Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...