Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

- Advertisement -
- Advertisement -

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ ಇತ್ತೀಚೆಗೆ ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಆ ಮೂಲಕ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಟೂಲ್ಕಿಟ್ ಅನ್ನು ‘ಎಡಿಟ್’ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು.

ಈ ನಡುವೆ ರೈಲೊಂದರಲ್ಲಿ ಥನ್ಬರ್ಗ್ ಊಟ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಗ್ರೇಟಾ ರೈಲಿನೊಳಗೆ ಆಹಾರವನ್ನು ಸೇವಿಸುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಹೊರಗಡೆ ಪ್ಲಾಟ್‌ಫಾರಂ ಮೇಲೆ ಹಸಿದ ಆಫ್ರಿಕನ್ ಮಕ್ಕಳು ಥನ್‌ಬರ್ಗ್ ಊಟ ಮಾಡುವುದನ್ನು ನೋಡುತ್ತ ನಿಂತಿವೆ. ಟ್ವಿಟರ್ ಬಳಕೆದಾರ @ಬೆಂಬಡೆಪ್ ಈ ಚಿತ್ರವನ್ನು ಪೋಸ್ಟ್ ಮಾಡಿ, “ಭಾರತದ ಈ ವಿರೋಧಿ ಪಡೆಗಳನ್ನು ಕೇಳಿ #AskGretaWhy” ಎಂದು ಬರೆದಿದ್ದಾರೆ. ಸೋಮವಾರದವರೆಗೆ 700 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಟ್ವೀಟ್ ಸಂಗ್ರಹಿಸಿದೆ.

ಟ್ವಿಟರ್ ಬಳಕೆದಾರ ಉಮೇಶ್‌ಸಿಂಗ್ ಎಂಬುವವರು ಇದನ್ನು ಬಹಿರಂಗಪಡಿಸಿದ್ದಕ್ಕಾಗಿ ಝೀ ನ್ಯೂಸ್‌ನ ಮುಖ್ಯ ಸಂಪಾದಕ ಸುಧೀರ್ ಚೌಧರಿಯವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಎರಡು ವಿಭಿನ್ನ ಫೋಟೊಗಳ ಕೊಲ್ಯಾಜ್!

ಆಲ್ಟ್ ನ್ಯೂಸ್ ಗೂಗಲ್‌ನಲ್ಲಿ ಸರಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಸೆಪ್ಟೆಂಬರ್ 27, 2019 ರಂದು ಬ್ರಿಟಿಷ್ ಪತ್ರಿಕೆ ಮೆಟ್ರೊದಲ್ಲಿ ಲೇಖನವೊಂದರಲ್ಲಿ ಈ ಮೂಲ ಫೋಟೋ ಪ್ರಕಟವಾಗಿದೆ. ವೈರಲ್ ಚಿತ್ರಕ್ಕಿಂತ ಭಿನ್ನವಾಗಿ, ಈ ಫೋಟೋ ಕಿಟಕಿಯ ಹೊರಗೆ ಮರಗಳನ್ನು ತೋರಿಸುತ್ತದೆ ಮತ್ತು ಮಕ್ಕಳ ಗುಂಪನ್ನಲ್ಲ. ಆದ್ದರಿಂದ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಚಿತ್ರವನ್ನು ಎಡಿಟ್‌ ಮಾಡಲಾಗಿದೆ ಎಂಬುದು ಸ್ಪಷ್ಟ. ಚಿತ್ರವನ್ನು ಡೆನ್ಮಾರ್ಕ್‌ನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅದರ ಜೊತೆಗಿನ ಲೇಖನವು ಹೇಳುತ್ತದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಪುತ್ರ ಎಡ್ವರ್ಡೊ ಬೋಲ್ಸನಾರೊ ಅವರು ಕೂಡ ಎಡಿಟೆಡ್ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂದು ಅದು ಹೇಳುತ್ತದೆ.

