Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...