Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

- Advertisement -
- Advertisement -

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ ಇತ್ತೀಚೆಗೆ ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಆ ಮೂಲಕ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಟೂಲ್ಕಿಟ್ ಅನ್ನು ‘ಎಡಿಟ್’ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು.

ಈ ನಡುವೆ ರೈಲೊಂದರಲ್ಲಿ ಥನ್ಬರ್ಗ್ ಊಟ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಗ್ರೇಟಾ ರೈಲಿನೊಳಗೆ ಆಹಾರವನ್ನು ಸೇವಿಸುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಹೊರಗಡೆ ಪ್ಲಾಟ್‌ಫಾರಂ ಮೇಲೆ ಹಸಿದ ಆಫ್ರಿಕನ್ ಮಕ್ಕಳು ಥನ್‌ಬರ್ಗ್ ಊಟ ಮಾಡುವುದನ್ನು ನೋಡುತ್ತ ನಿಂತಿವೆ. ಟ್ವಿಟರ್ ಬಳಕೆದಾರ @ಬೆಂಬಡೆಪ್ ಈ ಚಿತ್ರವನ್ನು ಪೋಸ್ಟ್ ಮಾಡಿ, “ಭಾರತದ ಈ ವಿರೋಧಿ ಪಡೆಗಳನ್ನು ಕೇಳಿ #AskGretaWhy” ಎಂದು ಬರೆದಿದ್ದಾರೆ. ಸೋಮವಾರದವರೆಗೆ 700 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಟ್ವೀಟ್ ಸಂಗ್ರಹಿಸಿದೆ.

ಟ್ವಿಟರ್ ಬಳಕೆದಾರ ಉಮೇಶ್‌ಸಿಂಗ್ ಎಂಬುವವರು ಇದನ್ನು ಬಹಿರಂಗಪಡಿಸಿದ್ದಕ್ಕಾಗಿ ಝೀ ನ್ಯೂಸ್‌ನ ಮುಖ್ಯ ಸಂಪಾದಕ ಸುಧೀರ್ ಚೌಧರಿಯವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಎರಡು ವಿಭಿನ್ನ ಫೋಟೊಗಳ ಕೊಲ್ಯಾಜ್!

ಆಲ್ಟ್ ನ್ಯೂಸ್ ಗೂಗಲ್‌ನಲ್ಲಿ ಸರಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಸೆಪ್ಟೆಂಬರ್ 27, 2019 ರಂದು ಬ್ರಿಟಿಷ್ ಪತ್ರಿಕೆ ಮೆಟ್ರೊದಲ್ಲಿ ಲೇಖನವೊಂದರಲ್ಲಿ ಈ ಮೂಲ ಫೋಟೋ ಪ್ರಕಟವಾಗಿದೆ. ವೈರಲ್ ಚಿತ್ರಕ್ಕಿಂತ ಭಿನ್ನವಾಗಿ, ಈ ಫೋಟೋ ಕಿಟಕಿಯ ಹೊರಗೆ ಮರಗಳನ್ನು ತೋರಿಸುತ್ತದೆ ಮತ್ತು ಮಕ್ಕಳ ಗುಂಪನ್ನಲ್ಲ. ಆದ್ದರಿಂದ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಚಿತ್ರವನ್ನು ಎಡಿಟ್‌ ಮಾಡಲಾಗಿದೆ ಎಂಬುದು ಸ್ಪಷ್ಟ. ಚಿತ್ರವನ್ನು ಡೆನ್ಮಾರ್ಕ್‌ನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅದರ ಜೊತೆಗಿನ ಲೇಖನವು ಹೇಳುತ್ತದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಪುತ್ರ ಎಡ್ವರ್ಡೊ ಬೋಲ್ಸನಾರೊ ಅವರು ಕೂಡ ಎಡಿಟೆಡ್ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂದು ಅದು ಹೇಳುತ್ತದೆ.

