Homeನಿಜವೋ ಸುಳ್ಳೋFact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

- Advertisement -
- Advertisement -

ಭಾರತ ಸರ್ಕಾರವು ಎಲ್ಲಾ ರೀತಿಯ ಆನ್‌ಲೈನ್ ಮತ್ತು ದೂರವಾಣಿ ಸಂವಹನಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಜಕೀಯ ಅಥವಾ ಧರ್ಮಕ್ಕೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸದಂತೆ ಜನರನ್ನು ಕೇಳಿದೆ ಎಂದು ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದ್ದು “ಅಲ್ಟ್ ನ್ಯೂಸ್” ಇದರ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದೆ.

ವೈರಲ್ ಸಂದೇಶಗಳು ಹೀಗಿವೆ “ನಾಳೆಯಿಂದ ಭಾರತದಲ್ಲಿ ಹೊಸ ಸಂವಹನ ನಿಯಮಗಳಿವೆ. ಎಲ್ಲಾ ಕರೆಗಳನ್ನು ದಾಖಲಿಸಲಾಗುತ್ತದೆ, ಎಲ್ಲಾ ಫೋನ್ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗತ್ತದೆ, ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಮ್ಮ ಸಾಧನಗಳು ಸಚಿವಾಲಯ ವ್ಯವಸ್ಥೆಗಳಿಗೆ ಸಂಪರ್ಕ ಹೊಂದಿವೆ. ಯಾವುದೇ ಪೋಸ್ಟ್‌ಗಳು ಅಥವಾ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ, ಸರ್ಕಾರ / ಪ್ರಧಾನಿ ಇತ್ಯಾದಿಗಳ ಬಗ್ಗೆ ರಾಜಕೀಯ / ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನೀವು ಸ್ವೀಕರಿಸುತ್ತೀರಿ. ಯಾವುದೇ ರಾಜಕೀಯ ಮತ್ತು ಧಾರ್ಮಿಕ ಚರ್ಚೆಯಲ್ಲಿ ಯಾವುದೇ ಸಂದೇಶವನ್ನು ಬರೆಯುವುದು ಅಥವಾ ರವಾನಿಸುವುದು ಈಗ ಅಪರಾಧ …. ವಾರಂಟ್ ಇಲ್ಲದೆ ಬಂಧನ …ಇದು ತುಂಬಾ ಗಂಭೀರವಾಗಿದೆ. ಅನಗತ್ಯ ಸಂದೇಶಗಳನ್ನು ಕಳುಹಿಸದಂತೆ ನೋಡಿಕೊಳ್ಳಿ. ಕಾಳಜಿ ವಹಿಸಲು ಈ ಬಗ್ಗೆ ಎಲ್ಲರಿಗೂ ತಿಳಿಸಿ. ನಿಮ್ಮ ಸ್ನೇಹಿತರು ಮತ್ತು ಇತರರಿಗೆ ತಿಳಿಸಿ”

ಈ ಮಾಹಿತಿ ಹರಡುತ್ತಿದ್ದಂತೆ ವಾಟ್ಸಪ್ ಗಳಲ್ಲಿ ಸಂದೇಶವನ್ನು ಕೇವಲ ಅಡ್ಮಿನ್‌ಗಳು ಮಾತ್ರ ಹಾಕುವಂತೆ ಮಾಡಲಾಗಿತ್ತು. ಹಲವರು ಇದು ಸಂವಿಧಾನ ವಿರೋಧಿಯಾದ್ದು ಜನರ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲವೆಂದು ವಾದಿಸಿದ್ದರೂ ಸುಳ್ಳು ಸಂದೇಶ ನಿರಂತರವಾಗಿ ಹರಡಲಾಗುತ್ತಿತ್ತು.

ಮಾರ್ಚ್ 24 ರಂದು, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ “ಅಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ” ಎಂಬ ಸಂದೇಶವನ್ನು ಟ್ವಿಟರ್ ಮೂಲಕ ಹೇಳಿತ್ತು.

