿಟರ್ ತನ್ನ ನೇರ ಸಂದೇಶಗಳಿಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಹೊಂದಿಲ್ಲ. 2018 ರ ಟೆಕ್ ಕ್ರಂಚ್ ವರದಿಯ ಪ್ರಕಾರ, ಟ್ವಿಟರ್ ಫೇಸ್‌ಬುಕ್‌ನ ರಹಸ್ಯ ಸಂಭಾಷಣೆಯನ್ನು ಹೋಲುವ ವೈಶಿಷ್ಟ್ಯವನ್ನು ಹೊಂದಲು ಪರೀಕ್ಷೆಗಳನ್ನು ನಡೆಸುತ್ತಿದೆ.

ಎಲ್ಲಾ E2EE ಮೆಸೇಜಿಂಗ್ ಅಪ್ಲಿಕೇಶನ್‌ಗಳು ಒಂದೇ ರೀತಿ ಇರುವುದಿಲ್ಲ. ಟೆಕ್ ಬ್ಲಾಗ್ ಆದ ಟಾಮ್ಸ್ ಗೈಡ್, ಆಂಡ್ರಾಯ್ಡ್ ಅಥವಾ iOS ಆಗಿ ಲಭ್ಯವಿರುವ ವಿವಿಧ E2EE ಅಪ್ಲಿಕೇಶನ್ಗಳನ್ನು ಪಟ್ಟಿ ಮಾಡಿದೆ. ಯುಎಸ್ ಮೂಲದ ಎಂಗಡ್ಜೆಟ್ ಎಂಬ ಟೆಕ್ ನ್ಯೂಸ್ ವೆಬ್‌ಸೈಟ್  2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

ಇದಕ್ಕೂ ಮೊದಲು ವಾಟ್ಸಪ್ಪಿನಲ್ಲಿ, ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು, ಜೂನ್ 15 ರವರೆಗೆ ಭಾರತದಲ್ಲಿ ಲಾಕ್ ಡೌನ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ ಎಂದು ತಪ್ಪಾಗಿ ಸಂದೇಶ ಹರಡಲಾಗಿತ್ತು.


ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...