ಥನ್ಬರ್ಗ್ ಸ್ವತಃ ಮೂಲ ಫೋಟೋವನ್ನು ಜನವರಿ 22, 2019 ರಂದು ಪೋಸ್ಟ್ ಮಾಡಿದ್ದರು. ಇನ್ನು ಆ ಬಡ ಮಕ್ಕಳ ಛಾಯಾಚಿತ್ರವು ಆಗಸ್ಟ್ 23, 2007 ರ ರಾಯಿಟರ್ಸ್ ಲೇಖನದಲ್ಲಿ ಕಂಡುಬಂದಿದೆ. ಇದನ್ನು ರಾಯಿಟರ್ಸ್ ಛಾಯಾಗ್ರಾಹಕ ಸ್ಟೆಫನಿ ಹ್ಯಾನ್ಕಾಕ್ ಆಫ್ರಿಕಾದಲ್ಲಿ ಚಿತ್ರೀಕರಿಸಿದ್ದಾರೆ. ಲೇಖನವು ಮಧ್ಯ ಆಫ್ರಿಕಾದಲ್ಲಿ ಆಂತರಿಕ ಯುದ್ಧದ ಸಮಯದಲ್ಲಿ ಹಳ್ಳಿಗಳನ್ನು ಬಿಟ್ಟು ಕಾಡುಗಳಿಗೆ ತೆರಳಿದ ಜನರ ಬಗ್ಗೆ ವಿವರಿಸುತ್ತದೆ.

ಅಲ್ಟ್ ನ್ಯೂಸ್‌ ಫ್ಯಾಕ್ಟ್‌ಚೆಕ್ ಲೇಖನದಲ್ಲಿ ಥನ್‌ಬರ್ಗ್‌ಳ ಫೋಟೋವನ್ನು ವಿವಿಧ ರೀತಿಯಲ್ಲಿ ಎಡಿಟ್ ಮಾಡಿ, 2019 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ರೈಲು ಪ್ರಯಾಣದ ಸಮಯದಲ್ಲಿ ಗ್ರೆಟಾ ಥನ್‌ಬರ್ಗ್ ಆಹಾರ ಹೊಂದಿರುವ ಫೋಟೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿದೆ. ಈ ಚಿತ್ರವನ್ನು 2019 ರಿಂದ ಎಡಿಟ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

ದಿಶಾ ಮತ್ತು 5-7 ಲಕ್ಷ ಲಾಯರ್ ಫೀಸು!

ದಿಶಾ ರವಿಯವರ ಬಗ್ಗೆಯೂ ಇಂತಹ ಸುಳ್ಳು ಪ್ರಚಾರ ನಡೆದಿವೆ. ಅವರು ಕ್ರಿಶ್ಚಿಯನ್ (ಆಕಸ್ಮಾತ್ ಆಗಿದ್ದರೆ ಅದರಲ್ಲೇನು ತಪ್ಪು?) ಎಂದು ಸುಳ್ಳು ಹರಡಲಾಗಿತ್ತು. ವಕೀಲ ಅಖಿಲ್ ಸಿಬಲ್ ಅವರಿಗೆ ಒಮ್ಮೆ ಕೋರ್ಟಿಗೆ ಹಾಜರಾಗಲು ದಿಶಾ 5-7 ಲಕ್ಷ ರೂ ಫೀಸು ಕೊಡುತ್ತಿದ್ದಾರೆ, ಯಾರು ಈ ಫೀಸ್ ತುಂಬುತ್ತಿರುವುದು ಎಂದೆಲ್ಲ ಸುಲ್ಳು ಹರಡಲಾಗಿತ್ತು. ಆದರೆ ಸತ್ಯ ಏನೆಂದರೆ, ಅಖಿಲ್ ಸಿಬಲ್ ದಿಶಾ ವಕೀಲೆ ವೃಂದಾ ಭಂಡಾರಿ ಅವರ ಮನವಿಯ ಮೇರೆಗೆ ಮೀಡಿಯಾ ವರ್ತನೆಗೆ ಸಂಬಂಧಿಸಿದ ಎರಡು ವಿಚಾರಣೆಗಳಿಗೆ ಮಾತ್ರ ಹಾಜರಾಗಿದ್ದು, ಇದಕ್ಕಾಗಿ ಅವರು ಯಾವುದೇ ಫೀಸು ಪಡೆದಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...