ವಾಟ್ಸಾಪ್‌ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ (E2EE) ಎಂಬ ವಿಷಯವಿದೆ, ಇದರರ್ಥ “ನೀವು ಮತ್ತು ನೀವು ಸಂವಹನ ನಡೆಸುತ್ತಿರುವ ವ್ಯಕ್ತಿ ಮಾತ್ರ ಕಳುಹಿಸಿದದನ್ನು ಓದಬಹುದು. ಇದರ ನಡುವೆ ಯಾರೂ ಇರುವುದಿಲ್ಲ, ವಾಟ್ಸಾಪ್ ಕೂಡಾ ಓದುವುದಿಲ್ಲ”. ನೀವು ಸಂದೇಶ ಕಳುಹಿಸಿರುವ ವ್ಯಕ್ತಿ ನಿಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳದ ಹೊರತು ಹಾಗೂ ಅಥವಾ ನಿಮ್ಮ ಮೊಬೈಲ್ ಸುರಕ್ಷತೆಯಲ್ಲಿ ಉಲ್ಲಂಘನೆಯಾಗದಿದ್ದರೆ E2EE ಸಂಭಾಷಣೆಗಳು ಖಾಸಗಿಯಾಗಿರುತ್ತವೆ.

ಫೇಸ್‌ಬುಕ್ ಮೆಸೆಂಜರ್ ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸಕ್ರಿಯಗೊಳಿಸಿ ಬರುವುದಿಲ್ಲ. ಆದರೆ ಇದು ‘ರಹಸ್ಯ ಸಂಭಾಷಣೆ’ ಎಂಬ ವೈಶಿಷ್ಟ್ಯವನ್ನು ಹೊಂದಿದೆ, ಅದು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ನಂತೆಯೇ ಕೆಲಸ ಮಾಡುತ್ತದೆ. ಅಂತೆಯೇ, ಟ್ವಿಟರ್ ತನ್ನ ನೇರ ಸಂದೇಶಗಳಿಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಹೊಂದಿಲ್ಲ. 2018 ರ ಟೆಕ್ ಕ್ರಂಚ್ ವರದಿಯ ಪ್ರಕಾರ, ಟ್ವಿಟರ್ ಫೇಸ್‌ಬುಕ್‌ನ ರಹಸ್ಯ ಸಂಭಾಷಣೆಯನ್ನು ಹೋಲುವ ವೈಶಿಷ್ಟ್ಯವನ್ನು ಹೊಂದಲು ಪರೀಕ್ಷೆಗಳನ್ನು ನಡೆಸುತ್ತಿದೆ.

ಎಲ್ಲಾ E2EE ಮೆಸೇಜಿಂಗ್ ಅಪ್ಲಿಕೇಶನ್‌ಗಳು ಒಂದೇ ರೀತಿ ಇರುವುದಿಲ್ಲ. ಟೆಕ್ ಬ್ಲಾಗ್ ಆದ ಟಾಮ್ಸ್ ಗೈಡ್, ಆಂಡ್ರಾಯ್ಡ್ ಅಥವಾ iOS ಆಗಿ ಲಭ್ಯವಿರುವ ವಿವಿಧ E2EE ಅಪ್ಲಿಕೇಶನ್ಗಳನ್ನು ಪಟ್ಟಿ ಮಾಡಿದೆ. ಯುಎಸ್ ಮೂಲದ ಎಂಗಡ್ಜೆಟ್ ಎಂಬ ಟೆಕ್ ನ್ಯೂಸ್ ವೆಬ್‌ಸೈಟ್  2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

ಇದಕ್ಕೂ ಮೊದಲು ವಾಟ್ಸಪ್ಪಿನಲ್ಲಿ, ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು, ಜೂನ್ 15 ರವರೆಗೆ ಭಾರತದಲ್ಲಿ ಲಾಕ್ ಡೌನ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ ಎಂದು ತಪ್ಪಾಗಿ ಸಂದೇಶ ಹರಡಲಾಗಿತ್ತು.


ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...