Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

- Advertisement -
- Advertisement -

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ ಇತ್ತೀಚೆಗೆ ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಆ ಮೂಲಕ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಟೂಲ್ಕಿಟ್ ಅನ್ನು ‘ಎಡಿಟ್’ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು.

ಈ ನಡುವೆ ರೈಲೊಂದರಲ್ಲಿ ಥನ್ಬರ್ಗ್ ಊಟ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಗ್ರೇಟಾ ರೈಲಿನೊಳಗೆ ಆಹಾರವನ್ನು ಸೇವಿಸುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಹೊರಗಡೆ ಪ್ಲಾಟ್‌ಫಾರಂ ಮೇಲೆ ಹಸಿದ ಆಫ್ರಿಕನ್ ಮಕ್ಕಳು ಥನ್‌ಬರ್ಗ್ ಊಟ ಮಾಡುವುದನ್ನು ನೋಡುತ್ತ ನಿಂತಿವೆ. ಟ್ವಿಟರ್ ಬಳಕೆದಾರ @ಬೆಂಬಡೆಪ್ ಈ ಚಿತ್ರವನ್ನು ಪೋಸ್ಟ್ ಮಾಡಿ, “ಭಾರತದ ಈ ವಿರೋಧಿ ಪಡೆಗಳನ್ನು ಕೇಳಿ #AskGretaWhy” ಎಂದು ಬರೆದಿದ್ದಾರೆ. ಸೋಮವಾರದವರೆಗೆ 700 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಟ್ವೀಟ್ ಸಂಗ್ರಹಿಸಿದೆ.

ಟ್ವಿಟರ್ ಬಳಕೆದಾರ ಉಮೇಶ್‌ಸಿಂಗ್ ಎಂಬುವವರು ಇದನ್ನು ಬಹಿರಂಗಪಡಿಸಿದ್ದಕ್ಕಾಗಿ ಝೀ ನ್ಯೂಸ್‌ನ ಮುಖ್ಯ ಸಂಪಾದಕ ಸುಧೀರ್ ಚೌಧರಿಯವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಎರಡು ವಿಭಿನ್ನ ಫೋಟೊಗಳ ಕೊಲ್ಯಾಜ್!

ಆಲ್ಟ್ ನ್ಯೂಸ್ ಗೂಗಲ್‌ನಲ್ಲಿ ಸರಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಸೆಪ್ಟೆಂಬರ್ 27, 2019 ರಂದು ಬ್ರಿಟಿಷ್ ಪತ್ರಿಕೆ ಮೆಟ್ರೊದಲ್ಲಿ ಲೇಖನವೊಂದರಲ್ಲಿ ಈ ಮೂಲ ಫೋಟೋ ಪ್ರಕಟವಾಗಿದೆ. ವೈರಲ್ ಚಿತ್ರಕ್ಕಿಂತ ಭಿನ್ನವಾಗಿ, ಈ ಫೋಟೋ ಕಿಟಕಿಯ ಹೊರಗೆ ಮರಗಳನ್ನು ತೋರಿಸುತ್ತದೆ ಮತ್ತು ಮಕ್ಕಳ ಗುಂಪನ್ನಲ್ಲ. ಆದ್ದರಿಂದ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಚಿತ್ರವನ್ನು ಎಡಿಟ್‌ ಮಾಡಲಾಗಿದೆ ಎಂಬುದು ಸ್ಪಷ್ಟ. ಚಿತ್ರವನ್ನು ಡೆನ್ಮಾರ್ಕ್‌ನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅದರ ಜೊತೆಗಿನ ಲೇಖನವು ಹೇಳುತ್ತದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಪುತ್ರ ಎಡ್ವರ್ಡೊ ಬೋಲ್ಸನಾರೊ ಅವರು ಕೂಡ ಎಡಿಟೆಡ್ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂದು ಅದು ಹೇಳುತ್ತದೆ.

