Homeನಿಜವೋ ಸುಳ್ಳೋFact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

- Advertisement -
- Advertisement -

ಭಾರತ ಸರ್ಕಾರವು ಎಲ್ಲಾ ರೀತಿಯ ಆನ್‌ಲೈನ್ ಮತ್ತು ದೂರವಾಣಿ ಸಂವಹನಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ರಾಜಕೀಯ ಅಥವಾ ಧರ್ಮಕ್ಕೆ ಸಂಬಂಧಿಸಿದ ಸಂದೇಶಗಳನ್ನು ರವಾನಿಸದಂತೆ ಜನರನ್ನು ಕೇಳಿದೆ ಎಂದು ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದ್ದು “ಅಲ್ಟ್ ನ್ಯೂಸ್” ಇದರ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿದೆ.

ವೈರಲ್ ಸಂದೇಶಗಳು ಹೀಗಿವೆ “ನಾಳೆಯಿಂದ ಭಾರತದಲ್ಲಿ ಹೊಸ ಸಂವಹನ ನಿಯಮಗಳಿವೆ. ಎಲ್ಲಾ ಕರೆಗಳನ್ನು ದಾಖಲಿಸಲಾಗುತ್ತದೆ, ಎಲ್ಲಾ ಫೋನ್ ಕರೆ ರೆಕಾರ್ಡಿಂಗ್‌ಗಳನ್ನು ಉಳಿಸಲಾಗತ್ತದೆ, ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಮ್ಮ ಸಾಧನಗಳು ಸಚಿವಾಲಯ ವ್ಯವಸ್ಥೆಗಳಿಗೆ ಸಂಪರ್ಕ ಹೊಂದಿವೆ. ಯಾವುದೇ ಪೋಸ್ಟ್‌ಗಳು ಅಥವಾ ವೀಡಿಯೊಗಳನ್ನು ಫಾರ್ವರ್ಡ್ ಮಾಡಬೇಡಿ, ಸರ್ಕಾರ / ಪ್ರಧಾನಿ ಇತ್ಯಾದಿಗಳ ಬಗ್ಗೆ ರಾಜಕೀಯ / ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನೀವು ಸ್ವೀಕರಿಸುತ್ತೀರಿ. ಯಾವುದೇ ರಾಜಕೀಯ ಮತ್ತು ಧಾರ್ಮಿಕ ಚರ್ಚೆಯಲ್ಲಿ ಯಾವುದೇ ಸಂದೇಶವನ್ನು ಬರೆಯುವುದು ಅಥವಾ ರವಾನಿಸುವುದು ಈಗ ಅಪರಾಧ …. ವಾರಂಟ್ ಇಲ್ಲದೆ ಬಂಧನ …ಇದು ತುಂಬಾ ಗಂಭೀರವಾಗಿದೆ. ಅನಗತ್ಯ ಸಂದೇಶಗಳನ್ನು ಕಳುಹಿಸದಂತೆ ನೋಡಿಕೊಳ್ಳಿ. ಕಾಳಜಿ ವಹಿಸಲು ಈ ಬಗ್ಗೆ ಎಲ್ಲರಿಗೂ ತಿಳಿಸಿ. ನಿಮ್ಮ ಸ್ನೇಹಿತರು ಮತ್ತು ಇತರರಿಗೆ ತಿಳಿಸಿ”

ಈ ಮಾಹಿತಿ ಹರಡುತ್ತಿದ್ದಂತೆ ವಾಟ್ಸಪ್ ಗಳಲ್ಲಿ ಸಂದೇಶವನ್ನು ಕೇವಲ ಅಡ್ಮಿನ್‌ಗಳು ಮಾತ್ರ ಹಾಕುವಂತೆ ಮಾಡಲಾಗಿತ್ತು. ಹಲವರು ಇದು ಸಂವಿಧಾನ ವಿರೋಧಿಯಾದ್ದು ಜನರ ಅಭಿವ್ಯಕ್ತಿಯನ್ನು ಹತ್ತಿಕ್ಕಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲವೆಂದು ವಾದಿಸಿದ್ದರೂ ಸುಳ್ಳು ಸಂದೇಶ ನಿರಂತರವಾಗಿ ಹರಡಲಾಗುತ್ತಿತ್ತು.

ಮಾರ್ಚ್ 24 ರಂದು, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋ “ಅಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ” ಎಂಬ ಸಂದೇಶವನ್ನು ಟ್ವಿಟರ್ ಮೂಲಕ ಹೇಳಿತ್ತು.

