Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ 50 ಮತ್ತು 15 ನ್ನು ಕೂಡಿಸಿದರೆ 73 ಆಗುತ್ತದೆ ಎಂದು
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ವಿಡಿಯೋ ಹಂಚಿಕೊಂಡಿದ್ದು, ರಾಹುಲ್‌ ಗಾಂಧಿಯವರು ದೊಡ್ಡ ನಾಯಕ ಎಂದು ಹೇಳಲಾಗುತ್ತದೆ. ಆದರೆ, ಅವರು ದಡ್ಡ ಏನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ಬಿಂಬಿಸಲು ಪ್ರಯತ್ನಿಸಿದ್ದಾರೆ.

ಫ್ಯಾಕ್ಟ್‌ಚೆಕ್‌ : ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ. ಇದಕ್ಕಾಗಿ ನಾವು ರಾಹುಲ್ ಗಾಂಧಿಯವರ ಇತ್ತೀಚಿನ ಭಾಷಣಗಳ ವಿಡಿಯೋ ಹುಡುಕಿದ್ದೇವೆ. ಈ ವೇಳೆ ನಮಗೆ, ‘ಭಾರತ್‌ ಜೋಡೋ ನ್ಯಾಯ ಯಾತ್ರೆ’ಯ ಸಂದರ್ಭದ ವಿಡಿಯೋವೊಂದು ಲಭ್ಯವಾಗಿದೆ. ಯೂಟ್ಯೂಬ್‌ನಲ್ಲಿ ಇರುವ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋದಲ್ಲಿ ಅವರು ತಪ್ಪು ಲೆಕ್ಕ ಹೇಳಿರುವುದು ಕಂಡು ಬಂದಿಲ್ಲ. ಹಾಗಾಗಿ, ಇದು ಎಡಿಟೆಡ್ ವಿಡಿಯೋ ಎಂಬುವುದು ಖಚಿತವಾಗಿದೆ.

ವಿಡಿಯೋದ ಯೂಟ್ಯೂಬ್ ಲಿಂಕ್ ಇಲ್ಲಿದೆ 

ಫೆ.8ರಂದು ಭಾರತ್ ಜೋಡೋ ನ್ಯಾಯ ಯಾತ್ರೆಯ ಅಂಗವಾಗಿ ಒಡಿಶಾದಲ್ಲಿ ಬುಡಕಟ್ಟು ಜನರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಮತ್ತು ಮೀಸಲಾತಿ ಪಾಲನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಅದರಲ್ಲಿ ಅವರು 50, 15 ಮತ್ತು 8 ಒಟ್ಟಾರೆಯಾಗಿ 73% ಆಗುತ್ತದೆ ಎಂದು ಹೇಳಿದ್ದಾರೆ. ಅಂದರೆ, ಇಲ್ಲಿ ರಾಹುಲ್‌ ಗಾಂಧಿ ಅವರು ಶೇಕಡಾವಾರು ಲೆಕ್ಕವನ್ನು ಹೇಳಿದ್ದಾರೆಯೇ ಹೊರತು, ಅಂಕಿ ಅಂಶಗಳನ್ನು ಕೂಡಿಸಿ ಹೇಳಿದ್ಧಲ್ಲ ಎಂಬುವುದು ಖಚಿತ.

ರಾಹುಲ್ ಗಾಂಧಿಯವರ ಭಾಷಣವನ್ನು ಕಾಂಗ್ರೆಸ್ ಫೆ.8ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಅದು ಹೀಗಿದೆ.. “ಪತ್ರಕರ್ತರೊಬ್ಬರು ನನ್ನನ್ನು ಕೇಳಿದರು, ರಾಹುಲ್ ಜೀ ನೀವು ಜಾತಿ ಗಣತಿ ಮತ್ತು ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದೀರಿ. ಇದು ದೇಶವನ್ನು ವಿಭಜಿಸುತ್ತಿಲ್ಲವೇ?. ನಾನು ಅವರಿಗೆ ಪ್ರತಿಕ್ರಿಯೆಯಾಗಿ ಕೇಳಿದೆ, ಮಾಧ್ಯಮದ ಕ್ಷೇತ್ರದಲ್ಲಿ ಹಿಂದುಳಿದ, ದಲಿತ, ಬುಡಕಟ್ಟು ವರ್ಗದ ಎಷ್ಟು ಜನರು ಮಾಲೀಕರಾಗಿದ್ದಾರೆ? ಎಂದು. ಅವರು ಮೌನವಾದರು. ದೇಶದಲ್ಲಿ ಸುಮಾರು 50 ಶೇ. ಒಬಿಸಿಗಳು, 15 ಶೇ. ದಲಿತರು ಮತ್ತು 8 ಶೇ. ಆದಿವಾಸಿಗಳು ಇದ್ದಾರೆ, ಇದು ಒಟ್ಟು 73 ಶೇ. ಆಗಿದೆ. ಅಂದರೆ ಶೇ.73 ರಷ್ಟು ಜನರಿಗೆ ಏನೂ ಸಿಗುತ್ತಿಲ್ಲ ಎಂದಲ್ಲವೇ? ಹಾಗಾದರೆ ಭಾರತ ಹೇಗೆ ಒಗ್ಗಟ್ಟಾಗುತ್ತದೆ? ಎಂದು ನಾನು ಕೇಳಿದೆ.”

ಕಾಂಗ್ರೆಸ್‌ ಹಾಕಿರುವ ಈ ಪೋಸ್ಟ್‌ನಲ್ಲಿ ಶೇಖಡವಾರು ಲೆಕ್ಕದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಮತ್ತು ಮೀಸಲಾತಿ ಕುರಿತು ರಾಹುಲ್ ನೀಡಿರುವ ಹೇಳಿಕೆಯನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : Fact Check: ‘ದಿಲ್ಲಿ ಚಲೋ’ ಪ್ರತಿಭಟನಾ ನಿರತ ರೈತರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...