Homeನಿಜವೋ ಸುಳ್ಳೋFact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

- Advertisement -
- Advertisement -

ಭಾರತ ಸರ್ಕಾರವು ಎಲ್ಲಾ ರೀತಿಯ ಆನ್‌ಲೈನ್ ಮತ್ತು ದೂರವಾಣಿ ಸಂವಹನಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಜಕೀಯ ಅಥವಾ ಧರ್ಮಕ್ಕೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸದಂತೆ ಜನರನ್ನು ಕೇಳಿದೆ ಎಂದು ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದ್ದು “ಅಲ್ಟ್ ನ್ಯೂಸ್” ಇದರ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದೆ.

ವೈರಲ್ ಸಂದೇಶಗಳು ಹೀಗಿವೆ “ನಾಳೆಯಿಂದ ಭಾರತದಲ್ಲಿ ಹೊಸ ಸಂವಹನ ನಿಯಮಗಳಿವೆ. ಎಲ್ಲಾ ಕರೆಗಳನ್ನು ದಾಖಲಿಸಲಾಗುತ್ತದೆ, ಎಲ್ಲಾ ಫೋನ್ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗತ್ತದೆ, ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಮ್ಮ ಸಾಧನಗಳು ಸಚಿವಾಲಯ ವ್ಯವಸ್ಥೆಗಳಿಗೆ ಸಂಪರ್ಕ ಹೊಂದಿವೆ. ಯಾವುದೇ ಪೋಸ್ಟ್‌ಗಳು ಅಥವಾ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ, ಸರ್ಕಾರ / ಪ್ರಧಾನಿ ಇತ್ಯಾದಿಗಳ ಬಗ್ಗೆ ರಾಜಕೀಯ / ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನೀವು ಸ್ವೀಕರಿಸುತ್ತೀರಿ. ಯಾವುದೇ ರಾಜಕೀಯ ಮತ್ತು ಧಾರ್ಮಿಕ ಚರ್ಚೆಯಲ್ಲಿ ಯಾವುದೇ ಸಂದೇಶವನ್ನು ಬರೆಯುವುದು ಅಥವಾ ರವಾನಿಸುವುದು ಈಗ ಅಪರಾಧ …. ವಾರಂಟ್ ಇಲ್ಲದೆ ಬಂಧನ …ಇದು ತುಂಬಾ ಗಂಭೀರವಾಗಿದೆ. ಅನಗತ್ಯ ಸಂದೇಶಗಳನ್ನು ಕಳುಹಿಸದಂತೆ ನೋಡಿಕೊಳ್ಳಿ. ಕಾಳಜಿ ವಹಿಸಲು ಈ ಬಗ್ಗೆ ಎಲ್ಲರಿಗೂ ತಿಳಿಸಿ. ನಿಮ್ಮ ಸ್ನೇಹಿತರು ಮತ್ತು ಇತರರಿಗೆ ತಿಳಿಸಿ”

ಈ ಮಾಹಿತಿ ಹರಡುತ್ತಿದ್ದಂತೆ ವಾಟ್ಸಪ್ ಗಳಲ್ಲಿ ಸಂದೇಶವನ್ನು ಕೇವಲ ಅಡ್ಮಿನ್‌ಗಳು ಮಾತ್ರ ಹಾಕುವಂತೆ ಮಾಡಲಾಗಿತ್ತು. ಹಲವರು ಇದು ಸಂವಿಧಾನ ವಿರೋಧಿಯಾದ್ದು ಜನರ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲವೆಂದು ವಾದಿಸಿದ್ದರೂ ಸುಳ್ಳು ಸಂದೇಶ ನಿರಂತರವಾಗಿ ಹರಡಲಾಗುತ್ತಿತ್ತು.

ಮಾರ್ಚ್ 24 ರಂದು, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ “ಅಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ” ಎಂಬ ಸಂದೇಶವನ್ನು ಟ್ವಿಟರ್ ಮೂಲಕ ಹೇಳಿತ್ತು.

