Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

- Advertisement -
- Advertisement -

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ ಇತ್ತೀಚೆಗೆ ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಆ ಮೂಲಕ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಟೂಲ್ಕಿಟ್ ಅನ್ನು ‘ಎಡಿಟ್’ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು.

ಈ ನಡುವೆ ರೈಲೊಂದರಲ್ಲಿ ಥನ್ಬರ್ಗ್ ಊಟ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಗ್ರೇಟಾ ರೈಲಿನೊಳಗೆ ಆಹಾರವನ್ನು ಸೇವಿಸುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಹೊರಗಡೆ ಪ್ಲಾಟ್‌ಫಾರಂ ಮೇಲೆ ಹಸಿದ ಆಫ್ರಿಕನ್ ಮಕ್ಕಳು ಥನ್‌ಬರ್ಗ್ ಊಟ ಮಾಡುವುದನ್ನು ನೋಡುತ್ತ ನಿಂತಿವೆ. ಟ್ವಿಟರ್ ಬಳಕೆದಾರ @ಬೆಂಬಡೆಪ್ ಈ ಚಿತ್ರವನ್ನು ಪೋಸ್ಟ್ ಮಾಡಿ, “ಭಾರತದ ಈ ವಿರೋಧಿ ಪಡೆಗಳನ್ನು ಕೇಳಿ #AskGretaWhy” ಎಂದು ಬರೆದಿದ್ದಾರೆ. ಸೋಮವಾರದವರೆಗೆ 700 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಟ್ವೀಟ್ ಸಂಗ್ರಹಿಸಿದೆ.

ಟ್ವಿಟರ್ ಬಳಕೆದಾರ ಉಮೇಶ್‌ಸಿಂಗ್ ಎಂಬುವವರು ಇದನ್ನು ಬಹಿರಂಗಪಡಿಸಿದ್ದಕ್ಕಾಗಿ ಝೀ ನ್ಯೂಸ್‌ನ ಮುಖ್ಯ ಸಂಪಾದಕ ಸುಧೀರ್ ಚೌಧರಿಯವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಎರಡು ವಿಭಿನ್ನ ಫೋಟೊಗಳ ಕೊಲ್ಯಾಜ್!

ಆಲ್ಟ್ ನ್ಯೂಸ್ ಗೂಗಲ್‌ನಲ್ಲಿ ಸರಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಸೆಪ್ಟೆಂಬರ್ 27, 2019 ರಂದು ಬ್ರಿಟಿಷ್ ಪತ್ರಿಕೆ ಮೆಟ್ರೊದಲ್ಲಿ ಲೇಖನವೊಂದರಲ್ಲಿ ಈ ಮೂಲ ಫೋಟೋ ಪ್ರಕಟವಾಗಿದೆ. ವೈರಲ್ ಚಿತ್ರಕ್ಕಿಂತ ಭಿನ್ನವಾಗಿ, ಈ ಫೋಟೋ ಕಿಟಕಿಯ ಹೊರಗೆ ಮರಗಳನ್ನು ತೋರಿಸುತ್ತದೆ ಮತ್ತು ಮಕ್ಕಳ ಗುಂಪನ್ನಲ್ಲ. ಆದ್ದರಿಂದ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಚಿತ್ರವನ್ನು ಎಡಿಟ್‌ ಮಾಡಲಾಗಿದೆ ಎಂಬುದು ಸ್ಪಷ್ಟ. ಚಿತ್ರವನ್ನು ಡೆನ್ಮಾರ್ಕ್‌ನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅದರ ಜೊತೆಗಿನ ಲೇಖನವು ಹೇಳುತ್ತದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಪುತ್ರ ಎಡ್ವರ್ಡೊ ಬೋಲ್ಸನಾರೊ ಅವರು ಕೂಡ ಎಡಿಟೆಡ್ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂದು ಅದು ಹೇಳುತ್ತದೆ.