ಥನ್ಬರ್ಗ್ ಸ್ವತಃ ಮೂಲ ಫೋಟೋವನ್ನು ಜನವರಿ 22, 2019 ರಂದು ಪೋಸ್ಟ್ ಮಾಡಿದ್ದರು. ಇನ್ನು ಆ ಬಡ ಮಕ್ಕಳ ಛಾಯಾಚಿತ್ರವು ಆಗಸ್ಟ್ 23, 2007 ರ ರಾಯಿಟರ್ಸ್ ಲೇಖನದಲ್ಲಿ ಕಂಡುಬಂದಿದೆ. ಇದನ್ನು ರಾಯಿಟರ್ಸ್ ಛಾಯಾಗ್ರಾಹಕ ಸ್ಟೆಫನಿ ಹ್ಯಾನ್ಕಾಕ್ ಆಫ್ರಿಕಾದಲ್ಲಿ ಚಿತ್ರೀಕರಿಸಿದ್ದಾರೆ. ಲೇಖನವು ಮಧ್ಯ ಆಫ್ರಿಕಾದಲ್ಲಿ ಆಂತರಿಕ ಯುದ್ಧದ ಸಮಯದಲ್ಲಿ ಹಳ್ಳಿಗಳನ್ನು ಬಿಟ್ಟು ಕಾಡುಗಳಿಗೆ ತೆರಳಿದ ಜನರ ಬಗ್ಗೆ ವಿವರಿಸುತ್ತದೆ.

ಅಲ್ಟ್ ನ್ಯೂಸ್‌ ಫ್ಯಾಕ್ಟ್‌ಚೆಕ್ ಲೇಖನದಲ್ಲಿ ಥನ್‌ಬರ್ಗ್‌ಳ ಫೋಟೋವನ್ನು ವಿವಿಧ ರೀತಿಯಲ್ಲಿ ಎಡಿಟ್ ಮಾಡಿ, 2019 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ರೈಲು ಪ್ರಯಾಣದ ಸಮಯದಲ್ಲಿ ಗ್ರೆಟಾ ಥನ್‌ಬರ್ಗ್ ಆಹಾರ ಹೊಂದಿರುವ ಫೋಟೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿದೆ. ಈ ಚಿತ್ರವನ್ನು 2019 ರಿಂದ ಎಡಿಟ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

ದಿಶಾ ಮತ್ತು 5-7 ಲಕ್ಷ ಲಾಯರ್ ಫೀಸು!

ದಿಶಾ ರವಿಯವರ ಬಗ್ಗೆಯೂ ಇಂತಹ ಸುಳ್ಳು ಪ್ರಚಾರ ನಡೆದಿವೆ. ಅವರು ಕ್ರಿಶ್ಚಿಯನ್ (ಆಕಸ್ಮಾತ್ ಆಗಿದ್ದರೆ ಅದರಲ್ಲೇನು ತಪ್ಪು?) ಎಂದು ಸುಳ್ಳು ಹರಡಲಾಗಿತ್ತು. ವಕೀಲ ಅಖಿಲ್ ಸಿಬಲ್ ಅವರಿಗೆ ಒಮ್ಮೆ ಕೋರ್ಟಿಗೆ ಹಾಜರಾಗಲು ದಿಶಾ 5-7 ಲಕ್ಷ ರೂ ಫೀಸು ಕೊಡುತ್ತಿದ್ದಾರೆ, ಯಾರು ಈ ಫೀಸ್ ತುಂಬುತ್ತಿರುವುದು ಎಂದೆಲ್ಲ ಸುಲ್ಳು ಹರಡಲಾಗಿತ್ತು. ಆದರೆ ಸತ್ಯ ಏನೆಂದರೆ, ಅಖಿಲ್ ಸಿಬಲ್ ದಿಶಾ ವಕೀಲೆ ವೃಂದಾ ಭಂಡಾರಿ ಅವರ ಮನವಿಯ ಮೇರೆಗೆ ಮೀಡಿಯಾ ವರ್ತನೆಗೆ ಸಂಬಂಧಿಸಿದ ಎರಡು ವಿಚಾರಣೆಗಳಿಗೆ ಮಾತ್ರ ಹಾಜರಾಗಿದ್ದು, ಇದಕ್ಕಾಗಿ ಅವರು ಯಾವುದೇ ಫೀಸು ಪಡೆದಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....