ವಾಟ್ಸಾಪ್‌ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ (E2EE) ಎಂಬ ವಿಷಯವಿದೆ, ಇದರರ್ಥ “ನೀವು ಮತ್ತು ನೀವು ಸಂವಹನ ನಡೆಸುತ್ತಿರುವ ವ್ಯಕ್ತಿ ಮಾತ್ರ ಕಳುಹಿಸಿದದನ್ನು ಓದಬಹುದು. ಇದರ ನಡುವೆ ಯಾರೂ ಇರುವುದಿಲ್ಲ, ವಾಟ್ಸಾಪ್ ಕೂಡಾ ಓದುವುದಿಲ್ಲ”. ನೀವು ಸಂದೇಶ ಕಳುಹಿಸಿರುವ ವ್ಯಕ್ತಿ ನಿಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳದ ಹೊರತು ಹಾಗೂ ಅಥವಾ ನಿಮ್ಮ ಮೊಬೈಲ್ ಸುರಕ್ಷತೆಯಲ್ಲಿ ಉಲ್ಲಂಘನೆಯಾಗದಿದ್ದರೆ E2EE ಸಂಭಾಷಣೆಗಳು ಖಾಸಗಿಯಾಗಿರುತ್ತವೆ.

ಫೇಸ್‌ಬುಕ್ ಮೆಸೆಂಜರ್ ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸಕ್ರಿಯಗೊಳಿಸಿ ಬರುವುದಿಲ್ಲ. ಆದರೆ ಇದು ‘ರಹಸ್ಯ ಸಂಭಾಷಣೆ’ ಎಂಬ ವೈಶಿಷ್ಟ್ಯವನ್ನು ಹೊಂದಿದೆ, ಅದು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ನಂತೆಯೇ ಕೆಲಸ ಮಾಡುತ್ತದೆ. ಅಂತೆಯೇ, ಟ್ವಿಟರ್ ತನ್ನ ನೇರ ಸಂದೇಶಗಳಿಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಹೊಂದಿಲ್ಲ. 2018 ರ ಟೆಕ್ ಕ್ರಂಚ್ ವರದಿಯ ಪ್ರಕಾರ, ಟ್ವಿಟರ್ ಫೇಸ್‌ಬುಕ್‌ನ ರಹಸ್ಯ ಸಂಭಾಷಣೆಯನ್ನು ಹೋಲುವ ವೈಶಿಷ್ಟ್ಯವನ್ನು ಹೊಂದಲು ಪರೀಕ್ಷೆಗಳನ್ನು ನಡೆಸುತ್ತಿದೆ.

ಎಲ್ಲಾ E2EE ಮೆಸೇಜಿಂಗ್ ಅಪ್ಲಿಕೇಶನ್‌ಗಳು ಒಂದೇ ರೀತಿ ಇರುವುದಿಲ್ಲ. ಟೆಕ್ ಬ್ಲಾಗ್ ಆದ ಟಾಮ್ಸ್ ಗೈಡ್, ಆಂಡ್ರಾಯ್ಡ್ ಅಥವಾ iOS ಆಗಿ ಲಭ್ಯವಿರುವ ವಿವಿಧ E2EE ಅಪ್ಲಿಕೇಶನ್ಗಳನ್ನು ಪಟ್ಟಿ ಮಾಡಿದೆ. ಯುಎಸ್ ಮೂಲದ ಎಂಗಡ್ಜೆಟ್ ಎಂಬ ಟೆಕ್ ನ್ಯೂಸ್ ವೆಬ್‌ಸೈಟ್  2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

ಇದಕ್ಕೂ ಮೊದಲು ವಾಟ್ಸಪ್ಪಿನಲ್ಲಿ, ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು, ಜೂನ್ 15 ರವರೆಗೆ ಭಾರತದಲ್ಲಿ ಲಾಕ್ ಡೌನ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ ಎಂದು ತಪ್ಪಾಗಿ ಸಂದೇಶ ಹರಡಲಾಗಿತ್ತು.


ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...