ಥನ್ಬರ್ಗ್ ಸ್ವತಃ ಮೂಲ ಫೋಟೋವನ್ನು ಜನವರಿ 22, 2019 ರಂದು ಪೋಸ್ಟ್ ಮಾಡಿದ್ದರು. ಇನ್ನು ಆ ಬಡ ಮಕ್ಕಳ ಛಾಯಾಚಿತ್ರವು ಆಗಸ್ಟ್ 23, 2007 ರ ರಾಯಿಟರ್ಸ್ ಲೇಖನದಲ್ಲಿ ಕಂಡುಬಂದಿದೆ. ಇದನ್ನು ರಾಯಿಟರ್ಸ್ ಛಾಯಾಗ್ರಾಹಕ ಸ್ಟೆಫನಿ ಹ್ಯಾನ್ಕಾಕ್ ಆಫ್ರಿಕಾದಲ್ಲಿ ಚಿತ್ರೀಕರಿಸಿದ್ದಾರೆ. ಲೇಖನವು ಮಧ್ಯ ಆಫ್ರಿಕಾದಲ್ಲಿ ಆಂತರಿಕ ಯುದ್ಧದ ಸಮಯದಲ್ಲಿ ಹಳ್ಳಿಗಳನ್ನು ಬಿಟ್ಟು ಕಾಡುಗಳಿಗೆ ತೆರಳಿದ ಜನರ ಬಗ್ಗೆ ವಿವರಿಸುತ್ತದೆ.

ಅಲ್ಟ್ ನ್ಯೂಸ್‌ ಫ್ಯಾಕ್ಟ್‌ಚೆಕ್ ಲೇಖನದಲ್ಲಿ ಥನ್‌ಬರ್ಗ್‌ಳ ಫೋಟೋವನ್ನು ವಿವಿಧ ರೀತಿಯಲ್ಲಿ ಎಡಿಟ್ ಮಾಡಿ, 2019 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ರೈಲು ಪ್ರಯಾಣದ ಸಮಯದಲ್ಲಿ ಗ್ರೆಟಾ ಥನ್‌ಬರ್ಗ್ ಆಹಾರ ಹೊಂದಿರುವ ಫೋಟೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿದೆ. ಈ ಚಿತ್ರವನ್ನು 2019 ರಿಂದ ಎಡಿಟ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

ದಿಶಾ ಮತ್ತು 5-7 ಲಕ್ಷ ಲಾಯರ್ ಫೀಸು!

ದಿಶಾ ರವಿಯವರ ಬಗ್ಗೆಯೂ ಇಂತಹ ಸುಳ್ಳು ಪ್ರಚಾರ ನಡೆದಿವೆ. ಅವರು ಕ್ರಿಶ್ಚಿಯನ್ (ಆಕಸ್ಮಾತ್ ಆಗಿದ್ದರೆ ಅದರಲ್ಲೇನು ತಪ್ಪು?) ಎಂದು ಸುಳ್ಳು ಹರಡಲಾಗಿತ್ತು. ವಕೀಲ ಅಖಿಲ್ ಸಿಬಲ್ ಅವರಿಗೆ ಒಮ್ಮೆ ಕೋರ್ಟಿಗೆ ಹಾಜರಾಗಲು ದಿಶಾ 5-7 ಲಕ್ಷ ರೂ ಫೀಸು ಕೊಡುತ್ತಿದ್ದಾರೆ, ಯಾರು ಈ ಫೀಸ್ ತುಂಬುತ್ತಿರುವುದು ಎಂದೆಲ್ಲ ಸುಲ್ಳು ಹರಡಲಾಗಿತ್ತು. ಆದರೆ ಸತ್ಯ ಏನೆಂದರೆ, ಅಖಿಲ್ ಸಿಬಲ್ ದಿಶಾ ವಕೀಲೆ ವೃಂದಾ ಭಂಡಾರಿ ಅವರ ಮನವಿಯ ಮೇರೆಗೆ ಮೀಡಿಯಾ ವರ್ತನೆಗೆ ಸಂಬಂಧಿಸಿದ ಎರಡು ವಿಚಾರಣೆಗಳಿಗೆ ಮಾತ್ರ ಹಾಜರಾಗಿದ್ದು, ಇದಕ್ಕಾಗಿ ಅವರು ಯಾವುದೇ ಫೀಸು ಪಡೆದಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...