ಥನ್ಬರ್ಗ್ ಸ್ವತಃ ಮೂಲ ಫೋಟೋವನ್ನು ಜನವರಿ 22, 2019 ರಂದು ಪೋಸ್ಟ್ ಮಾಡಿದ್ದರು. ಇನ್ನು ಆ ಬಡ ಮಕ್ಕಳ ಛಾಯಾಚಿತ್ರವು ಆಗಸ್ಟ್ 23, 2007 ರ ರಾಯಿಟರ್ಸ್ ಲೇಖನದಲ್ಲಿ ಕಂಡುಬಂದಿದೆ. ಇದನ್ನು ರಾಯಿಟರ್ಸ್ ಛಾಯಾಗ್ರಾಹಕ ಸ್ಟೆಫನಿ ಹ್ಯಾನ್ಕಾಕ್ ಆಫ್ರಿಕಾದಲ್ಲಿ ಚಿತ್ರೀಕರಿಸಿದ್ದಾರೆ. ಲೇಖನವು ಮಧ್ಯ ಆಫ್ರಿಕಾದಲ್ಲಿ ಆಂತರಿಕ ಯುದ್ಧದ ಸಮಯದಲ್ಲಿ ಹಳ್ಳಿಗಳನ್ನು ಬಿಟ್ಟು ಕಾಡುಗಳಿಗೆ ತೆರಳಿದ ಜನರ ಬಗ್ಗೆ ವಿವರಿಸುತ್ತದೆ.

ಅಲ್ಟ್ ನ್ಯೂಸ್‌ ಫ್ಯಾಕ್ಟ್‌ಚೆಕ್ ಲೇಖನದಲ್ಲಿ ಥನ್‌ಬರ್ಗ್‌ಳ ಫೋಟೋವನ್ನು ವಿವಿಧ ರೀತಿಯಲ್ಲಿ ಎಡಿಟ್ ಮಾಡಿ, 2019 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ರೈಲು ಪ್ರಯಾಣದ ಸಮಯದಲ್ಲಿ ಗ್ರೆಟಾ ಥನ್‌ಬರ್ಗ್ ಆಹಾರ ಹೊಂದಿರುವ ಫೋಟೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿದೆ. ಈ ಚಿತ್ರವನ್ನು 2019 ರಿಂದ ಎಡಿಟ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

ದಿಶಾ ಮತ್ತು 5-7 ಲಕ್ಷ ಲಾಯರ್ ಫೀಸು!

ದಿಶಾ ರವಿಯವರ ಬಗ್ಗೆಯೂ ಇಂತಹ ಸುಳ್ಳು ಪ್ರಚಾರ ನಡೆದಿವೆ. ಅವರು ಕ್ರಿಶ್ಚಿಯನ್ (ಆಕಸ್ಮಾತ್ ಆಗಿದ್ದರೆ ಅದರಲ್ಲೇನು ತಪ್ಪು?) ಎಂದು ಸುಳ್ಳು ಹರಡಲಾಗಿತ್ತು. ವಕೀಲ ಅಖಿಲ್ ಸಿಬಲ್ ಅವರಿಗೆ ಒಮ್ಮೆ ಕೋರ್ಟಿಗೆ ಹಾಜರಾಗಲು ದಿಶಾ 5-7 ಲಕ್ಷ ರೂ ಫೀಸು ಕೊಡುತ್ತಿದ್ದಾರೆ, ಯಾರು ಈ ಫೀಸ್ ತುಂಬುತ್ತಿರುವುದು ಎಂದೆಲ್ಲ ಸುಲ್ಳು ಹರಡಲಾಗಿತ್ತು. ಆದರೆ ಸತ್ಯ ಏನೆಂದರೆ, ಅಖಿಲ್ ಸಿಬಲ್ ದಿಶಾ ವಕೀಲೆ ವೃಂದಾ ಭಂಡಾರಿ ಅವರ ಮನವಿಯ ಮೇರೆಗೆ ಮೀಡಿಯಾ ವರ್ತನೆಗೆ ಸಂಬಂಧಿಸಿದ ಎರಡು ವಿಚಾರಣೆಗಳಿಗೆ ಮಾತ್ರ ಹಾಜರಾಗಿದ್ದು, ಇದಕ್ಕಾಗಿ ಅವರು ಯಾವುದೇ ಫೀಸು ಪಡೆದಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...