ವಾಟ್ಸಾಪ್‌ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ (E2EE) ಎಂಬ ವಿಷಯವಿದೆ, ಇದರರ್ಥ “ನೀವು ಮತ್ತು ನೀವು ಸಂವಹನ ನಡೆಸುತ್ತಿರುವ ವ್ಯಕ್ತಿ ಮಾತ್ರ ಕಳುಹಿಸಿದದನ್ನು ಓದಬಹುದು. ಇದರ ನಡುವೆ ಯಾರೂ ಇರುವುದಿಲ್ಲ, ವಾಟ್ಸಾಪ್ ಕೂಡಾ ಓದುವುದಿಲ್ಲ”. ನೀವು ಸಂದೇಶ ಕಳುಹಿಸಿರುವ ವ್ಯಕ್ತಿ ನಿಮ್ಮ ಸಂಭಾಷಣೆಯ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳದ ಹೊರತು ಹಾಗೂ ಅಥವಾ ನಿಮ್ಮ ಮೊಬೈಲ್ ಸುರಕ್ಷತೆಯಲ್ಲಿ ಉಲ್ಲಂಘನೆಯಾಗದಿದ್ದರೆ E2EE ಸಂಭಾಷಣೆಗಳು ಖಾಸಗಿಯಾಗಿರುತ್ತವೆ.

ಫೇಸ್‌ಬುಕ್ ಮೆಸೆಂಜರ್ ನಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಸಕ್ರಿಯಗೊಳಿಸಿ ಬರುವುದಿಲ್ಲ. ಆದರೆ ಇದು ‘ರಹಸ್ಯ ಸಂಭಾಷಣೆ’ ಎಂಬ ವೈಶಿಷ್ಟ್ಯವನ್ನು ಹೊಂದಿದೆ, ಅದು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ನಂತೆಯೇ ಕೆಲಸ ಮಾಡುತ್ತದೆ. ಅಂತೆಯೇ, ಟ್ವಿಟರ್ ತನ್ನ ನೇರ ಸಂದೇಶಗಳಿಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಹೊಂದಿಲ್ಲ. 2018 ರ ಟೆಕ್ ಕ್ರಂಚ್ ವರದಿಯ ಪ್ರಕಾರ, ಟ್ವಿಟರ್ ಫೇಸ್‌ಬುಕ್‌ನ ರಹಸ್ಯ ಸಂಭಾಷಣೆಯನ್ನು ಹೋಲುವ ವೈಶಿಷ್ಟ್ಯವನ್ನು ಹೊಂದಲು ಪರೀಕ್ಷೆಗಳನ್ನು ನಡೆಸುತ್ತಿದೆ.

ಎಲ್ಲಾ E2EE ಮೆಸೇಜಿಂಗ್ ಅಪ್ಲಿಕೇಶನ್‌ಗಳು ಒಂದೇ ರೀತಿ ಇರುವುದಿಲ್ಲ. ಟೆಕ್ ಬ್ಲಾಗ್ ಆದ ಟಾಮ್ಸ್ ಗೈಡ್, ಆಂಡ್ರಾಯ್ಡ್ ಅಥವಾ iOS ಆಗಿ ಲಭ್ಯವಿರುವ ವಿವಿಧ E2EE ಅಪ್ಲಿಕೇಶನ್ಗಳನ್ನು ಪಟ್ಟಿ ಮಾಡಿದೆ. ಯುಎಸ್ ಮೂಲದ ಎಂಗಡ್ಜೆಟ್ ಎಂಬ ಟೆಕ್ ನ್ಯೂಸ್ ವೆಬ್‌ಸೈಟ್  2019 ರ ವರದಿಯು ಫೇಸ್‌ಬುಕ್ ಮೆಸೆಂಜರ್, ಸಿಗ್ನಲ್, ವಾಟ್ಸಾಪ್ ಮತ್ತು ಟೆಲಿಗ್ರಾಮ್ ನೀಡುವ ಸುರಕ್ಷತೆಯನ್ನು ಹೋಲಿಸಿದಾಗ ನಾಲ್ಕು ಅಪ್ಲಿಕೇಶನ್‌ಗಳಲ್ಲಿ ಸಿಗ್ನಲ್ ಎಂಬ ಆಪ್ ಅತ್ಯುನ್ನತ ಗುಣಮಟ್ಟದ ಭದ್ರತೆಯನ್ನು ಹೊಂದಿದೆ.

ಇದಕ್ಕೂ ಮೊದಲು ವಾಟ್ಸಪ್ಪಿನಲ್ಲಿ, ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು, ಜೂನ್ 15 ರವರೆಗೆ ಭಾರತದಲ್ಲಿ ಲಾಕ್ ಡೌನ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶಿಫಾರಸು ಮಾಡಿದೆ ಎಂದು ತಪ್ಪಾಗಿ ಸಂದೇಶ ಹರಡಲಾಗಿತ್ತು.


ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯ ಪ್ರೋಟೋಕಾಲ್ ಪ್ರಕಾರ ಲಾಕ್‌ಡೌನ್‌ ಜೂನ್‌ವರೆಗೂ ವಿಸ್ತರಣೆಯೆಂಬುದು ಸುಳ್ಳು ಸುದ್ದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...